ಶಿವಮೊಗ್ಗ: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿದ್ದು, ಸದ್ಯ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ಶಿವಮೊಗ್ಗದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆರ. ಪರಿಸ್ಥಿತಿಗೆ ಅನುಗುಣವಾಗಿ ಕೇಂದ್ರ ಕ್ರಮ ಕೈಗೊಳ್ಳುತ್ತದೆ. ಕೇಂದ್ರದ ನಿರ್ಧಾರಕ್ಕೆ ನಾವೀಗಾಗಲೇ ಬೆಂಬಲ ವ್ಯಕ್ತಪಡಿಸಿದ್ದೇವೆ. ರಾಜಕೀಯವನ್ನು ಬದಿಗಿಟ್ಟು ನಾವು ಬೆಂಬಲ ಸೂಚಿಸಿದ್ದೇವೆ ಎಂದಿದ್ದಾರೆ.
ಎರಡು ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷ ರಾಜ್ಯದ ಮೇಲೆ ಸದ್ಯಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಸದ್ಯ ಸಂಘರ್ಷದ ಪರಿಣಾಮ ಪಂಜಾಬ್, ರಾಜಸ್ಥಾನ್, ಜಮ್ಮು- ಕಾಶ್ಮೀರದ ಮೇಲೆ ಕೇಂದ್ರೀತವಾಗಿದೆ. ಕರ್ನಾಟಕದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ತುಂಬಾ ಕಡಿಮೆ ಇದೆ. ಆದಾಗ್ಯೂ ಸಚಿವ ಸಂಪುಟದ ಸಭೆಯಲ್ಲಿ ಸಂಘರ್ಷದ ಪರಿಣಾಮ ಕುರಿತು ಚರ್ಚೆ ಆಗಿದೆ ಎಂದಿದ್ದಾರೆ. ಪೂರ್ಣ ಪ್ರಮಾಣದ ಯುದ್ಧ ನಡೆಯುವ ಕುರಿತು ಈಗಲೇ ಏನು ಹೇಳಲು ಆಗದು. ಈ ಬಗ್ಗೆ ಏನಿದ್ದರೂ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಲಿದೆ ಅಂತಾನೂ ತಿಳಿಸಿದ್ದಾರೆ.
ಮೀನುಗಾರಿಕಾ ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ಕೊಡಲಾಗಿದೆ. ಆಳ ಸಮುದ್ರ ಮೀನುಗಾರರಿಗೆ ಅತ್ಯಗತ್ಯ ಮಾಹಿತಿ ನೀಡಿರುವ ಪೋಲಿಸ್, ಮೀನುಗಾರಿಕಾ ಇಲಾಖೆ, ಸೋಮವಾರ ನಡೆಯಲಿರುವ ಮೊಕ್ ಡ್ರೀಲ್ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿಯೂ ತಿಳಿಸಿದ್ದಾರೆ. ಸೇನೆಯ ಕಣ್ಗಾವಲಾಗಿ ಕೆಲಸ ನಿರ್ವಹಿಸಲು ಮೀನುಗಾರರನ್ನ ಸಜ್ಜುಗೊಳಿಸಿದೆ ಇಲಾಖೆ. ಆಳ ಸಮುದ್ರ ಮೀನುಗಾರಿಕೆ ಸಂದರ್ಭದಲ್ಲಿ ಅಪರಿಚಿತ ಬೋಟ್ ಕಂಡರೆ ತತಕ್ಷಣದಲ್ಲೆ ಮಾಹಿತಿ ನೀಡಲು ಆದೇಶ ನೀಡಲಾಗಿದೆ. ದೇಶದ ಭದ್ರತೆಗೆ ಸಹಾಯ ಮಾಡಲು ಮೀನುಗಾರರನ್ನ ಸಜ್ಜುಗೊಳಿಸಿದ ಪೋಲಿಸ್ ಇಲಾಖೆ. ಮೀನುಗಾರಿಕಾ ಬಂದರಿನಲ್ಲಿ ಸಭೆ ನಡೆಸಿದ್ದಾರೆ ಮೀನುಗಾರಿಕಾ ಮತ್ತು ಪೋಲಿಸ್ ಇಲಾಖೆ ಅಧಿಕಾರಿಗಳು.
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಕೈಗೊಂಡಿದ್ದಾರೆ ಅಧಿಕಾರಿಗಳು. ರೈಲ್ವೆ ರಕ್ಷಣಾ ಪಡೆ (RPF), ಸರ್ಕಾರಿ ರೈಲ್ವೆ ಪೊಲೀಸ್ (GRP), ಡಾಗ್ ಸ್ಕ್ವಾಡ್ ನಿಂದ ತಪಾಸಣೆ ಮಾಡಲಾಗ್ತಿದೆ. ಪ್ರಯಾಣಿಕರ ಮತ್ತು ಲಗೇಜುಗಳನ್ನು ತೀವ್ರ ತಪಾಸಣೆ ಮಾಡಲಾಗ್ತಿದೆ. ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್, ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್, ಲಗೇಜ್ ತಪಾಸಣಾ ಸ್ಕ್ಯಾನರ್ಗಳ ಮೂಲಕ ತಪಾಸಣೆ ಮಾಡಿದ್ದಾರೆ. ರೈಲು ನಿಲ್ದಾಣದ ಪ್ರವೇಶ ದ್ವಾರ ಮತ್ತು ನಿರ್ಗಮನ ಕೇಂದ್ರ ಗಳಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲಾಗಿದೆ. ರೈಲ್ವೆ ಬೋಗಿಗಳ ಒಳ ತೆರಳಿ ಇಂಚಿಂಚು ತಪಾಸಣೆ ನಡೆಸುತ್ತಿದ್ದಾರೆ ಪೊಲೀಸರು. ಒಟ್ಟಾರೆ ರಾಜ್ಯದಲ್ಲಿ ಅಪಾಯದ ಮುನ್ಸೂಚನೆ ಇಲ್ಲದಿದ್ದರೂ ಸರ್ಕಾರ ನಿಗಾ ವಹಿಸಿದೆ.