• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ಮಾನದಂಡಗಳನ್ನು ಗಾಳಿಗೆ ತೂರಿದ ರಾಜಕೀಯ ಪಕ್ಷಗಳಿಂದ ಮೂರನೇ ಅಲೆಗೆ ಮುನ್ನುಡಿ?

ಪ್ರತಿಧ್ವನಿ by ಪ್ರತಿಧ್ವನಿ
December 29, 2021
in ಕರ್ನಾಟಕ, ದೇಶ, ರಾಜಕೀಯ
0
ಕೋವಿಡ್ ಮಾನದಂಡಗಳನ್ನು ಗಾಳಿಗೆ ತೂರಿದ ರಾಜಕೀಯ ಪಕ್ಷಗಳಿಂದ ಮೂರನೇ ಅಲೆಗೆ ಮುನ್ನುಡಿ?
Share on WhatsAppShare on FacebookShare on Telegram

ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಮತ್ತು ರೂಪಾಂತರಿ ಓಮಿಕ್ರಾನ್ ಭೀತಿ ನಡುವೆ ಸರ್ಕಾರ ಜಾರಿಗೆ ತಂದಿದ್ದ ಕೋವಿಡ್ ಮಾರ್ಗಸೂಚಿಗಳನ್ನು ರಾಜಕೀಯ ಪಕ್ಷಗಳು ಗಾಳಿಗೆ ತೂರಿದಂತೆ ಕಾಣುತ್ತಿದೆ.

ADVERTISEMENT

ಮುಂದಿನ ವರ್ಷ ಪ್ರಾರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗೂ ಮುನ್ನವೇ ಈಗಾಗಲೇ ರಾಜಕೀಯ ಪಕ್ಷಗಳು ತಮ್ಮದೇ ಆದ ತಯಾರಿ ಮತ್ತು ತಂತ್ರಗಾರಿಕೆಯಲ್ಲಿ ತೊಡಗಿವೆ. ರಾಜಕೀಯ ಪಕ್ಷಗಳು ನಡೆಸುವ ಚುನಾವಣಾ ರ್ಯಾಲಿಗಳಲ್ಲಿ ಜನರು ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮಾಡುತ್ತಿಲ್ಲ. ಸುದ್ದಿವಾಹಿನಿಗಳಲ್ಲಿ ಪ್ರಕಟವಾಗುವ ಚಿತ್ರಣಗಳಲ್ಲಿ ಜನರು ಒಟ್ಟಾಗಿ ಗುಂಪಿನಲ್ಲಿ ನಿಂತಿರುವುದನ್ನು ಕಾಣಬಹುದು.

ದೇಶದಲ್ಲಿ ನಿತ್ಯ ಸೋಂಕಿನ ಪ್ರಮಾಣ ಮಂದಗತಿಯ ಏರಿಕೆ ಕಾಣುತ್ತಿದೆ. ರಾಜಕೀಯ ಪಕ್ಷಗಳು ನಡೆಸುವ ಚುನಾವಣಾ ರ್ಯಾಲಿಗಳ ಮೂಲಕ ವೇಗವಾಗಿ ಹರಡುವ ಭೀತಿ ಎದುರಾಗಿದೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಮೋದಿ ಅವರಿಂದ ಹಲವು ಉದ್ಘಾಟನೆಗಳು, ಕಾಂಗ್ರೆಸ್ಸಿನ ಮಹಿಳಾ ಸಮಾವೇಶ, ಸಮಾಜವಾದಿ ಪಕ್ಷದ ಸಮಾವೇಶ ಮತ್ತು ಅಮಿತ್ ಶಾ ನಡೆಸಿದ ರೋಡ್ ಶೋ ಇವಿಷ್ಟನ್ನು ನೋಡಿದರೆ ಜನರು ಎಲ್ಲಿಯೂ ಸಹ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಉತ್ತರ ಪ್ರದೇಶ ಕಳಪೆ ಸಾಧನೆಯನ್ನ ಮಾಡಿದೆ. ರಾಜ್ಯದ ಜನಸಂಖ್ಯೆಯ ಶೇ.30% ರಷ್ಟು ಜನರಿಗೆ ಮೊದಲ ಮತ್ತು ಎರಡನೇ ಡೋಸ್ ಲಸಿಕೆಯನ್ನು ಈವರಗೆ ನೀಡಲಾಗಿದೆ. ಎರಡನೇ ಅಲೆ ಸಂಭವಿಸಿದ ಸಮಯದಲ್ಲಿ ಹೆಚ್ಚು ಜನರು ಉತ್ತರ ಪ್ರದೇಶದಲ್ಲಿ ಸೋಂಕಿನ ತೀವ್ರತೆಗೆ ಬಳಲಿದ್ದರು. ಗಂಗಾ ನದಿ ದಡದಲ್ಲಿ ಸಾವಿರಾರು ಶವಗಳನ್ನು ನದಿಯಲ್ಲಿ ತೇಲಿ ಬಿಡುತ್ತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಅಂತರಾಷ್ಟ್ರೀಯ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಳೆದ ವಾರ ಈ ಬಗ್ಗೆ ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ತೀರ್ಪು ನೀಡಿದ ನ್ಯಾಯಾಧೀಶರು ಚುನಾವಣಾ ಆಯೋಗ ಮತ್ತು ಪ್ರಧಾನಿಗೆ ಚುನಾವಣೆಯನ್ನು ಒಂದೆರಡು ತಿಂಗಳುಗಳ ಕಾಲ ಮುಂದೂಡುವಂತೆ ಮನವಿ ಮಾಡಿತ್ತು. ಈ ವರ್ಷ ಪ್ರಾರಂಭದಲ್ಲಿ ಎರಡನೇ ಅಲೆ ಭೀತಿಯಲ್ಲಿ ನ್ಯಾಯಾಲಯ ಚುನಾವಣಾ ರ್ಯಾಲಿಗಳನ್ನು ರಾಜ್ಯದಲ್ಲಿ ನಿಷೇಧಿಸಿತ್ತು.

ಉತ್ತರ ಪ್ರದೇಶದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆ ಮತ್ತು ದೇಶದಲ್ಲಿ ನಡೆದ ಪಂಚರಾಜ್ಯ ಚುನಾವಣೆಗಳು ಎರಡನೇ ಅಲೆಗೆ ಮುನ್ನುಡಿ ಬರೆದಿದ್ದವು. ನೀವುಗಳು ಇದನ್ನು ಅರಿತು ಈ ಕೂಡಲೇ ಚುನಾವಣಾ ಪ್ರಚಾರ ಸಭೆಗಳನ್ನು ನಿಲ್ಲಿಸದಿದ್ದರೆ ಎರಡನೇ ಅಲೆಗಿಂತ ಮೂರನೇ ಅಲೆ ಭೀಕರವಾಗಿರುತ್ತದೆ ಎಂದು ನ್ಯಾಯಾಧೀಶರು ಈ ವೇಳೆ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ರಾಜಕೀಯ ಪಕ್ಷಗಳು ಚುನಾವಣೆ ತಯಾರಿಗಾಗಿ ಸಾರ್ವಜನಿಕ ಸಭೆಗಳು ಮತ್ತು ಸಮಾವೇಶಗಳನ್ನು ಆಯೋಜಿಸುತ್ತಿದೆ. ಅಂತಹ ಸಂದರ್ಭಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಖಚಿತಪಡಿಸಿಕೊಳ್ಳುವುದು ಅಸಾಧ್ಯ ಎಂದು ನ್ಯಾಮೂರ್ತಿಗಳು ಹೇಳಿದ್ದಾರೆ. ಆದರೆ, ನ್ಯಾಯಧೀಶರು ಚುನಾವಣಾ ಆಯೋಗ ಮತ್ತು ಸರ್ಕಾರಕ್ಕೆ ಎಷ್ಟೇ ಮನವಿ ಮಾಡಿದ್ದರೂ ಸಹ ಚುನಾವಣಾ ಆಯೋಗ ಮಾತ್ರ ಈಗಾಗಲೇ ತಯಾರಿಸಿರುವ ವೇಳಾಪಟ್ಟಿಗೆ ಅಂಟಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ನಿನ್ನೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು ಮುಂಬರುವ ಪಂಚರಾಜ್ಯ ಚುನಾವಣೆ ನಿಮಿತ್ತ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ನಡೆಸಿದ ಸಚಿವರು, ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕೋವಿಡ್ ಸ್ಥಿತಿ ಗತಿ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಲಸಿಕೆ ಅಭಿಯಾನವನ್ನ ಹೆಚ್ಚಿಸಬೇಕು ಮತ್ತು ಕೋವಿಡ್ ಪರೀಕ್ಷೆಗಳನ್ನು ಸಹ ಹೆಚ್ಚಿಸಬೇಕು ಎಂದು ಸಭೆ ಮುಗಿದ ನಂತರ ಕೇಂದ್ರ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯಗಳಲ್ಲಿ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಒಟ್ಟಾರೆ ಚುನಾವಣೆ ನಡೆಯುವ ರಾಜ್ಯಗಳು ಕೋವಿಡ್ ಮೂರನೇ ಅಲೆಗೆ ಮುನ್ನುಡಿ ಬರೆಯುತ್ತಾ ಅಥವಾ ಪರಿಸ್ಥಿತಿ ಹೀಗೆ ಸುಧಾರಿಸುತ್ತದೆಯೇ ಎಂಬುದನ್ನ ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮೂರನೇ ಅಲೆಸಿದ್ದರಾಮಯ್ಯ
Previous Post

ʻಕರ್ನಾಟಕ ಬಂದ್‌ʼ ಕನ್ನಡಿಗರಿಗೆ MES ವಿರುದ್ಧದ ಹೋರಾಟದಲ್ಲಿ ಉಂಟಾದ ಹಿನ್ನಡೆಯೇ?

Next Post

ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?

ಬಿಜೆಪಿ ಕಾರ್ಯಕಾರಿಣಿ ‘ಸಬ್ ಚೆಂಗಾಸಿ’ ಎಂದರೂ, ಸಚಿವ ಈಶ್ವರಪ್ಪ ಕೆರಳಿದ್ದೇಕೆ?

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada