• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ದಲಿತ ಸಾಹಿತಿ ಅರ್ಜುನ್‌ ಮೌರ್ಯಗೆ ಅಪಮಾನ, ಕೊಡಗು ವಿಶ್ವವಿದ್ಯಾಲಯದಲ್ಲಿದೆಯೇ ಜಾತಿ ಪದ್ದತಿ?

ಪ್ರತಿಧ್ವನಿ by ಪ್ರತಿಧ್ವನಿ
August 9, 2023
in ಇದೀಗ, ಕರ್ನಾಟಕ
0
ಅರ್ಜುನ್‌ ಮೌರ್ಯ
Share on WhatsAppShare on FacebookShare on Telegram

ಕೊಡಗಿನ ದಲಿತ ಸಾಹಿತಿ, ಕವಿ ಹಾಗೂ ಬರಹಗಾರರಾದ ಅರ್ಜುನ್ ಮೌರ್ಯ ಅವರಿಗೆ ಅವಮಾನವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ADVERTISEMENT

ಇತ್ತೀಚೆಗಷ್ಟೆ ಸ್ಟೋರಿ ಮಿರರ್ ಸಂಸ್ಥೆಯ ʼಆಥರ್ ಆಫ್ ದ ಇಯರ್ 2022ʼ ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಅರ್ಜುನ್ ಮೌರ್ಯರವರು ತಮ್ಮ ಮುಂದಿನ ಕವನ ಸಂಕಲನ ಕೃತಿ ʼದುಡಿʼಯ ಬಿಡುಗಡೆಗಾಗಿ ಕೊಡಗು ವಿಶ್ವವಿದ್ಯಾಲಯ ʼಜ್ಞಾನ ಕಾವೇರಿʼ ಆವರಣದಲ್ಲಿನ ಕಾವೇರಿ ಸಭಾಂಗಣದಲ್ಲಿ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಆದರೆ ವಿಶ್ವವಿದ್ಯಾಲಯ ಮಳೆಯ ಕಾರಣ ನೀಡಿ ಅರ್ಜುನ್‌ ಮೌರ್ಯ ಅವರ ಕೃತಿ ಬಿಡುಗಡೆ ಸಮಾರಂಭನ್ನು ರದ್ದು ಮಾಡಿದೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ನಿಗದಿಯಾಗಿತ್ತು. ಪರಿಷತ್‌ನ ಅಧ್ಯಕ್ಷ ಕೇಶವ್‌ ಕಾಮತ್‌ ಅವರನ್ನು ಉದ್ಘಾಟನೆಗೆ, ದುಡಿ ಕೃತಿಯ ವಿಮರ್ಶೆಗೆ ಅಕ್ಕ ಐಎಎಸ್ ಅಕಾಡೆಮಿಯ ನಿರ್ದೇಶಕರಾದ ಡಾ. ಶಿವಕುಮಾರ್ ಅವರು ಸೇರಿದಂತೆ ಹಲವು ದಲಿತ ಚಿಂತಕರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮ ಸೋಮವಾರ (ಜುಲೈ 10) ನಿಗದಿಯಾಗಿತ್ತು.

ಅರ್ಜುನ್‌ ಮೌರ್ಯ
ಅರ್ಜುನ್‌ ಮೌರ್ಯ

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರ್ಜುನ್ ಮೌರ್ಯ ಅವರು ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಸಮಾರಂಭಕ್ಕೆ ಬೇಕಾದ ಸ್ಮರಣಿಕೆಗಳನ್ನು ಕೊಡಗು ವಿಶ್ವವಿದ್ಯಾಲಯದ ಹೆಸರಿನಲ್ಲೇ ಸಿದ್ಧಪಡಿಸಿ, ಬ್ಯಾನರ್ ಹಾಗೂ ಇನ್ನಿತರ ಲಘುಉಪಾಹಾರಕ್ಕೂ ತಯಾರು ಮಾಡಿದ್ದರು.

ಆದರೆ ಭಾನುವಾರ ಅಂದರೆ ಜುಲೈ 9 ರಂದು ಮಳೆ ಹಾಗೂ ಕುಲಪತಿಗಳು ಇರುವುದಿಲ್ಲವೆಂಬ ಕಾರಣ ನೀಡಿ ಕಾರ್ಯಕ್ರಮ ರದ್ದು ಮಾಡಿರುತ್ತಾರೆ. ಈ ಬಗ್ಗೆ ಕುಲಸಚಿವರಾದ ಡಾ. ಸೀನಪ್ಪರವರನ್ನು ವಿಚಾರಿಸಿದಾಗ, “ಕೊಡಗು ವಿಶ್ವವಿದ್ಯಾಲಯದಲ್ಲಿ ಬೇಡ, ನೀವೇ ಎಲ್ಲಾದರೂ ಏರ್ಪಾಡು ಮಾಡಿಕೊಳ್ಳಿ” ಎಂದು ಹೇಳಿರುತ್ತಾರೆ. ಅರ್ಜುನ್ ಮೌರ್ಯ ಅವರು ಇದಕ್ಕೆ ಸಕಾರಣ ಕೋರಿದ್ದಾರೆ. ಆದರೆ ಇದಕ್ಕೆ ವಿಶ್ವವಿದ್ಯಾಲಯದಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಹಾಗಾಗಿ ಮತ್ತೆ ಕೃತಿಕಾರರು ಮುಂದಿನ ದಿನಾಂಕವನ್ನು ಒಂದು ವಾರದ ಮುಂದೆ ತಿಳಿಸಿರಿ ಎಂದು ನೋಂದಾಯಿತ ಪತ್ರದಲ್ಲಿ ವಿನಂತಿಸಿದ್ದಾರೆ. ಆದರೆ ಇದಕ್ಕೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಈ ಬಗ್ಗೆ ಪ್ರತಿಧ್ವನಿ ಅರ್ಜುನ್‌ ಮೌರ್ಯ ಅವರಲ್ಲಿ ಪ್ರಶ್ನಿಸಿದಾಗ, “ನಾನೊಬ್ಬ ಬರಹಗಾರ ಹಾಗೂ ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲೇ ಬರುವ ಪ್ರತಿಷ್ಠಿತ ಕಾಲೇಜೊಂದರ ಕನ್ನಡ ವಿಭಾಗದ ಮುಖ್ಯಸ್ಥ ಎಂಬುದನ್ನೂ ಪರಿಗಣಿಸದೆ ಇರುವುದು ತುಂಬಾ ನೋವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಂದು ಮಧ್ಯರಾತ್ರಿ ಸ್ಪಂದನಾ ವಿಜಯ್‌ ರಾಘವೇಂದ್ರ ಮೃತದೇಹ ಬೆಂಗಳೂರಿಗೆ | ನಾಳೆ ಅಂತ್ಯಕ್ರಿಯೆ

ಕೊಡಗು ವಿಶ್ವವಿದ್ಯಾಲಯದ ಉನ್ನತಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಹಾಗೂ ಜಾತಿ ತಾರತಮ್ಯ ವಿಶ್ವವಿದ್ಯಾಲಯವನ್ನೂ ಬಿಡುತ್ತಿಲ್ಲ ಎಂಬುದು ಮೇಲ್ನೋಟಕೆ ಕಂಡು ಬರುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೊಡಗಿನ ದಲಿತ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದು, ಕುಲಪತಿಗಳು ಈ ಕೂಡಲೇ ಘಟನೆ ಬಗ್ಗೆ ಸೂಕ್ತ ಕಾರಣ ನೀಡಬೇಕು. ʼದುಡಿʼ ಕೃತಿಯ ಬಿಡುಗಡೆ ಸಮಾರಂಭವನ್ನು ಕೊಡಗು ವಿಶ್ವವಿದ್ಯಾಲಯದಲ್ಲೇ ಆಯೋಜಿಸಲು ಅನುವು ಮಾಡಿಕೊಡಬೇಕು. ತಪ್ಪಿದಲ್ಲಿ ದಲಿತಪರ ಚಿಂತಕರೂ ಹಾಗೂ ದಲಿತ ಕವಿಗೆ ಮಾಡಿರುವ ದೊಡ್ಡ ಅವಮಾನವೆಂದು ಪರಿಗಣಿಸಿ ಉಗ್ರಹೋರಾಟವನ್ನು ಕೊಡಗು ವಿಶ್ವವಿದ್ಯಾಲಯದ ಆವರಣದಲ್ಲೇ ಮಾಡಿ ಅಲ್ಲೇ ಕೃತಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿವೆ.

ಅರ್ಜುನ್‌ ಮೌರ್ಯ
ದುಡಿ ಕೃತಿಯ ಬಿಡುಗಡೆ ಆಹ್ವಾನ ಪತ್ರಿಕೆ

ಅರ್ಜುನ್‌ ಮೌರ್ಯ ಅವರ ಕೃತಿ ಬಿಡುಗಡೆಗೆ ಕುಲಪತಿಗಳಾದ ಪ್ರೊ. ಅಶೋಕ್ ಸಂ. ಆಲೂರ, ಕುಲಸಚಿವರಾದ ಡಾ. ಸೀನಪ್ಪ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ನಿರ್ದೇಶಕರಾದ ಪ್ರೊ. ಧರ್ಮಪ್ಪ ಅವರು ಈ ಮೊದಲು ಒಪ್ಪಿಕೊಂಡಿದ್ದರು ಎಂದು ತಿಳಿದು ಬಂದಿದೆ.

Tags: Arjun MouryaDalit PoetKodaguಅರ್ಜುನ್‌ ಮೌರ್ಯಕೊಡಗುಕೊಡಗು ವಿಶ್ವವಿದ್ಯಾಲಯದಲಿತ ಕವಿದುಡಿ
Previous Post

ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂ 1

Next Post

ಕೇರಳ ಇನ್ನು ಮುಂದೆ ಕೇರಳಂ | ನಿಲುವಳಿ ಮಂಡಿಸಿದ ಪಿಣರಾಯಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕೇರಳಂ

ಕೇರಳ ಇನ್ನು ಮುಂದೆ ಕೇರಳಂ | ನಿಲುವಳಿ ಮಂಡಿಸಿದ ಪಿಣರಾಯಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada