• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸರ್ವಪಕ್ಷ ಸಭೆ: ಅಫ್ಘಾನ್ ಕುರಿತು “ಕಾದು ನೋಡುವ ನೀತಿ” ಅನುಸರಿಸಲು ಭಾರತದ ನಿರ್ಧಾರ

Shivakumar A by Shivakumar A
August 27, 2021
in ದೇಶ
0
ಸರ್ವಪಕ್ಷ ಸಭೆ: ಅಫ್ಘಾನ್ ಕುರಿತು “ಕಾದು ನೋಡುವ ನೀತಿ” ಅನುಸರಿಸಲು ಭಾರತದ ನಿರ್ಧಾರ
Share on WhatsAppShare on FacebookShare on Telegram

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತವು ಕಾದು ನೋಡುವ ನೀತಿಯನ್ನು ಅನುಸರಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರೊಂದಿಗೆ, ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಅಲ್ಲಿಂದ ರಕ್ಷಿಸಲು ನಡೆಸುವ ಕಾರ್ಯಾಚರಣೆಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು, ಎಂದು ವಿದೇಶಾಂಗ ಇಲಾಖೆ ಸಚಿವ ಡಾ. ಎಸ್ ಜೈಶಂಕರ್ ಅವರು ಹೇಳಿದ್ದಾರೆ.

ADVERTISEMENT

31 ಪಕ್ಷಗಳ 37 ಸದಸ್ಯರು ಭಾಗಿಯಾಗಿದ್ದ ಸಭೆಯು ಸತತ ಮೂರೂವರೆ ಗಂಟೆಗಳ ಕಾಲ ನಡೆದಿದೆ. ಸಚಿವ ಜೈಶಂಕರ್ ಅವರ ಅಧ್ಯಕ್ಷೆತಯಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಹರ್ಷ್ ಶ್ರಿಂಗ್ಲಾ ಅವರು ಅಲ್ಲಿನ ಪರಿಸ್ಥಿತಿಯ ಕುರಿತು ವಾಸ್ತಾವಿಕ ಚಿತ್ರಣವನ್ನು ಸಭೆಯ ಸದಸ್ಯರಿಗೆ ವಿವರಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಅಧೀರ್ ರಂಜನ್ ಚೌಧರಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಆನಂದ್ ಶರ್ಮಾ ಸಭೆಯಲ್ಲಿ ಭಾಗವಹಿಸಿದ್ದರು. ಎನ್ ಸಿ ಪಿಯ ಶರದ್ ಪವಾರ್, ಟಿಎಂಸಿಯ ಸೌಗತಾ ರಾಯ್ ಹಾಗೂ ಸುಖೇಂದು ಶೇಖರ್ ರಾಯ್, ಜೆಡಿಎಸ್’ನ ದೇವೇಗೌಡ, ಡಿಎಂಕೆ ಸಂಸದರಾದ ತಿರುಚ್ಚಿ ಸಿವ ಹಾಗೂ ಟಿ ಆರ್ ಬಾಲು, ಟಿಆರ್ಎಸ್’ನ ನಾಮ ನಾಗೇಶ್ವರ ರಾವ್, ಟಿಡಿಪಿಯ ಜಯದೇವ ಗಲ್ಲಾ, ಸಿಪಿಐ ಸಂಸದ ಬಿನೋಯ್ ವಿಸ್ವಂ ಸೇರಿದಂತೆ ಇತರೆ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸರ್ಕಾರದ ಪರವಾಗಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ಪ್ರಹ್ಲಾದ್ ಜೋಷಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

“ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಕುರಿತು ಎಲ್ಲರಲ್ಲಿಯೂ ಸಮಾನ ಚಿಂತನೆಯಿದೆ ಎಂಬ ಸಂದೇಶವನ್ನು ನಾವು ಕೊಡಲು ಬಯಸುತ್ತೇವೆ. ಅಫ್ಘಾನಿಸ್ತಾನದೊಂದಿಗಿನ ನಮ್ಮ ಸ್ನೇಹ ಬಹಳ ಮುಖ್ಯವಾದದ್ದು. ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ನಾವು ಈ ಪರಿಸ್ಥಿತಿಯ ಕುರಿತು ನಿರ್ಧಾರವನ್ನು ತಾಳಲಿದ್ದೇವೆ,” ಎಂದು ಜೈಶಂಕರ್ ಅವರು ಸಭೆಯ ಬಳಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ವಿಶ್ವದ ಇತರೆ ದೇಶಗಳಂತೆ ಭಾರತವು ಕಾದು ನೋಡುವ ನಿಲುವನ್ನು ತಾಳಬೇಕು. ಏಕೆಂದರೆ ಪ್ರಸ್ತುತ ಪರಿಸ್ಥಿತಿ ನಿಜಕ್ಕೂ ಆತಂಕಕಾರಿಯಾಗಿದೆ, ಎಂಬ ವಿಚಾರದ ಕುರಿತು ಚರ್ಚೆಯಾಗಿದೆ.

“ಇದೊಂದು ಬೆಳವಣಿಗೆ ಕಾಣುವಂತಹ ಪರಿಸ್ಥಿತಿಯಾಗಿದೆ. ಹೀಗಾಗಿ, ಎಲ್ಲರಲ್ಲಿಯೂ ನಾವು ವಿನಂತಿಸಿಕೊಳ್ಳುವುದು ಏನೆಂದರೆ, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತಲುಪುವವರೆಗೂ ಎಲ್ಲರೂ ಸಮಾಧಾನದಿಂದ ಇರಬೇಕು. ಸಾಮಾನ್ಯ ಸ್ಥಿತಿಗೆ ಅಫ್ಘಾನ್ ಮರಳಿದ ಬಳಿಕ ಭಾರತ ತನ್ನ ನಿಲುವನ್ನು ಪ್ರಕಟಿಸಲಿದೆ,” ಎಂದು ಜೈಶಂಕರ್ ಹೇಳಿದ್ದಾರೆ.

ಸಭೆಯಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು, ಅಫ್ಘಾನ್ ಮಹಿಳಾ ಸಂಸದೆಯನ್ನು ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಿರುವ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

“ಅಫ್ಘಾನ್ ಮಹಿಳಾ ಸಂಸದೆಯನ್ನು ವಿಮಾನ ನಿಲ್ದಾಣದಿಂದಲೇ ಗಡಿಪಾರು ಮಾಡಿರುವ ವಿಚಾರವನ್ನು ನಾವು ಸಭೆಯಲ್ಲಿ ಪ್ರಸ್ತಾಪಿಸಿದ್ದೇವೆ. ಇದಕ್ಕೆ ಸಚಿವ ಜೈಶಂಕರ್ ಅವರು ಸೂಕ್ತ ಉತ್ತರವನ್ನೂ ನೀಡಿದ್ದಾರೆ. ಇದೊಂದು ಪ್ರಮಾದವಾಗಿದ್ದು, ಭವಿಷ್ಯದಲ್ಲಿ ಇಂತಹ ಪ್ರಮಾದ ಜರುಗದಂತೆ ಎಚ್ಚರಿಕೆ ವಹಿಸಿಕೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ,” ಎಂದು ಖರ್ಗೆ ತಿಳಿಸಿದ್ದಾರೆ.

ಇದರೊಂದಿಗೆ, ಅಫ್ಘಾನಿಸ್ತಾನದ ನಾಗರಿಕರ ಸುರಕ್ಷತೆ ಹಾಗೂ ಭಾರತದಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನ್ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆಯೂ ಗಮನ ಹರಿಸುವಂತೆ ವಿಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. ಅವರ ಭರವಸೆ ಎಷ್ಟ ಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತದೆ ಎಂದು ನಂತರ ತಿಳಿಯುತ್ತದೆ. ಅಫ್ಘಾನ್’ನಲ್ಲಿ ನಡೆಯುತ್ತಿರುವ ಬೆಳೆವಣಿಗೆಗಳು ಸಂಪೂರ್ಣ ದೇಶದ ಹಿತಕ್ಕೆ ಸಂಬಂಧಿಸಿದ್ದಾಗಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಹಾಗೂ ಸಮಾನ ಮನಸ್ಥಿತಿಯಿಂದ ಈ ಪರಿಸ್ಥಿತಯನ್ನು ನಿಭಾಯಿಸಲು ಸಿದ್ದರಿದ್ದೇವೆ, ಎಂದು ಖರ್ಗೆ ಹೇಳಿದ್ದಾರೆ.

ಸಭೆಯಿಂದ ವಿಪಕ್ಷಗಳಿಗೆ ಸಮಾಧಾನವಾಗಿದೆಯೇ ಎಂಬ ಪ್ರಶ್ನೆಗೆ ಉತ್ತಿರಿಸಿರುವ ಖರ್ಗೆ, ನಾವು ಕಾದು ನೋಡುತ್ತೇವೆ. ಸರ್ಕಾರ ನಮ್ಮ ಪ್ರಶ್ನೆಗಳಿಗೆ ಉತ್ತರವನ್ನೇನೋ ನೀಡಿದೆ. ಅವುಗಳು ಕಾರ್ಯರೂಪಕ್ಕೆ ಬರಬೇಕಿವೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಸರ್ಕಾರ ಹೇಗೆ ರಕ್ಷಿಸುತ್ತದೆ ಎಂಬುದು ನೋಡಬೇಕಿದೆ. ಆ ಬಳಿಕ, ಇತರೆ ದೇಶಗಳ ನಿಲುವಿನೊಂದಿಗೆ ಭಾರತದ ನಿಲು ಕೂಡಾ ತಿಳಿಯಲಿದೆ, ಎಂದು ಉತ್ತರಿಸಿದ್ದಾರೆ.

ಸಂಪೂರ್ಣ ದೇಶಕ್ಕೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಪ್ರಧಾನಿ ಮೋದಿ ಗೈರು ಹಾಜರಿಯನ್ನು ವಿಪಕ್ಷಗಳು ಖಂಡಿಸಿವೆ. ವಾಜಪೇಯಿ ಅವರ ಉದಾಹರಣೆಯನ್ನು ನೀಡಿ ಪ್ರಧಾನಿ ಮೋದಿ ನಡೆಯನ್ನು ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿಯೇ ಖಂಡಿಸಿದ್ದಾರೆ.

Tags: afganistanBJPTalibanಬಿಜೆಪಿ
Previous Post

ಉಮರ್ ಖಾಲೀದ್ ಜಾಮೀನು: ಕೋರ್ಟ್ ನಲ್ಲಿ ಯುಎಪಿಎ ಕರಾಳತೆ ಬಯಲಾಗಿದ್ದು ಹೇಗೆ?

Next Post

ಪಶ್ಚಿಮ ಬಂಗಾಳ ಹಿಂಸಾಚಾರ: ಒಂಬತ್ತು ಎಫ್ಐಆರ್ ದಾಖಲಿಸಿದ ಸಿಬಿಐ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಪಶ್ಚಿಮ ಬಂಗಾಳ ಹಿಂಸಾಚಾರ: ಒಂಬತ್ತು ಎಫ್ಐಆರ್ ದಾಖಲಿಸಿದ ಸಿಬಿಐ

ಪಶ್ಚಿಮ ಬಂಗಾಳ ಹಿಂಸಾಚಾರ: ಒಂಬತ್ತು ಎಫ್ಐಆರ್ ದಾಖಲಿಸಿದ ಸಿಬಿಐ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada