ಬೆಂಗಳೂರು : ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 50 ರನ್ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ಬ್ಲ್ಯಾಕ್ ಕ್ಯಾಪ್ಸ್ ತಂಡ ನಾಲ್ಕನೇ ಪಂದ್ಯದಲ್ಲಿ ಸ್ವಲ್ಪ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಚೇತರಿಸಿಕೊಂಡು ಭಾರತ ಸೋಲುವಂತೆ ಮಾಡಿದೆ. ಈ ಮೂಲಕ ತನ್ನ ಗೆಲುವಿನ ಖಾತೆ ತೆರೆದಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡವು ಏಳು ವಿಕೆಟ್ಗೆ 215 ರನ್ ಗಳಿಸಿತು. ಟಿಮ್ ಸೀಫರ್ಟ್ (36 ಎಸೆತಗಳಲ್ಲಿ 62) ಮತ್ತು ಡೆವೊನ್ ಕಾನ್ವೇ (23 ಎಸೆತಗಳಲ್ಲಿ 44) ಕೇವಲ 8.2 ಓವರ್ಗಳಲ್ಲಿ 100 ರನ್ ಕಲೆ ಹಾಕುವುದರೊಂದಿಗೆ ಅದ್ಭುತ ಆರಂಭ ಪಡೆಯಿತು. ಆದರೆ ಬಳಿಕದ 10 ಓವರ್ಗಳಲ್ಲಿ ಭಾರತೀಯ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿದರು, ಅರ್ಶ್ದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರು, ನಂತರ ಡ್ಯಾರಿಲ್ ಮಿಚೆಲ್ 18 ಎಸೆತಗಳಲ್ಲಿ 39 ರನ್ ಗಳಿಸಿದರು.
ಇದನ್ನೂ ಓದಿ : ಅಜಿತ್ ಪವಾರ್ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?
ಈ ರನ್ಗಳನ್ನು ಬೆನ್ನಟ್ಟಿದ ಭಾರತ ತಂಡದ ಆಟಗಾರ ಅಭಿಷೇಕ್ ಶರ್ಮಾ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದರು. ಇದಾದ ನಂತರ ನ್ಯೂಜಿಲೆಂಡ್ ತಂಡದಲ್ಲಿ ಗೆಲುವಿನ ಕುರಿತು ನಿರೀಕ್ಷೆಗಳು ಹೆಚ್ಚಿದವು, ಅಂತಿಮವಾಗಿ ಶಿವಂ ದುಬೆ ಅವರ ಅದ್ಭುತ ಇನ್ನಿಂಗ್ಸ್ ಹೊರತಾಗಿಯೂ ಭಾರತ ತಂಡವು ಸಂಕಷ್ಟಕ್ಕೆ ಸಿಲುಕಿತು. ಅಲ್ಲದೆ 23 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಏಳು ಸಿಕ್ಸರ್ಗಳ ಸಹಾಯದಿಂದ 65 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಬಹಳ ಹೊತ್ತು ಬ್ಯಾಟಿಂಗ್ ಪ್ರದರ್ಶನ ನೀಡದೆ ವಿಕೆಟ್ ನೀಡಿ ಹೊರ ನಡೆದರು. ಆದರೆ ದುಬೆಗೆ ಇತರ ಬ್ಯಾಟ್ಸ್ಮನ್ಗಳಿಂದ ಬೆಂಬಲ ಸಿಗಲಿಲ್ಲ. ರಿಂಕು ಸಿಂಗ್ 30 ಎಸೆತಗಳಲ್ಲಿ 39 ರನ್ ಗಳಿಸಿದರೆ, ಸಂಜು ಸ್ಯಾಮ್ಸನ್ 15 ಎಸೆತಗಳಲ್ಲಿ ಕೇವಲ 24 ರನ್ ಗಳಿಸಿದರು. ಕೊನೆಯಲ್ಲಿ, ಭಾರತ ತಂಡ 18.4 ಓವರ್ಗಳಲ್ಲಿ 165 ರನ್ಗಳಿಗೆ ಆಲೌಟ್ ಆಯಿತು.











