• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಳೆದೆರಡು ವರ್ಷಗಳಲ್ಲಿ ಭಾರತದಲ್ಲಿ ತೀವ್ರವಾಗಿ ಏರಿಕೆಯಾಗಿದೆ ಮಕ್ಕಳ ನಾಪತ್ತೆ ಪ್ರಕರಣ!

ಫಾತಿಮಾ by ಫಾತಿಮಾ
June 1, 2022
in ದೇಶ
0
ಕಳೆದೆರಡು ವರ್ಷಗಳಲ್ಲಿ ಭಾರತದಲ್ಲಿ ತೀವ್ರವಾಗಿ ಏರಿಕೆಯಾಗಿದೆ ಮಕ್ಕಳ ನಾಪತ್ತೆ ಪ್ರಕರಣ!
Share on WhatsAppShare on FacebookShare on Telegram

ಕೋವಿಡ್ -19ರ ಸಾಮಾಜಿಕ ಪರಿಣಾಮದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಕಾಣೆಯಾದ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ‘ಚೈಲ್ಡ್ ರೈಟ್ಸ್’ ಎನ್‌ಜಿಒ
ಆತಂಕ ವ್ಯಕ್ತಪಡಿಸಿದ್ದು ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಡೆಯಲು ಗ್ರಾಮ ಮಟ್ಟದಲ್ಲಿ ಪೋಷಕರಿಗೆ ತಿಳುವಳಿಕೆ ನೀಡಲು ಮತ್ತು‌ ಮಕ್ಕಳ ಹಕ್ಕು ಸಂರಕ್ಷಣಾ ಸಂಸ್ಥೆಗಳಿಗೆ ಸಾಕಷ್ಟು ಬಜೆಟ್ ಹಂಚಿಕೆ ಮಾಡಲು ಸರ್ಕಾರವನ್ನು ಒತ್ತಾಯಿಸಿದದೆ.

ADVERTISEMENT

ರಾಷ್ಟ್ರೀಯ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ನ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ 2020 ರಲ್ಲಿ ಭಾರತದಲ್ಲಿ 59,262 ಮಕ್ಕಳು ಕಾಣೆಯಾಗಿದ್ದಾರೆ. ಅದಕ್ಕೂ ಹಿಂದೆಯೇ ನಾಪತ್ತೆಯಾಗಿದ್ದ 48,972 ಮಕ್ಕಳು ಸೇರಿದಂತೆ ಒಟ್ಟು 1,08,234 ಮಕ್ಕಳು ಕಾಣೆಯಾಗಿದ್ದಾರೆ. ಅಧಿಕೃತ ಡೇಟಾ ಪ್ರಕಾರ 2008 ರಲ್ಲಿ 7,650 ಮಕ್ಕಳ ನಾಪತ್ತೆ ಪ್ರಕರಣಗಳು ವರದಿಯಾಗಿತ್ತು. ಅಂದರೆ 2008 ಮತ್ತು 2020 ರ ನಡುವೆ ವಾರ್ಷಿಕವಾಗಿ ವರದಿಯಾದ ಮಕ್ಕಳ ನಾಪತ್ತೆ ಪ್ರಕರಣಗಳಲ್ಲಿ ಸುಮಾರು 13 ಪಟ್ಟು ಏರಿಕೆಯಾಗಿದೆ.

ಕಳೆದ ಎರಡು ವರ್ಷಗಳಲ್ಲಿ, ‘ಬಚ್‌ಪನ್ ಬಚವೋ ಆಂದೋಲನ್’ (ಬಿಬಿಎ) ಸಂಘಟನೆಯೊಂದೇ 12,000 ಮಕ್ಕಳನ್ನು ರಕ್ಷಿಸಿದೆ ಎಂದು ಅದರ ಕಾರ್ಯನಿರ್ವಾಹಕ ನಿರ್ದೇಶಕರಾದ ಧನಂಜಯ್ ಟಿಂಗಾಲ್ ಹೇಳಿದ್ದಾರೆ. “ಕೋವಿಡ್ ನಂತರ, ಮಕ್ಕಳ ಕಳ್ಳಸಾಗಣೆಯ ಹೆಚ್ಚಾಗಿದೆ ಎಂಬುವುದಕ್ಕೆ ಇದು ಒಂದೇ ಉದಾಹರಣೆ ಸಾಕು” ಎಂದು ಅವರು ಪಿಟಿಐ ಜೊತೆ ಮಾತಾಡುತ್ತಾ ತಿಳಿಸಿದ್ದಾರೆ.

Child Rights and You (CRY) ಎನ್‌ಜಿಒ ಆರ್‌ಟಿಐ ಮೂಲಕ ಸಂಗ್ರಹಿಸಿದ ಮಾಹಿತಿಯ ಪ್ರಕಾರ 2021ರಲ್ಲಿ ಪ್ರತಿದಿನ ಮಧ್ಯಪ್ರದೇಶದಲ್ಲಿ ಸರಾಸರಿ 29 ಮಕ್ಕಳು ಮತ್ತು ರಾಜಸ್ಥಾನದಲ್ಲಿ 14 ಮಕ್ಕಳು ನಾಪತ್ತೆಯಾಗಿದ್ದಾರೆ. ಟಿಂಗಾಲ್ ಹೇಳುವಂತೆ ಕೆಲವು ಮಕ್ಕಳನ್ನು ತಮ್ಮ ಹೆತ್ತವರೇ ಸಾಗಾಣಿಕೆ ಮಾಡಿದ್ದರೆ, ಕೆಲವು ಮಕ್ಕಳು ಸ್ವಯಂಪ್ರೇರಣೆಯಿಂದ ಸಾಗಣೆದಾರರೊಂದಿಗೆ ಹೋಗಿದ್ದಾರೆ. ಯಾವುದೇ ಪ್ರಕಾರದ ಸಾರ್ವಜನಿಕ ಸಾರಿಗೆಯಲ್ಲಿ, ರಸ್ತೆ ಮಧ್ಯೆ ಒಂಟಿಯಾಗಿರುವ ಅಥವಾ ಭಿಕ್ಷೆ ಬೇಡುತ್ತಿರುವ ಮಕ್ಕಳು ಕಂಡು ಬಂದರೆ ಅವರ ಬಗ್ಗೆ‌ ಮಾಹಿತಿ ನೀಡಬೇಕು ಎಂದು ಅವರು ರೈಲ್ವೇಯ ಅಧಿಕಾರಿಗಳು, ನೌಕರರು ಮತ್ತು ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುತ್ತಾರೆ. “ಅಂತಹ ಮಕ್ಕಳಿಗೆ ನಂತರ ಸರ್ಕಾರದ ಸುರಕ್ಷಾ ಸಂಸ್ಥೆಗಳಲ್ಲಿ ಆಶ್ರಯ ನೀಡಬೇಕು” ಎಂದೂ ಅವರು ಹೇಳುತ್ತಾರೆ.

‘ Child Protection, Save the Children’ ಉಪ ನಿರ್ದೇಶಕರಾಗಿರುವ ಪ್ರಭಾತ್ ಕುಮಾರ್ ಮಕ್ಕಳ ಕಳ್ಳಸಾಗಣೆ ಮತ್ತು ನಾಪತ್ತೆಯಾಗುವಿಕೆಗೆ ಬಡತನ ಮುಖ್ಯ ಕಾರಣ ಎನ್ನುತ್ತಾರೆ. . ಕೊವಿಡ್ -19 ಸಮಯದಲ್ಲಿ ಜಾರಿಗೊಳಿಸಿದ ಲಾಕ್ಡೌನ್ ಮತ್ತು ಶಾಲೆ‌ ಮುಚ್ಚಿದ್ದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. CRYಯ ಪ್ರಾದೇಶಿಕ ನಿರ್ದೇಶಕ (ಉತ್ತರ) ರಾದ ಸೋಹಾ‌ ಮೊಯಿತ್ರಾ “ಮೊದಲೇ ಸಾಲದ ಹೊರೆಯಲ್ಲಿದ್ದ ಗ್ರಾಮೀಣ ಪ್ರದೇಶಗಳಲ್ಲಿನ ಅನೇಕ ಕುಟುಂಬಗಳ ಆರ್ಥಿಕ ಹೊರೆಯು ಕೋವಿಡ್‌ನಿಂದಾಗಿ ಮತ್ತಷ್ಟು ಹೆಚ್ಚಾಯಿತು. ಸಾಲಗಳನ್ನು ಮರು ಪಾವತಿಸುವ ಒತ್ತಡವು ಕಾರ್ಮಿಕ ಮತ್ತು ಮದುವೆಗಾಗಿ ಇಂತಹ ಕುಟುಂಬಗಳ ಮಕ್ಕಳ ಕಳ್ಳಸಾಗಣೆಗೆ ಕಾರಣವಾಯಿತು” ಎನ್ನುತ್ತಾರೆ.

ಇದರ ಜೊತೆಗೆ, ಮಾಸ್ಕ್ ಕಡ್ಡಾಯವಾದ ಬಳಿಕ ಕಳ್ಳಸಾಗಣೆದಾರರು ಮತ್ತು ಅಪಹರಣಕಾರರನ್ನು ಗುರುತಿಸುವುದು ಜನಸಾಮಾನ್ಯರಿಗೆ ಕಷ್ಟವಾಗತೊಡಗಿತು. “ಸ್ಥಳೀಯ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಸಹಯೋಗದೊಂದಿಗೆ ಸಂಬಂಧಿಸಿದ ಸರ್ಕಾರಿ ಇಲಾಖೆಗಳು ರಚನಾತ್ಮಕ ಚಟುವಟಿಕೆಗಳೊಂದಿಗೆ ಮಕ್ಕಳ ಶಿಕ್ಷಣದ ಪ್ರಾಮುಖ್ಯತೆಯ ಬಗ್ಗೆ ನಿಯಮಿತ ಜಾಗೃತಿ ಮೂಡಿಸಲು ಮುಂದೆ ಬರಬೇಕು” ಎನ್ನುತ್ತಾರೆ ಮೊಯಿತ್ರಾ. ಎನ್‌ಸಿ‌ಆರ್ಬಿ ಡಾಟಾ ಪ್ರಕಾರ 2020 ರಲ್ಲಿ, ಸುಮಾರು ನಾಲ್ಕು ತಿಂಗಳ ಕಾಲ ಹೇರಿದ್ದ ಸಂಪೂರ್ಣ ರಾಷ್ಟ್ರವ್ಯಾಪಿ ಲಾಕ್ಡೌನ್ ಹೊರತಾಗಿಯೂ ಮಾರ್ಚ್ ನಿಂದ ಜೂನ್‌ವರೆಗೆ 59,262 ಮಕ್ಕಳು ಕಾಣೆಯಾಗಿದ್ದಾರೆ, ಅದರಲ್ಲಿ 13,566 ಗಂಡು ಮಕ್ಕಳು, 45,687 ಹೆಣ್ಣು ಮಕ್ಕಳು ಮತ್ತು ಒಂಬತ್ತು ಟ್ರಾನ್ಸ್ಜೆಂಡರ್ ಮಕ್ಕಳು. 2019 ರಲ್ಲಿ ಕಾಣೆಯಾದ ಮಕ್ಕಳಲ್ಲಿ ಹೆಣ್ಣುಮಕ್ಕಳ ಶೇಕಡಾವಾರು ಸಂಖ್ಯೆ 71 ಆದರೆ ಇದು 2020ರಲ್ಲಿ 77ಕ್ಕೆ ಏರಿದೆ. ಮತ್ತೊಂದೆಡೆ, 2018 ರಲ್ಲಿ ಕಾಣೆಯಾದ ಮಕ್ಕಳಲ್ಲಿ ಶೇಕಡ 42ರಷ್ಟು ಮಕ್ಕಳನ್ನು‌ ಪತ್ತೆ ಹಚ್ಚಲಾಗಿದ್ದರೆ 2019 ರಲ್ಲಿ ಶೇಕಡ 32, ಮತ್ತು 2020 ರಲ್ಲಿ ಶೇಕಡ 45 ರಷ್ಟು ಮಕ್ಕಳನ್ನು ಪತ್ತೆ ಹಚ್ಚಲಾಗಿಲ್ಲ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ನಿಧನ

Next Post

ರಾಜ್ಯಸಭೆಗೆ 10ರಲ್ಲಿ 4 ಸೀಟು ಬ್ರಾಹ್ಮಣರಿಗೆ ನೀಡಿದ ಕಾಂಗ್ರೆಸ್ ಯಾರ ಪರ?

Related Posts

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
0

ಬೆಂಗಳೂರು : 2025ರ ವರ್ಷವೂ ರಾಜಕೀಯ, ಸಿನಿಮಾ, ಔದ್ಯೋಗಿಕ ಕ್ಷೇತ್ರದಲ್ಲಿ ಸಾಕಷ್ಟು ಗಮನ ಸೆಳೆದಂತೆ ಕ್ರೀಡಾಲೋಕದಲ್ಲೂ ಹೆಚ್ಚಿನ ಸದ್ದು ಮಾಡಿರುವ ವರ್ಷವಾಗಿದೆ. ಅದರಲ್ಲೂ ಕ್ರಿಕೆಟ್ ಪಂದ್ಯದಲ್ಲಿ ಶಕ್ತಿ...

Read moreDetails

ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

December 29, 2025

ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ ಸಿಎಂ ಸಿದ್ದರಾಮಯ್ಯ..

December 29, 2025

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಜ‌.10ಕ್ಕೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

December 29, 2025

ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಗೌರವ್ ಗುಪ್ತ

December 29, 2025
Next Post
ರಾಜ್ಯಸಭೆಗೆ 10ರಲ್ಲಿ 4 ಸೀಟು ಬ್ರಾಹ್ಮಣರಿಗೆ ನೀಡಿದ ಕಾಂಗ್ರೆಸ್ ಯಾರ ಪರ?

ರಾಜ್ಯಸಭೆಗೆ 10ರಲ್ಲಿ 4 ಸೀಟು ಬ್ರಾಹ್ಮಣರಿಗೆ ನೀಡಿದ ಕಾಂಗ್ರೆಸ್ ಯಾರ ಪರ?

Please login to join discussion

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!
Top Story

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

by ಪ್ರತಿಧ್ವನಿ
December 31, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

December 31, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada