• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ.

ಪ್ರತಿಧ್ವನಿ by ಪ್ರತಿಧ್ವನಿ
March 26, 2024
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ.
Share on WhatsAppShare on FacebookShare on Telegram

ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ.

ADVERTISEMENT

ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ರೈತರಿಂದ ಭೂ ಸ್ವಾಧೀನದ ಮೂಲಕ ಪಡೆದುಕೊಂಡ ಭೂಮಿಯ ಒಡೆತನವನ್ನು ಯಾವುದೇ ಕಾರಣಕ್ಕೂ ಉದ್ಯಮಿಗಳ ಒಡೆತನಕ್ಕೆ ಹಸ್ತಾಂತರಿಸಬಾರದು. ಸರ್ಕಾರವೇ ಒಡೆತನವನ್ನು ಉಳಿಸಿಕೊಳ್ಳಬೇಕು ಇದರಿಂದ ಭೂಮಿ ದುರ್ಬಳಕೆ ತಡೆಯಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ನ್ಯಾಯಮೂರ್ತಿ ವಿ ಗೋಪಾಲಗೌಡ ಪ್ರತಿಪಾದಿಸಿದರು.

ಅವರು ಕರ್ನಾಟಕ ಪ್ರಾಂತ ರೈತ ಸಂಘ (KPRS) ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ರಾಜ್ಯ ಸಮಿತಿಗಳು ಬೆಂಗಳೂರಿನ ಗಾಂಧಿ ಭವನದಲ್ಲಿ ,ಬದಲಾಗುತ್ತಿರುವ ಭೂ ನೀತಿ ಹಾಗೂ ಸಂಬಂಧ ಗಳು ಎಂಬ ವಿಷಯದ ಕುರಿತ ರಾಜ್ಯ ಮಟ್ಟದ ದುಂಡು ಮೇಜಿನ ಸಭೆಯನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು.

ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ ಅಭಿವೃದ್ಧಿ ಯನ್ನು ಕಡೆಗಣಿಸಿವೆ. ಅಭಿವೃದ್ಧಿ ಹೆಸರಿನಲ್ಲಿ ವಿವೇಚನಾ ರಹಿತ ನಗರೀಕರಣವನ್ನು ಪ್ರೊತ್ಸಾಹಿಸುತ್ತಿವೆ. ಇದರಿಂದ ಪ್ರತಿ ಹಳ್ಳಿಗಳು ಕೊಳಗೇರಿಗಳಾಗುತ್ತಿವೆ. ಭೂ ರಹಿತ ಕೃಷಿಕರಿಗೆ ಭೂಮಿ ಒದಗಿಸುವ ಮೂಲಕ ರೈತರ ಬದುಕಿಗೆ ಭದ್ರತೆ ಒದಗಿಸಬೇಕು. ಆದರೆ ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ಭೂಮಿ ಹಕ್ಕು ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ ಎಂದು ವಿಷಾಧಿಸಿದರು.

ಪ್ರಗತಿಪರ ಭೂ ಸುಧಾರಣೆಗೆ ಹೆಸರಾಗಿದ್ದ ಕರ್ನಾಟಕ ರಾಜ್ಯ ಇಂದು ಕಾರ್ಪೊರೇಟ್ ಭೂ ಕಬಳಿಕೆಗೆ ಕುಖ್ಯಾತಿ ಪಡೆಯುತ್ತಿದೆ. ಬಡವರು, ದಲಿತರಿಗೆ ಭೂಮಿ ಹಕ್ಕು ನೀಡುವ ,ಉಳುವವನೇ ಭೂಮಿ ಒಡೆಯ ಎಂಬ ಕರ್ನಾಟಕ ಭೂ ಸುಧಾರಣಾ ಕಾಯ್ದೆಗಳನ್ನು ದುರ್ಬಲಗೊಳಿಸಲಾಗಿದೆ. ಈಗ ಉಳ್ಳವರೇ ಭೂಮಿ ಒಡೆಯರು ಎಂಬಂತಾಗಿದೆ. ದೇವರಾಜ ಅರಸು ಕಾಯ್ದೆಯನ್ನು ನಿರ್ನಾಮ ಮಾಡಿ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020 ಅನ್ನು ರದ್ದುಪಡಿಸಬೇಕು ,ಗ್ರಾಮೀಣ ವಸತಿ ರಹಿತರಿಗೆ ಭೂಮಿ ಒದಗಿಸಲು ಜನಪರ ಭೂಮಿ ನೀತಿಯನ್ನು ಅಂಗೀಕರಿಸಬೇಕು. ನೂರಾರು ವರ್ಷಗಳ ಹಿಂದಿನ ದಾಖಲೆಗಳಲ್ಲಿ ಅರಣ್ಯ ಎಂದು ಇದೆ ಎಂಬ ಕಾರಣದಿಂದ ಕಂದಾಯ ಹಕ್ಕು ದಾಖಲೆಗಳನ್ನು ಹೊಂದಿರುವ ರೈತರನ್ನು ಒಕ್ಕಲೆಬ್ಬಿಸುವುದು ಕಾನೂನು ಬಾಹಿರ ಕ್ರಮ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ ನಾಗರಾಜ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ,ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ಜಿಎನ್ ನಾಗರಾಜ್ ,ಯು ಬಸವರಾಜ, ಹೆಚ್ ಆರ್ ನವೀನ್ ಕುಮಾರ್ ಮುಂತಾದವರು ಮಾತಾನಾಡಿದರು.

ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ವಹಿಸಿದ್ದರು.ಕೈಗಾರಿಕಾ ಭೂಮಿಯ ಒಡೆತನ ಸರ್ಕಾರದ ಬಳಿಯೇ ಇರಲಿ -ನ್ಯಾಯಮೂರ್ತಿ ಗೋಪಾಲಗೌಡ ಪ್ರತಿಪಾದನೆ. ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ರೈತರಿಂದ ಭೂ ಸ್ವಾಧೀನದ ಮೂಲಕ ಪಡೆದುಕೊಂಡ ಭೂಮಿಯ ಒಡೆತನವನ್ನು ಯಾವುದೇ ಕಾರಣಕ್ಕೂ ಉದ್ಯಮಿಗಳ ಒಡೆತನಕ್ಕೆ ಹಸ್ತಾಂತರಿಸಬಾರದು. ಸರ್ಕಾರವೇ ಒಡೆತನವನ್ನು ಉಳಿಸಿಕೊಳ್ಳಬೇಕು ಇದರಿಂದ ಭೂಮಿ ದುರ್ಬಳಕೆ ತಡೆಯಲು ಸಾಧ್ಯ ಎಂದು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ನ್ಯಾಯಮೂರ್ತಿ ವಿ ಗೋಪಾಲಗೌಡ ಪ್ರತಿಪಾದಿಸಿದರು. ಅವರು ಕರ್ನಾಟಕ ಪ್ರಾಂತ ರೈತ ಸಂಘ (KPRS) ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ರಾಜ್ಯ ಸಮಿತಿಗಳು ಬೆಂಗಳೂರಿನ ಗಾಂಧಿ ಭವನದಲ್ಲಿ ,ಬದಲಾಗುತ್ತಿರುವ ಭೂ ನೀತಿ ಹಾಗೂ ಸಂಬಂಧ ಗಳು ಎಂಬ ವಿಷಯದ ಕುರಿತ ರಾಜ್ಯ ಮಟ್ಟದ ದುಂಡು ಮೇಜಿನ ಸಭೆಯನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಸಂವಿಧಾನದ ತಿರುಳು ತಿಳಿಯದವರು ಜನಪ್ರತಿನಿಧಿಗಳಾಗುತ್ತಿದ್ದಾರೆ. ಸಂವಿಧಾನ ಬದ್ದ ,ಶಾಸನ ಬದ್ದ ಕರ್ತವ್ಯಗಳನ್ನು ಸರಿಯಾಗಿ ಸರ್ಕಾರಗಳು ನಿರ್ವಹಿಸುತ್ತಿಲ್ಲ. ಸರ್ಕಾರಗಳು ಗ್ರಾಮಗಳ ಅಭಿವೃದ್ಧಿ ಯನ್ನು ಕಡೆಗಣಿಸಿವೆ. ಅಭಿವೃದ್ಧಿ ಹೆಸರಿನಲ್ಲಿ ವಿವೇಚನಾ ರಹಿತ ನಗರೀಕರಣವನ್ನು ಪ್ರೊತ್ಸಾಹಿಸುತ್ತಿವೆ. ಇದರಿಂದ ಪ್ರತಿ ಹಳ್ಳಿಗಳು ಕೊಳಗೇರಿಗಳಾಗುತ್ತಿವೆ. ಭೂ ರಹಿತ ಕೃಷಿಕರಿಗೆ ಭೂಮಿ ಒದಗಿಸುವ ಮೂಲಕ ರೈತರ ಬದುಕಿಗೆ ಭದ್ರತೆ ಒದಗಿಸಬೇಕು. ಆದರೆ ಬಗರ್ ಹುಕುಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ಭೂಮಿ ಹಕ್ಕು ನೀಡಲು ಸರ್ಕಾರಗಳು ಹಿಂದೇಟು ಹಾಕುತ್ತಿವೆ ಎಂದು ವಿಷಾಧಿಸಿದರು. ಪ್ರಗತಿಪರ ಭೂ ಸುಧಾರಣೆಗೆ ಹೆಸರಾಗಿದ್ದ ಕರ್ನಾಟಕ ರಾಜ್ಯ ಇಂದು ಕಾರ್ಪೊರೇಟ್ ಭೂ ಕಬಳಿಕೆಗೆ ಕುಖ್ಯಾತಿ ಪಡೆಯುತ್ತಿದೆ. ಬಡವರು, ದಲಿತರಿಗೆ ಭೂಮಿ ಹಕ್ಕು ನೀಡುವ ,ಉಳುವವನೇ ಭೂಮಿ ಒಡೆಯ ಎಂಬ ಕರ್ನಾಟಕ ಭೂ ಸುಧಾರಣಾ ಕಾಯ್ದೆಗಳನ್ನು ದುರ್ಬಲಗೊಳಿಸಲಾಗಿದೆ. ಈಗ ಉಳ್ಳವರೇ ಭೂಮಿ ಒಡೆಯರು ಎಂಬಂತಾಗಿದೆ. ದೇವರಾಜ ಅರಸು ಕಾಯ್ದೆಯನ್ನು ನಿರ್ನಾಮ ಮಾಡಿ ತಂದಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020 ಅನ್ನು ರದ್ದುಪಡಿಸಬೇಕು ,ಗ್ರಾಮೀಣ ವಸತಿ ರಹಿತರಿಗೆ ಭೂಮಿ ಒದಗಿಸಲು ಜನಪರ ಭೂಮಿ ನೀತಿಯನ್ನು ಅಂಗೀಕರಿಸಬೇಕು. ನೂರಾರು ವರ್ಷಗಳ ಹಿಂದಿನ ದಾಖಲೆಗಳಲ್ಲಿ ಅರಣ್ಯ ಎಂದು ಇದೆ ಎಂಬ ಕಾರಣದಿಂದ ಕಂದಾಯ ಹಕ್ಕು ದಾಖಲೆಗಳನ್ನು ಹೊಂದಿರುವ ರೈತರನ್ನು ಒಕ್ಕಲೆಬ್ಬಿಸುವುದು ಕಾನೂನು ಬಾಹಿರ ಕ್ರಮ ಎಂದು ತಿಳಿಸಿದರು. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ವಿ ನಾಗರಾಜ್, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ,ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ಜಿಎನ್ ನಾಗರಾಜ್ ,ಯು ಬಸವರಾಜ, ಹೆಚ್ ಆರ್ ನವೀನ್ ಕುಮಾರ್ ಮುಂತಾದವರು ಮಾತಾನಾಡಿದರು. ದುಂಡು ಮೇಜಿನ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ವಹಿಸಿದ್ದರು.

Tags: #LandregulationsBayyareddyEconomicjusticeIndustriallandownershipJudicialstatementJusticegopalgowdaMavallishankarNagaraj
Previous Post

ಮಂಡ್ಯ ಜನರ ಋಣ ನನ್ನ ಮೇಲಿದೆ ! ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯೋದು ಕನ್ಫರ್ಮ್ ! 

Next Post

ಹಿರಿಯ ನಾಗರಿಕರೇ ನಿಮಗಿದೋ ಗುಡ್ ನ್ಯೂಸ್ ! ನಿಮ್ಮ ಎಫ್​.ಡಿ ಮೇಲಿನ ಬಡ್ಡಿ ದರ 9.5% ಕ್ಕೆ ಏರಿಕೆ !

Related Posts

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌
ಅಂಕಣ

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

by ಪ್ರತಿಧ್ವನಿ
May 26, 2026
0

ನಾ ದಿವಾಕರ ಭಾರತದ ಪ್ರಜಾತಂತ್ರ ವ್ಯವಸ್ಥೆ ಹಲವು ಮಗ್ಗುಲುಗಳಿಂದ ಹಲ್ಲೆಗೊಳಗಾಗುತ್ತಿದೆ. ಮೂಲತಃ ತಳಪಾಯದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳೇ ಇಲ್ಲದ ಒಂದು ದೇಶದಲ್ಲಿ ಪ್ರಜಾಪ್ರಭುತ್ವದ ಉನ್ನತ ಮೌಲ್ಯಗಳನ್ನು ಬಿತ್ತುವ ಕಠಿಣ...

Read moreDetails
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
Next Post
ಹಿರಿಯ ನಾಗರಿಕರೇ ನಿಮಗಿದೋ ಗುಡ್ ನ್ಯೂಸ್ ! ನಿಮ್ಮ ಎಫ್​.ಡಿ ಮೇಲಿನ ಬಡ್ಡಿ ದರ 9.5% ಕ್ಕೆ ಏರಿಕೆ !

ಹಿರಿಯ ನಾಗರಿಕರೇ ನಿಮಗಿದೋ ಗುಡ್ ನ್ಯೂಸ್ ! ನಿಮ್ಮ ಎಫ್​.ಡಿ ಮೇಲಿನ ಬಡ್ಡಿ ದರ 9.5% ಕ್ಕೆ ಏರಿಕೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada