• Home
  • About Us
  • ಕರ್ನಾಟಕ
Friday, June 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ.

ಪ್ರತಿಧ್ವನಿ by ಪ್ರತಿಧ್ವನಿ
March 26, 2024
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ.
Share on WhatsAppShare on FacebookShare on Telegram

ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ.

ADVERTISEMENT

ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ರೈತರಿಂದ ಭೂ ಸ್ವಾಧೀನದ ಮೂಲಕ ಪಡೆದುಕೊಂಡ ಭೂಮಿಯ ಒಡೆತನವನ್ನು ಯಾವುದೇ ಕಾರಣಕ್ಕೂ ಉದ್ಯಮಿಗಳ ಒಡೆತನಕ್ಕೆ ಹಸ್ತಾಂತರಿಸಬಾರದು. ಸರ್ಕಾರವೇ ಒಡೆತನವನ್ನು ಉಳಿಸಿಕೊಳ್ಳಬೇಕು ಇದರಿಂದ ಭೂಮಿ ದುರ್ಬಳಕೆ ತಡೆಯಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ನ್ಯಾಯಮೂರ್ತಿ ವಿ ಗೋಪಾಲಗೌಡ ಪ್ರತಿಪಾದಿಸಿದರು.

ಅವರು ಕರ್ನಾಟಕ ಪ್ರಾಂತ ರೈತ ಸಂಘ (KPRS) ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ರಾಜ್ಯ ಸಮಿತಿಗಳು ಬೆಂಗಳೂರಿನ ಗಾಂಧಿ ಭವನದಲ್ಲಿ ,ಬದಲಾಗುತ್ತಿರುವ ಭೂ ನೀತಿ ಹಾಗೂ ಸಂಬಂಧ ಗಳು ಎಂಬ ವಿಷಯದ ಕುರಿತ ರಾಜ್ಯ ಮಟ್ಟದ ದುಂಡು ಮೇಜಿನ ಸಭೆಯನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು.

ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ ಅಭಿವೃದ್ಧಿ ಯನ್ನು ಕಡೆಗಣಿಸಿವೆ. ಅಭಿವೃದ್ಧಿ ಹೆಸರಿನಲ್ಲಿ ವಿವೇಚನಾ ರಹಿತ ನಗರೀಕರಣವನ್ನು ಪ್ರೊತ್ಸಾಹಿಸುತ್ತಿವೆ. ಇದರಿಂದ ಪ್ರತಿ ಹಳ್ಳಿಗಳು ಕೊಳಗೇರಿಗಳಾಗುತ್ತಿವೆ. ಭೂ ರಹಿತ ಕೃಷಿಕರಿಗೆ ಭೂಮಿ ಒದಗಿಸುವ ಮೂಲಕ ರೈತರ ಬದುಕಿಗೆ ಭದ್ರತೆ ಒದಗಿಸಬೇಕು. ಆದರೆ ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ಭೂಮಿ ಹಕ್ಕು ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ ಎಂದು ವಿಷಾಧಿಸಿದರು.

ಪ್ರಗತಿಪರ ಭೂ ಸುಧಾರಣೆಗೆ ಹೆಸರಾಗಿದ್ದ ಕರ್ನಾಟಕ ರಾಜ್ಯ ಇಂದು ಕಾರ್ಪೊರೇಟ್ ಭೂ ಕಬಳಿಕೆಗೆ ಕುಖ್ಯಾತಿ ಪಡೆಯುತ್ತಿದೆ. ಬಡವರು, ದಲಿತರಿಗೆ ಭೂಮಿ ಹಕ್ಕು ನೀಡುವ ,ಉಳುವವನೇ ಭೂಮಿ ಒಡೆಯ ಎಂಬ ಕರ್ನಾಟಕ ಭೂ ಸುಧಾರಣಾ ಕಾಯ್ದೆಗಳನ್ನು ದುರ್ಬಲಗೊಳಿಸಲಾಗಿದೆ. ಈಗ ಉಳ್ಳವರೇ ಭೂಮಿ ಒಡೆಯರು ಎಂಬಂತಾಗಿದೆ. ದೇವರಾಜ ಅರಸು ಕಾಯ್ದೆಯನ್ನು ನಿರ್ನಾಮ ಮಾಡಿ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020 ಅನ್ನು ರದ್ದುಪಡಿಸಬೇಕು ,ಗ್ರಾಮೀಣ ವಸತಿ ರಹಿತರಿಗೆ ಭೂಮಿ ಒದಗಿಸಲು ಜನಪರ ಭೂಮಿ ನೀತಿಯನ್ನು ಅಂಗೀಕರಿಸಬೇಕು. ನೂರಾರು ವರ್ಷಗಳ ಹಿಂದಿನ ದಾಖಲೆಗಳಲ್ಲಿ ಅರಣ್ಯ ಎಂದು ಇದೆ ಎಂಬ ಕಾರಣದಿಂದ ಕಂದಾಯ ಹಕ್ಕು ದಾಖಲೆಗಳನ್ನು ಹೊಂದಿರುವ ರೈತರನ್ನು ಒಕ್ಕಲೆಬ್ಬಿಸುವುದು ಕಾನೂನು ಬಾಹಿರ ಕ್ರಮ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ ನಾಗರಾಜ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ,ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ಜಿಎನ್ ನಾಗರಾಜ್ ,ಯು ಬಸವರಾಜ, ಹೆಚ್ ಆರ್ ನವೀನ್ ಕುಮಾರ್ ಮುಂತಾದವರು ಮಾತಾನಾಡಿದರು.

ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ವಹಿಸಿದ್ದರು.ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ. ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ರೈತರಿಂದ ಭೂ ಸ್ವಾಧೀನದ ಮೂಲಕ ಪಡೆದುಕೊಂಡ ಭೂಮಿಯ ಒಡೆತನವನ್ನು ಯಾವುದೇ ಕಾರಣಕ್ಕೂ ಉದ್ಯಮಿಗಳ ಒಡೆತನಕ್ಕೆ ಹಸ್ತಾಂತರಿಸಬಾರದು. ಸರ್ಕಾರವೇ ಒಡೆತನವನ್ನು ಉಳಿಸಿಕೊಳ್ಳಬೇಕು ಇದರಿಂದ ಭೂಮಿ ದುರ್ಬಳಕೆ ತಡೆಯಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ನ್ಯಾಯಮೂರ್ತಿ ವಿ ಗೋಪಾಲಗೌಡ ಪ್ರತಿಪಾದಿಸಿದರು. ಅವರು ಕರ್ನಾಟಕ ಪ್ರಾಂತ ರೈತ ಸಂಘ (KPRS) ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ರಾಜ್ಯ ಸಮಿತಿಗಳು ಬೆಂಗಳೂರಿನ ಗಾಂಧಿ ಭವನದಲ್ಲಿ ,ಬದಲಾಗುತ್ತಿರುವ ಭೂ ನೀತಿ ಹಾಗೂ ಸಂಬಂಧ ಗಳು ಎಂಬ ವಿಷಯದ ಕುರಿತ ರಾಜ್ಯ ಮಟ್ಟದ ದುಂಡು ಮೇಜಿನ ಸಭೆಯನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ ಅಭಿವೃದ್ಧಿ ಯನ್ನು ಕಡೆಗಣಿಸಿವೆ. ಅಭಿವೃದ್ಧಿ ಹೆಸರಿನಲ್ಲಿ ವಿವೇಚನಾ ರಹಿತ ನಗರೀಕರಣವನ್ನು ಪ್ರೊತ್ಸಾಹಿಸುತ್ತಿವೆ. ಇದರಿಂದ ಪ್ರತಿ ಹಳ್ಳಿಗಳು ಕೊಳಗೇರಿಗಳಾಗುತ್ತಿವೆ. ಭೂ ರಹಿತ ಕೃಷಿಕರಿಗೆ ಭೂಮಿ ಒದಗಿಸುವ ಮೂಲಕ ರೈತರ ಬದುಕಿಗೆ ಭದ್ರತೆ ಒದಗಿಸಬೇಕು. ಆದರೆ ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ಭೂಮಿ ಹಕ್ಕು ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ ಎಂದು ವಿಷಾಧಿಸಿದರು. ಪ್ರಗತಿಪರ ಭೂ ಸುಧಾರಣೆಗೆ ಹೆಸರಾಗಿದ್ದ ಕರ್ನಾಟಕ ರಾಜ್ಯ ಇಂದು ಕಾರ್ಪೊರೇಟ್ ಭೂ ಕಬಳಿಕೆಗೆ ಕುಖ್ಯಾತಿ ಪಡೆಯುತ್ತಿದೆ. ಬಡವರು, ದಲಿತರಿಗೆ ಭೂಮಿ ಹಕ್ಕು ನೀಡುವ ,ಉಳುವವನೇ ಭೂಮಿ ಒಡೆಯ ಎಂಬ ಕರ್ನಾಟಕ ಭೂ ಸುಧಾರಣಾ ಕಾಯ್ದೆಗಳನ್ನು ದುರ್ಬಲಗೊಳಿಸಲಾಗಿದೆ. ಈಗ ಉಳ್ಳವರೇ ಭೂಮಿ ಒಡೆಯರು ಎಂಬಂತಾಗಿದೆ. ದೇವರಾಜ ಅರಸು ಕಾಯ್ದೆಯನ್ನು ನಿರ್ನಾಮ ಮಾಡಿ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020 ಅನ್ನು ರದ್ದುಪಡಿಸಬೇಕು ,ಗ್ರಾಮೀಣ ವಸತಿ ರಹಿತರಿಗೆ ಭೂಮಿ ಒದಗಿಸಲು ಜನಪರ ಭೂಮಿ ನೀತಿಯನ್ನು ಅಂಗೀಕರಿಸಬೇಕು. ನೂರಾರು ವರ್ಷಗಳ ಹಿಂದಿನ ದಾಖಲೆಗಳಲ್ಲಿ ಅರಣ್ಯ ಎಂದು ಇದೆ ಎಂಬ ಕಾರಣದಿಂದ ಕಂದಾಯ ಹಕ್ಕು ದಾಖಲೆಗಳನ್ನು ಹೊಂದಿರುವ ರೈತರನ್ನು ಒಕ್ಕಲೆಬ್ಬಿಸುವುದು ಕಾನೂನು ಬಾಹಿರ ಕ್ರಮ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ ನಾಗರಾಜ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ,ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ಜಿಎನ್ ನಾಗರಾಜ್ ,ಯು ಬಸವರಾಜ, ಹೆಚ್ ಆರ್ ನವೀನ್ ಕುಮಾರ್ ಮುಂತಾದವರು ಮಾತಾನಾಡಿದರು. ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ವಹಿಸಿದ್ದರು.

Tags: #LandregulationsBayyareddyEconomicjusticeIndustriallandownershipJudicialstatementJusticegopalgowdaMavallishankarNagaraj
Previous Post

ಮಂಡ್ಯ ಜನರ ಋಣ ನನ್ನ ಮೇಲಿದೆ ! ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯೋದು ಕನ್ಫರ್ಮ್ ! 

Next Post

ಹಿರಿಯ ನಾಗರಿಕರೇ ನಿಮಗಿದೋ ಗುಡ್ ನ್ಯೂಸ್ ! ನಿಮ್ಮ ಎಫ್​.ಡಿ ಮೇಲಿನ ಬಡ್ಡಿ ದರ 9.5% ಕ್ಕೆ ಏರಿಕೆ !

Related Posts

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
0

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ, ಪರಿಶೀಲನೆ, ಜಿಲ್ಲೆಯ 130 ಮನೆಗಳಿಗೆ ಭಾಗಶಃ ಹಾನಿ, ಜಿಲ್ಲಾಡಳಿತದಿಂದ ತ್ವರಿತ ಪರಿಹಾರ...

Read moreDetails

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

June 13, 2025

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

June 13, 2025

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

June 13, 2025
Next Post
ಹಿರಿಯ ನಾಗರಿಕರೇ ನಿಮಗಿದೋ ಗುಡ್ ನ್ಯೂಸ್ ! ನಿಮ್ಮ ಎಫ್​.ಡಿ ಮೇಲಿನ ಬಡ್ಡಿ ದರ 9.5% ಕ್ಕೆ ಏರಿಕೆ !

ಹಿರಿಯ ನಾಗರಿಕರೇ ನಿಮಗಿದೋ ಗುಡ್ ನ್ಯೂಸ್ ! ನಿಮ್ಮ ಎಫ್​.ಡಿ ಮೇಲಿನ ಬಡ್ಡಿ ದರ 9.5% ಕ್ಕೆ ಏರಿಕೆ !

Please login to join discussion

Recent News

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
Top Story

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

by ಪ್ರತಿಧ್ವನಿ
June 13, 2025
Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

by ಪ್ರತಿಧ್ವನಿ
June 13, 2025
Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

by ಪ್ರತಿಧ್ವನಿ
June 13, 2025
Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

June 13, 2025

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada