ಧಾರವಾಡ: ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ Indira Canteen ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ Lunch, breakfast ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ Minister Santhosh Lad ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಚಾಲನೆ ನೀಡಿ, ಮಾತನಾಡಿದರು.
ಇಂದಿರಾ ಕ್ಯಾಂಟೀನ್ Indira Canteen ಅನ್ನುವುದು, ರಾಜ್ಯ ಸರಕಾರದ ಮಹತ್ವದ ಕೊಡುಗೆಯಾಗಿದೆ. ಜಿಲ್ಲೆಯ ಅವಳಿ ನಗರದಲ್ಲಿ 9 ಇಂದಿರಾ ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಇಂದಿರಾ ಕ್ಯಾಂಟೀನ್ದಿಂದ ಪ್ರತಿದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ. ಅದರಂತೆ ಇಂದಿರಾ ಕ್ಯಾಂಟೀನ್ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.
ಇಂದಿರಾ ಕ್ಯಾಂಟೀನ್ ರುಚಿ ಸವಿದ ಸಚಿವ, ಡಿಸಿ: ಸಚಿವ ಸಂತೋಷ ಲಾಡ್ ಅವರು ಇಂದು ಧಾರವಾಡ ನಗರದಲ್ಲಿ ಇಂದಿರಾ ಕ್ಯಾಂಟೀನ್ದಲ್ಲಿ ಹೊಸ ದರದ ಪಟ್ಟಿ ಬಿಡುಗಡೆ ಮಾಡಿ, ವಿವಿಧ ಪ್ರಕಾರದ ಉಪಹಾರ ಸವಿಸಿದರು.ಕ್ಯಾಂಟೀನ್ದಲ್ಲಿ ಸಚಿವ ಸಂತೋಷ ಲಾಡ್ ಹಾಗೂ ಡಿಸಿ ದಿವ್ಯ ಪ್ರಭು ಅವರು ಐದು ರೂ. ಹಣ ಕೊಟ್ಟು ಟೋಕನ್ ಖರೀದಿಸಿದರು. ನಂತರ ಸಚಿವರು ಜೋಳದ ರೊಟ್ಟಿ ಊಟ ಸವಿದರು. ಡಿಸಿ ದಿವ್ಯ ಪ್ರಭು ಅವರು ಇಡ್ಲಿ, ಅವಲಕ್ಕಿ ಮತ್ತು ಶ್ಯಾವಿಗೆ ಸಿಹಿ ಸವಿದರು.
ಈ ಸಂದರ್ಭದಲ್ಲಿ ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಪಾಲಿಕೆ ಸದಸ್ಯ ಡಾ.ಮಯೂರ ಮೋರೆ, ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 9 ಇಂದಿರಾ ಕ್ಯಾಂಟೀನ್ಗಳಿಗೆ ಎರಡು ಪ್ಯಾಕೇಜ್ಗಳ ಮೂಲಕ ಆಹಾರ ಸರಬರಾಜು ಮಾಡಲಾಗುತ್ತದೆ.