ಭಾರತ- ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್ಗೆ ತೆರಳುತ್ತಿದ್ದಾಗ ಪ್ರೇಕ್ಷಕರು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಅಭಿಮಾನಿಗಳ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತೊಡಿಸಿದ್ದು, ಇದು ಉತ್ತಮ ನಡೆಯಲ್ಲ ಎಂದಿದು ಕಿಡಿಕಾರಿದ್ದಾರೆ.
ಹೌದು, ಈ ಕುರಿತು X ಟ್ವೀಟ್ ಮಾಡಿರುವ ಉದಯನಿಧಿ ಸ್ಟಾಲಿನ್, “ತನ್ನ ಕ್ರೀಡಾ ಮನೋಭಾವ ಮತ್ತು ಆತಿಥ್ಯಕ್ಕೆ ಭಾರತವು ಬಹಳ ಹಿಂದಿನಿಂದಲೂ ಹೆಸರುವಾಸಿಯಾಗಿದೆ. ಆದರೆ, ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಆಟಗಾರರ ಮುಂದೆ ಮಾಡಿದ್ದು ಸ್ವೀಕಾರಾರ್ಹ ವರ್ತನೆಯಲ್ಲ. ಕ್ರೀಡೆಗಳು ಎಲ್ಲಾ ಎಲ್ಲೆಯನ್ನು ಮೀರಿ ಏಕೀಕರಣಗೊಳ್ಳಬೇಕು. ಕ್ರೀಡೆಯನ್ನು ದೇಶಗಳ ನಿಜವಾದ ಸಹೋದರತ್ವವನ್ನು ಬೆಳೆಸಲು ಬಳಸಬೇಕು. ದ್ವೇಷವನ್ನು ಹರಡುವ ಸಾಧನವಾಗಿ ಬಳಸುವುದು ಖಂಡನೀಯ” ಎಂದು ಬರೆದಿದ್ದಾರೆ.

ಪಾಕಿಸ್ತಾನದ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಮುಹಮ್ಮದ್ ರಿಜ್ವಾನ್ ಅವರು 69 ಎಸೆತಗಳಲ್ಲಿ 49 ರನ್ ಗಳಿಸಿ ಔಟಾದರು. ನಂತರ ಡ್ರೆಸ್ಸಿಂಗ್ ರೂಮಿಗೆ ಹಿಂತಿರುಗುತ್ತಿದ್ದಾಗ, ಪ್ರೇಕ್ಷಕರು ಅವರ ಮುಂದೆ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ವಿರೋದ ವ್ಯಕ್ತವಾಗಿದೆ.