• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ
0
ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ :ಸಚಿವ ಎಂ.ಬಿ.ಪಾಟೀಲ್
Share on WhatsAppShare on FacebookShare on Telegram

ಬೆಂಗಳೂರು: ʼರಾಜ್ಯ ಸರ್ಕಾರ ಇತ್ತೀಚೆಗೆ ಚಾಲನೆ ನೀಡಿರುವ ಮಹತ್ವಾಕಾಂಕ್ಷಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯತಾ ನಗರ (ಕ್ವಿನ್‌ ಸಿಟಿ) ಯೋಜನೆಯು, ಅಮೆರಿಕದಲ್ಲಿನ ಜಾಗತಿಕ ಉದ್ಯಮ ದಿಗ್ಗಜರ ಜೊತೆಗಿನ ಸಮಾಲೋಚನೆಗಳಲ್ಲಿ ಚರ್ಚೆಯ ಕೇಂದ್ರಬಿಂದು ಆಗಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ADVERTISEMENT

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕದ ದೈತ್ಯ ಉದ್ಯಮಗಳಿಗೆ ಆಹ್ವಾನ ನೀಡಲು ಅಮೆರಿಕ ಪ್ರವಾಸದಲ್ಲಿ ಇರುವ ಸಚಿವ ಪಾಟೀಲರು, ನ್ಯೂಯಾರ್ಕ್‌ನಲ್ಲಿ ಫಿಡೆಲಿಟಿ, ಕೊಲಂಬಿಯಾ ವಿಶ್ವವಿದ್ಯಾಲಯ, ಆ್ಯಕ್ಸಿಯಂ ಸ್ಪೇಸ್‌, ಬೇಟಾ ಟೆಕ್ನಾಲಜಿ ಕಂಪನಿಗಳ ಪ್ರಮುಖರ ಜೊತೆಗೆ ನಡೆಸಿದ ಸಭೆಗಳಲ್ಲಿ ʼಕ್ವಿನ್‌ ಸಿಟಿʼ ಯೋಜನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ರಾಜ್ಯದಲ್ಲಿ ಸಮತೋಲನದ ಕೈಗಾರಿಕಾ ಬೆಳವಣಿಗೆ ಸಾಧಿಸಲು ದಾಬಸ್‌ಪೇಟೆ ಬಳಿ 5,800 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ʼಕ್ವಿನ್‌ ಸಿಟಿʼ ಯೋಜನೆಯಲ್ಲಿ ಭಾಗಿಯಾಗುವ ಬಗ್ಗೆ ಅಮೆರಿಕದ ವಿವಿಧ ಕಂಪನಿಗಳು ತೀವ್ರ ಆಸಕ್ತಿ ತೋರಿಸಿವೆ.ಫಿಡೆಲಿಟಿ ಸೆಂಟರ್‌ ಫಾರ್‌ ಅಪ್ಲೈಡ್‌ ಟೆಕ್ನಾಲಜಿಯ ಹಿರಿಯ ಉಪಾಧ್ಯಕ್ಷ ಬಿಜು ಕೆಕೆ ಅವರು, ʼಕ್ವಿನ್‌ ಸಿಟಿʼಯಲ್ಲಿ ವಹಿವಾಟು ವೃದ್ಧಿ ಹಾಗೂ ಬೆಳವಣಿಗೆ ಸಾಧ್ಯತೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.ʼಕ್ವಿನ್‌ ಸಿಟಿ”ಯಲ್ಲಿನ ಹೊಸ ಶಿಕ್ಷಣ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಇರುವ ಅವಕಾಶಗಳ ಬಗ್ಗೆ ಕೊಲಂಬಿಯಾ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಪ್ರಮುಖವಾಗಿ ಚರ್ಚಿಸಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದ ಪಾಲ್ಗೊಳ್ಳುವಿಕೆಯು ರಾಜ್ಯದಲ್ಲಿನ ಉನ್ನತ ಶಿಕ್ಷಣದ ಭವಿಷ್ಯ ರೂಪಿಸಲು ನೆರವಾಗಲಿದೆ.

ಆ್ಯಕ್ಸಿಯಂ ಸ್ಪೇಸ್‌ನ ಮುಖ್ಯ ರೆವಿನ್ಯೂ ಅಧಿಕಾರಿ ತೇಜ್‌ಪೌಲ್‌ ಭಾಟಿಯಾ ಅವರ ಜೊತೆಗೆ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಾಹ್ಯಾಕಾಶ ಕ್ಷೇತ್ರದಲ್ಲಿ ವಹಿವಾಟು ವಿಸ್ತರಣೆಗೆ ಇರುವ ವಿಪುಲ ಅವಕಾಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.ಬೇಟಾ ಟೆಕ್ನಾಲಜಿಸ್‌ನ ಬ್ಲೇಕ್‌ ಒಪ್ಸಾಹ್ಲ್ ಮತ್ತು ಹಂಚ್‌ ಮೊಬಿಲಿಟಿಯ ಪವನ್‌ ಬಕ್ಷಿ ಅವರನ್ನು ಭೇಟಿಯಾಗಿರುವ ಸಚಿವ ಪಾಟೀಲ ಅವರು. ನಗರ ವಾಯು ಸಂಚಾರ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಬೇಕು ಎಂದು ಸಚಿವರು ಬೇಟಾ ಟೆಕ್ನಾಲಜಿಸ್‌ಗೆ ಆಹ್ವಾನ ನೀಡಿದ್ದಾರೆ.ರಾಜ್ಯದಲ್ಲಿ ಬಂಡವಾಳ ಹೂಡಿಕೆ ಅವಕಾಶ ಕುರಿತು ಸಚಿವರು ಬೀಕನ್‌ ಇಂಡಸ್ಟ್ರೀಸ್‌ನ ಸುರೇಶ್‌ ಮೀರಚಂದಾನಿ ಜೊತೆಗೆ ವಿವರವಾಗಿ ಚರ್ಚಿಸಿದ್ದಾರೆ.

ದುಂಡುಮೇಜಿನ ಸಭೆ: ನ್ಯೂಯಾರ್ಕ್‌ನಲ್ಲಿನ ಭಾರತದ ಕಾನ್ಸುಲೇಟ್‌ ಜನರಲ್‌, ಅಮೆರಿಕ – ಭಾರತ ಕಾರ್ಯತಂತ್ರ ಪಾಲುದಾರಿಕೆ ವೇದಿಕೆ (ಯುಎಸ್‌ಐಎಸ್‌ಪಿ) ಸಹಯೋಗದಲ್ಲಿ ದುಂಡುಮೇಜಿನ ಸಭೆ ಆಯೋಜಿಸಿತ್ತು. ಅಂತರರಾಷ್ಟ್ರೀಯ ಸಹಯೋಗ ಮತ್ತು ಆರ್ಥಿಕ ಪಾಲುದಾರಿಕೆಗೆ ಕರ್ನಾಟಕವು ಸನ್ನದ್ಧ ಸ್ಥಿತಿಯಲ್ಲಿ ಇರುವುದನ್ನು ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಅಮೆರಿಕಾದ ಉದ್ಯಮಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

Tags: (USISP)Commissioner Gunjan KrishnaDepartment Principal Secretary SelvakumarKIADB CEO Dr. Mahesh.Minister MB Patilnew york
Previous Post

ಎನ್ ಡಿಎ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಕೇವಲ ರೂ.6,498 ಕೋಟಿ :ಸಿಎಂ ಸಿದ್ದರಾಮಯ್ಯ

Next Post

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

ಅದ್ಧೂರಿ ಜೊತೆಗೆ ಅಚ್ಚುಕಟ್ಟಾದ ದಸರಾ: ಜಿಲ್ಲಾಡಳಿತದ ಶ್ರಮ ಮತ್ತು ಶಿಸ್ತಿಗೆ ಸಿಎಂ ಅಭಿನಂದನೆ

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada