• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಲೆ ತೆಗೆಯಲು 10 ಕೋಟಿ ರೂ. ಬದಲು ನನ್ನ ತಲೆ ಬಾಚಲು 10 ರೂ. ಬಾಚಣಿಗೆ ಸಾಕು: ಉದಯನಿಧಿ ಸ್ಟಾಲಿನ್

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in Top Story, ಇದೀಗ, ದೇಶ, ರಾಜಕೀಯ
0
ಉದಯನಿಧಿ ಸ್ಟಾಲಿನ್‌

ಉದಯನಿಧಿ ಸ್ಟಾಲಿನ್‌

Share on WhatsAppShare on FacebookShare on Telegram

ಸನಾತನ ಧರ್ಮ ನಿರ್ಮೂಲನೆಯಾಗಬೇಕು ಎಂಬ ಹೇಳಿಕೆ ನೀಡಿದವರ ತಲೆ ಕಡಿದು ತಂದವರಿಗೆ 10 ಕೋಟಿ ರೂ. ಕೊಡುವುದಾಗಿ ಹೇಳಿದ್ದ ಉತ್ತರ ಪ್ರದೇಶದ ಪರಮಹಂಸ ಆಚಾರ್ಯ ಅವರಿಗೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಮಂಗಳವಾರ (ಸೆಪ್ಟೆಂಬರ್ 5) ತಿರುಗೇಟು ನೀಡಿದ್ದಾರೆ.

ADVERTISEMENT

“ನನ್ನ ತಲೆ ತೆಗೆಯಲು 10 ಕೋಟಿ ರೂ. ನೀಡುವ ಬದಲಿಗೆ 10 ರೂ. ಬಾಚಣಿಗೆ ತಂದರೆ ಸಾಕು ನನ್ನ ತಲೆ ಬಾಚಬಹುದು” ಎಂದು ಹೇಳಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಹೇಳಿಕೆಯನ್ನು ಬೆಂಬಲಿಸಿದ್ದರು. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ತಪಸ್ವಿ ಚಾವಿಯ ಪ್ರಧಾನ ಅರ್ಚಕ ಪರಮಹಂಸ ಆಚಾರ್ಯ ಅವರು, ಸ್ಟಾಲಿನ್ ಅವರನ್ನು ಕೊಂದು ತಲೆ ತರುವವರಿಗೆ 10 ಕೋಟಿ ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದರು.

ಈ ಹೇಳಿಕೆಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿರುವ ಸ್ಟಾಲಿನ್, “ತಮಿಳುನಾಡಿಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿಯ ಮೊಮ್ಮಗ ನಾನು. ಇಂಥ ಬೆದರಿಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. 710ರ ಬಾಚಣಿಗೆ ತಂದು ನನ್ನ ತಲೆಯನ್ನು ಬಾಚಿದರೆ ಸಾಕು” ಲಘು ಹಾಸ್ಯದ ಪ್ರತಿಕ್ರಿಯೆ ನೀಡಿದ್ದಾರೆ.

“ನಮಗೆ ಇದೇನೂ ಹೊಸತಲ್ಲ. ಇಂಥ ಬೆದರಿಕೆಗಳಿಗೆ ಹೆದರುವವರೂ ನಾವಲ್ಲ. ತಮಿಳಿಗಾಗಿ ನನ್ನ ಅಜ್ಜ ರೈಲಿನ ಗಾಲಿಗೆ ತಲೆ ಕೊಟ್ಟವರು” ಎಂದು ಕುಟುಂಬದ ತ್ಯಾಗದ ಹಿನ್ನೆಲೆ ವಿವರಿಸಿದ್ದಾರೆ.

ಉದಯನಿಧಿ ಅವರು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮಗ ಹಾಗೂ ದಿವಂಗತ ಎಂ.ಕರುಣಾನಿಧಿ ಅವರ ಮೊಮ್ಮಗ. ಇತ್ತೀಚೆಗೆ ನಡೆದಿದ್ದ ಸಾಹಿತಿಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಸನಾತನ ಧರ್ಮ ಎಂಬುದು ಮಲೇರಿಯಾ ಹಾಗೂ ಡೇಂಗಿ ಇದ್ದಂತೆ. ಇದನ್ನು ನಿರ್ಮೂಲನೆ ಮಾಡಬೇಕು’ ಎಂದಿದ್ದರು ಎಂಬುದು ವಿವಾದಕ್ಕೆ ಕಾರಣವಾಗಿತ್ತು.

ಈ ಹೇಳಿಕೆ ದೇಶದ್ರೋಹಕ್ಕೆ ಸಮ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಆಮ್ ಆದ್ಮ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಈ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿತ್ತು. ಕಾಂಗ್ರೆಸ್ನಲ್ಲಿ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.

ತಮ್ಮ ವಿರುದ್ಧ ಕೇಳಿಬಂದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಉದಯನಿಧಿ, ‘ಬಿಜೆಪಿ ನಾಯಕರ ಹೇಳಿಕೆ ಸುಳ್ಳು ಸುದ್ದಿ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ನಾಯಕರ ಕೊಲೆಗೆ ಅವರು ನೀಡಿದ ಹೇಳಿಕೆಯೇ? ಎಂದು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

“ನಾವು ತತ್ವಗಳ ಕುರಿತು ಮಾತನಾಡುತ್ತಿದ್ದೇವೆ. ಸನಾತನ ಧರ್ಮ ಎಂದರೆ ಏನು? ಶಾಶ್ವತ ಮತ್ತು ಬದಲಾಗದ್ದು ಎಂಬ ವಿವರಣೆ ಇದೆ. ನಮ್ಮ ದ್ರಾವಿಡ ಮಾದರಿಯಲ್ಲಿ ಪ್ರತಿಯೊಂದರಲ್ಲೂ ಬದಲಾವಣೆ ಕಾಣುವುದಾಗಿದೆ. ಕೆಲ ವರ್ಷಗಳ ಹಿಂದೆ. ಮಹಿಳೆಯರು ವಿದ್ಯೆ ಕಲಿಯಬಾರದು ಎಂದು ಅವರು ಹೇಳಿದ್ದರು. ತಮ್ಮ ದೇಹದ ಮೇಲ್ಬಾಗವನ್ನು ಮಹಿಳೆಯರು ವಸ್ತ್ರದಿಂದ ಮುಚ್ಚಬಾರದು ಎಂದಿದ್ದರು. ದೇವಾಲಯದೊಳಗೆ ಪ್ರವೇಶಿಸಬಾರದು ಎಂದೂ ಹೇಳಿದ್ದರು. ನಾವು ಅವುಗಳನ್ನು ಬದಲಿಸಿದ್ದೇವೆ. ಇದು ದ್ರಾವಿಡ ಮಾದರಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ಪೆರಿಯಾರ್ ಅವರ ವಿಚಾರವಾದಿ ತತ್ವಗಳ ಮೇಲೆ ಸ್ಥಾಪಿತವಾದ ಡಿಎಂಕೆ ಪಕ್ಷವು, ದಶಕಗಳಿಂದ ಸನಾತನ ಧರ್ಮವನ್ನು ವಿರೋಧಿಸಿದೆ. ಸನಾತನ ಧರ್ಮದ ಅನುಯಾಯಿಗಳ ಜಾತಿಯ ಆಧಾರದ ಮೇಲಿನ ದಬ್ಬಾಳಿಕೆಗೆ ಹಲವರು ಒಳಗಾಗಿದ್ದಾರೆ. ಸಮಾನತೆ, ಶಿಕ್ಷಣ ಮತ್ತು ಪೂಜಾ ಸ್ಥಳಗಳಿಗೆ ಪ್ರವೇಶ ನಿರಾಕರಿಸಲಾಗಿದೆ. ಸತಿ ಸೇರಿದಂತೆ ಮಹಿಳೆಯರ ವಿರುದ್ಧ ಹಲವು ರೀತಿಯ ದೌರ್ಜನ್ಯ ಎಸಗಲಾಗಿದೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ ಎಂದು ವರದಿಯಾಗಿದೆ.

Tags: Ayodhya SwamijiSanatana DhramaUdayanidhi Stalinಉದಯನಿಧಿ ಸ್ಟಾಲಿನ್‌ಸನಾತನ ಧರ್ಮ
Previous Post

ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ

Next Post

ಪಕ್ಷಾತೀತವಾಗಿ ಕಾವೇರಿ ಸಮಸ್ಯೆ ಎದುರಿಸಬೇಕಿದೆ: ಸಚಿವ ಚಲುವರಾಯಸ್ವಾಮಿ

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
ಸಚಿವ ಚಲುವರಾಯಸ್ವಾಮಿ

ಪಕ್ಷಾತೀತವಾಗಿ ಕಾವೇರಿ ಸಮಸ್ಯೆ ಎದುರಿಸಬೇಕಿದೆ: ಸಚಿವ ಚಲುವರಾಯಸ್ವಾಮಿ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada