• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಕರ್ನಾಟಕ
0
ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವರು
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ರಾಜ್ಯ ಸರಕಾರವು ಮಹತ್ವಾಕಾಂಕ್ಷೆಯೊಂದಿಗೆ ರಚಿಸಿರುವ ಮಶೀನ್ ಟೂಲ್ಸ್ ವಲಯದ ವಿಷನ್ ಗ್ರೂಪಿನ ಚೊಚ್ಚಲ ಸಭೆಯು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ಖನಿಜ ಭವನದಲ್ಲಿ ನಡೆಯಿತು. ಈ ವಲಯದ ಗಣ್ಯ ಉದ್ಯಮಿಗಳು ಭಾಗವಹಿಸಿದ್ದ ಸಭೆಯಲ್ಲಿ ದೇಶದಲ್ಲಿ ಅಗ್ರಸ್ಥಾನದಲ್ಲಿರುವ ರಾಜ್ಯದ ಮಶೀನ್ ಟೂಲ್ಸ್ ವಲಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಬಗ್ಗೆ ಸಲಹೆ, ಸೂಚನೆಗಳು ಮೂಡಿಬಂದವು.

ಸಭೆಯಲ್ಲಿ ಮಾತನಾಡಿದ ಸಚಿವರು, ಮಶೀನ್ ಟೂಲ್ ವಲಯವು ಜಾಗತಿಕ ಸ್ಪರ್ಧೆಯನ್ನು ಗಮನದಲ್ಲಿ ಇಟ್ಟುಕೊಂಡು ಸೂಕ್ಷ್ಮಾತಿಸೂಕ್ಷ್ಮ ಬಿಡಿಭಾಗಗಳನ್ನೂ ತಯಾರಿಸುವಂತಹ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾದ ಜರೂರಿದೆ. ಈ ಕುರಿತು ಉದ್ಯಮಿಗಳು ಸರಕಾರಕ್ಕೆ ರಚನಾತ್ಮಕ ಸಲಹೆ ನೀಡಬೇಕು. ಇದನ್ನು ಸರಕಾರವು ಗಂಭೀರವಾಗಿ ಪರಿಗಣಿಸಿ, ಮುಂದಿನ ಹೆಜ್ಜೆ ಇಡಲಿದೆ ಎಂದರು.

ಮಶೀನ್ ಟೂಲ್ಸ್ ತಯಾರಿಕೆಯಲ್ಲಿ ಪುಣೆ ಮತ್ತು ರಾಜಕೋಟ್ ಕೂಡ ಮುಂಚೂಣಿಯಲ್ಲಿವೆ. ರಾಜ್ಯದಲ್ಲಿ ಈ ವಲಯದಲ್ಲಿ ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿ ಮುಂತಾದವುಗಳ ಕಡೆ ಗಮನ ಕೊಡಬೇಕಾಗಿದೆ. ಮದ್ರಾಸ್ ಐಐಟಿ ಸಂಸ್ಥೆಯಲ್ಲಿ ಮಶೀನ್ ಟೂಲ್ ವಲಯದ ಸಂಶೋಧನಾ ಅನ್ವಯಿಕತೆಗೆ ವಿಶೇಷ ಕೇಂದ್ರವಿದೆ. ಇದಕ್ಕೆ ಸರಕಾರವು ಶೇ 80ರಷ್ಟು ಮತ್ತು ಉದ್ಯಮ ವಲಯವು ಮಿಕ್ಕ ಶೇ 20ರಷ್ಟು ವೆಚ್ಚ ಭರಿಸುತ್ತಿವೆ. ಕರ್ನಾಟಕದಲ್ಲೂ ಇಂಥದೊಂದು ಕೇಂದ್ರವನ್ನು ಸ್ಥಾಪಿಸಬೇಕು ಎಂದು ಉದ್ಯಮಿಗಳು ಸಲಹೆ ನೀಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಮಶೀನ್ ಟೂಲ್ ವಿಭಾಗದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ ಕೊಡಬೇಕಾಗಿದೆ. ಮೆಕ್ಯಾನಿಕಲ್ ಎಂಜಿನಿಯರುಗಳಿಗೆ ಉದ್ಯಮದ ನೇರ ಅನುಭವವನ್ನು ನಾವು ಒದಗಿಸಬೇಕಾಗಿದೆ. ಇದಕ್ಕಾಗಿ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜುಗಳ ಜತೆ ಒಡಂಬಡಿಕೆಗೆ ನಾವು ಸಿದ್ಧರಾಗಿದ್ದೇವೆ. ಜಗತ್ತಿನ ಅತ್ಯುತ್ತಮ ಉದ್ಯಮಗಳು ನಮ್ಮಲ್ಲಿಗೆ ಬಂದು ಹೂಡಿಕೆ ಮಾಡುವಂತೆ ಆಗಬೇಕು. 2025ರ ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಶೀನ್ ಟೂಲ್ಸ್ ವಲಯದ ಕಡೆಗೂ ಆದ್ಯ ಗಮನ ಕೊಡಲಾಗುವುದು ಎಂದು ಸಚಿವರು ನುಡಿದರು.

ಸದ್ಯಕ್ಕೆ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಶೀನ್ ಟೂಲ್ಸ್ ಪಾರ್ಕ್ ಇದೆ. ಇದರ ಜೊತೆಗೆ ಇನ್ನೂ ಹಲವು ಉಪಕ್ರಮಗಳು ಆಗಬೇಕಾಗಿದೆ. ಜತೆಗೆ ನಮ್ಮ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸಿ, ಗಮನ ಸೆಳೆಯಬೇಕು. ಇದಕ್ಕೆ ಸರಕಾರ ಅಗತ್ಯ ಬೆಂಬಲ ಕೊಡಲಿದೆ. ಉದ್ಯಮಿಗಳು ಸರಕಾರ ರಚಿಸಿರುವ ವಿಷನ್ ಗ್ರೂಪ್ ಅನ್ನು ಕೇವಲ ಸಲಹಾ ಸಂಸ್ಥೆ ಎಂದು ಭಾವಿಸಬಾರದು ಎಂದು ಅವರು ಒತ್ತಿ ಹೇಳಿದರು.

ಉದ್ಯಮದ ಬೇರೆಬೇರೆ ವಲಯಗಳಲ್ಲಿ ಯಾವ ಬಗೆಯ ಕೌಶಲ್ಯ ಬೇಕು ಎನ್ನುವುದನ್ನು ಉದ್ಯಮಿಗಳು ಮುಕ್ತವಾಗಿ ಹೇಳಬೇಕು. ಈಗಿನ ಪರಿಸ್ಥಿತಿ ನೋಡಿದರೆ, ನಮ್ಮಲ್ಲಿ ಫಿನಿಶಿಂಗ್ ಸ್ಕೂಲುಗಳ ಅಗತ್ಯವಿದೆ ಎನ್ನುವುದು ಸ್ಪಷ್ಟವಾಗಿದೆ. ಉದ್ಯಮಿಗಳು ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಅಗತ್ಯವಿರುವ ನೀಲ ನಕಾಶೆಯನ್ನು ಒದಗಿಸಬೇಕು ಎಂದು ಅವರು ಕೋರಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಷನ್ ಗ್ರೂಪ್ ಉಪಾಧ್ಯಕ್ಷ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸದಸ್ಯರಾದ ಟಿಮ್ ಕೆನ್ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಕೌಲ್, ವೈಜಿ-1 ವ್ಯವಸ್ಥಾಪಕ ನಿರ್ದೇಶಕ ಸಾರಂಗ್ ವಿ ಪಾರೀಖ್, ಇಂಡಿಯನ್ ಮಶೀನ್ ಟೂಲ್ಸ್ ಮ್ಯಾನಫ್ಯಾಕ್ಚರರ್ಸ್ ಅಸೋಸಿಯೇಶನ್ ಅಧ್ಯಕ್ಷ ರಾಜೇಂದ್ರ ಎಸ್ ರಾಜಮಾನೆ, ಹಿರಿಯ ಸಲಹೆಗಾರ ಸತೀಶಕುಮಾರ್, ಕೆಐಎಡಿಬಿ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಮತ್ತಿತರರು ಉಪಸ್ಥಿತರಿದ್ದರು.

Tags: meetingVision Group
Previous Post

10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Next Post

ನಟ ಯುವ ಪತ್ನಿ ಶ್ರೀದೇವಿ ಪರ ವಕೀಲರಿಂದ ನೇರಾನೇರ ತಿರುಗೇಟು

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post

ನಟ ಯುವ ಪತ್ನಿ ಶ್ರೀದೇವಿ ಪರ ವಕೀಲರಿಂದ ನೇರಾನೇರ ತಿರುಗೇಟು

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada