• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 24, 2025
in Top Story, ರಾಜಕೀಯ
0
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು ನಗರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಆಸ್ತಿಗಳ ಬಿ ಖಾತೆ ಎ ಖಾತಾಗೆ ಪರಿವರ್ತನೆ ತಯಾರಿ

ಬೆಂಗಳೂರು, ಅ.24:

“ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕಾದ ಬೆಂಗಳೂರು ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆವರು ತಿಳಿಸಿದರು.

GBA ವ್ಯಾಪ್ತಿ ಎಷ್ಟು ಹೆಚ್ಚಾಗುತ್ತೆ? ಹೊಸ ಮಾಸ್ಟರ್ ಪ್ಲ್ಯಾನ್ ಬಗ್ಗೆ DCM ಡಿಕೆಶಿ ರಿಯಾಕ್ಷನ್ #pratidhvani

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದರು.

“ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ” ಎಂದರು.

“ನಿನ್ನೆ ನಗರ ಪ್ರದಕ್ಷಿಣೆ ಮಾಡಿ ಅವಲೋಕನ ನಡೆಸಿದೆ. ಈಗಿನಿಂದಲೇ ರಸ್ತೆ ಅಗಲೀಕರಣ‌ ಮತ್ತಿತರ ಮೂಲಸೌಕರ್ಯಗಳ ಅಭಿವೃದ್ಧಿ ಮಾಡಬೇಕಿದೆ. ಇದಕ್ಕೆ ಸೂಕ್ತ ಯೋಜನೆ ಮಾಡಬೇಕಿದೆ. ಸಿಎಂಸಿ, ಪಟ್ಟಣ ಪಂಚಾಯತಿ ಸೇರಿದಂತೆ ಒಂದಷ್ಟು ‌ಪ್ರದೇಶಗಳಲ್ಲಿ ರಸ್ತೆಗಳು ಕಿರಿದಾಗಿವೆ. ಭವಿಷ್ಯದಲ್ಲಿ ಕಷ್ಟಪಡುವ ಬದಲು ಈಗಲೇ ಪಿಡ್ಬ್ಲೂಡಿ, ನಗರ ಯೋಜನೆ ಇಲಾಖೆಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಎಂದು ಸೂಚನೆ ನೀಡಿದ್ದೇನೆ” ಎಂದು ಮಾಹಿತಿ ನೀಡಿದರು.

ಬೆಂಗಳೂರು ಹೊರ ವಲಯದಲ್ಲೂ ಬಿ ಖಾತಾಗಳನ್ನು ಎ ಖಾತಾಗೆ ಪರಿವರ್ತನೆಗೆ ತಯಾರಿ:

“ಹೊರವಲಯ ಗಡಿಭಾಗದ ಒಂದಷ್ಟು ಪಂಚಾಯತಿಗಳು, ಮುನ್ಸಿಪಾಲಿಟಿಗಳು ಭವಿಷ್ಯದಲ್ಲಿ ಬೆಂಗಳೂರು ನಗರದ ಒಳಗೆ ಸೇರುತ್ತವೆಯಾದ್ದರಿಂದ ಈಗಿನಿಂದಲೇ ಮಾನಸಿಕವಾಗಿ ತಯಾರು ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿಯೂ ಸಹ ಬಿ ಖಾತೆಯಿಂದ ಎ ಖಾತೆ ಪರಿವರ್ತನೆ ವ್ಯವಸ್ಥೆಗೆ ತಯಾರಿ ನಡೆಸಲು ಸೂಚನೆ ನೀಡಿದ್ದೇನೆ. ಬೆಂಗಳೂರು ನಗರದಲ್ಲಿ ಆಸ್ತಿ ಮೌಲ್ಯ ಆಧಾರಿತ ತೆರಿಗೆ ಸಂಗ್ರಹದಂತೆ ಈ ಭಾಗದಲ್ಲಿಯೂ ಸಹ ತೆರಿಗೆ ಸಂಗ್ರಹದಲ್ಲಿ ಏಕರೂಪತೆ ತರಲು ಸೂಚಿಸಿದ್ದೇನೆ” ಎಂದು ತಿಳಿಸಿದರು.

“ಈಗಿನಿಂದಲೇ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು ಎಂದು ಸೂಚನೆ ನೀಡಿದ್ದೇನೆ. ಏಕೆಂದರೆ ಮುಂದೆ ನಾವೇ ನೀರು ಮತ್ತಿತರ ಮೂಲಸೌಕರ್ಯಗಳನ್ನು ನೀಡಬೇಕಾಗುತ್ತದೆ. ಆದ ಕಾರಣ ಅಕ್ರಮ ಕಟ್ಟಡ, ಬಡಾವಣೆ ನಿರ್ಮಾಣ ಯೋಜನೆಗಳಿಗೆ ಕಡಿವಾಣ ಹಾಕಬೇಕಿದೆ. ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿರುವ ರಾಜಕಾಲುವೆ ಒತ್ತುವರಿ, ಸರ್ಕಾರಿ ಆಸ್ತಿ ಒತ್ತುವರಿ ಸಮಸ್ಯೆ ಈ ಭಾಗದಲ್ಲಿಯೂ ಇರುವ ಬಗ್ಗೆ ಕೇಳಿದಾಗ, ” ಬೆಂಗಳೂರು ನಗರ ಮಾದರಿಯಲ್ಲಿಯೇ ಇಲ್ಲಿಯೂ ಎಲ್ಲ ಆಸ್ತಿ ದಾಖಲೆಗಳನ್ನು ಈಗಿನಿಂದಲೇ ಡಿಜಿಟಲೀಕರಣ ಮಾಡಲಾಗುವುದು. 110 ಹಳ್ಳಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ಸೇರ್ಪಡೆಯಾಗುವ ಪ್ರದೇಶಗಳಲ್ಲಿ ನಾಗರಿಕ ಪ್ರಜ್ಞೆ ಮೂಡಿಸಬೇಕಿದೆ. ನಗರ ವ್ಯಾಪ್ತಿಯಲ್ಲಿ ಬದುಕಲು ಬೇಕಾದ ರೀತಿ-ನೀತಿಗಳ ಬಗ್ಗೆ ಮಾನಸಿಕವಾಗಿ ತಯಾರು ಮಾಡಲಾಗುತ್ತದೆ. ಕಸವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತಿದೆ. ಬೆಂಗಳೂರು ನಗರದ ಮಾದರಿಯಲ್ಲಿ ಕಸ ಸಂಗ್ರಹ ವ್ಯವಸ್ಥೆ ಬಗ್ಗೆಯೂ ಸೂಚನೆ ನೀಡಲಾಗಿದೆ” ಎಂದರು.

ಬೆಂಗಳೂರು ದಕ್ಷಿಣದಲ್ಲಿ ಮಾತ್ರ ಹೊಸ ಪ್ರದೇಶಗಳನ್ನು ಸೇರಿಸಿಕೊಳ್ಳಲಾಗುವುದೇ ಎಂದು ಕೇಳಿದಾಗ, “ಬೆಂಗಳೂರು ಸುತ್ತಲಿನ ಗಡಿ ಭಾಗದ ಎಲ್ಲ 12 ಸ್ಥಳೀಯ ಸಂಸ್ಥೆಗಳ ಸೇರ್ಪಡೆ ಬಗ್ಗೆ ಯೋಜಿಸಲಾಗುತ್ತಿದೆ. ಮೊದಲು ಅಧಿಕಾರಿಗಳು ವರದಿ ನೀಡಲಿ. ಅದರ ಜೊತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಸಕರು, ಸಂಸದರ ಜೊತೆ ಚರ್ಚೆ ‌ಮಾಡಲು ತಿಳಿಸಿದ್ದೇನೆ” ಎಂದರು.

podcast with Bramha Tattoo Girish :ಯಾರಿಗೆ ಯಾವ ಟ್ಯಾಟೂ ಹಾಕಿಸಿದ್ರೆ ಒಳ್ಳೆಯದು.? #tattoo #podcast #actor
Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

Next Post

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada