• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾರ್ಟಿನ್ ಬೇಕರ್ ಸಹಿತ 7 ಕಂಪನಿ ಜತೆ ಹೂಡಿಕೆ ಮಾತುಕತೆ ನಡೆಸಿದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ..!!

ಮೊದಲ ದಿನ ಮಾರ್ಟಿನ್ ಬೇಕರ್ ಸಹಿತ 7 ಕಂಪನಿ ಜತೆ ಹೂಡಿಕೆ ಮಾತುಕತೆ, ಒಟ್ಟು 20ಕ್ಕೂ ಹೆಚ್ಚು ಉದ್ದಿಮೆಗಳ ಪ್ರಮುಖರ ಭೇಟಿ ನಿಗದಿ

ಪ್ರತಿಧ್ವನಿ by ಪ್ರತಿಧ್ವನಿ
November 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಬ್ರಿಟನ್ನಿನ ದೈತ್ಯ ಕಂಪನಿಗಳಿಂದ ರಾಜ್ಯಕ್ಕೆ ಬಂಡವಾಳ ಆಕರ್ಷಿಸಿ, ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೈಗೊಂಡಿರುವ ಇಂಗ್ಲೆಂಡ್ ಪ್ರವಾಸ ಸೋಮವಾರದಿಂದ ಆರಂಭವಾಗಿದೆ. ಬುಧವಾರ ಕೊನೆಗೊಳ್ಳಲಿರುವ ಈ ಮೂರು ದಿನಗಳ ಪ್ರವಾಸದಲ್ಲಿ ಅವರು 20ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಮೊದಲ ದಿನವಾದ ಸೋಮವಾರ ಅವರು ಅಗ್ರಗಣ್ಯ ಉದ್ಯಮ ಸಂಸ್ಥೆಗಳಾಗಿರುವ ಮಾರ್ಟಿನ್ ಬೇಕರ್, ಎಸ್.ಸಿ.ಐ ಸೆಮಿಕಂಡಕ್ಟರ್ಸ್, ಸ್ಯಾಮ್ಕೊ ಹೋಲ್ಡಿಂಗ್ಸ್, ಎ.ಆರ್.ಎಂ, ಲ್ಯಾಟೋಸ್ ಗ್ರೂಪ್, ವಿಯರ್ ಮತ್ತು ಎಡ್ವರ್ಡಿಯನ್ ಹೋಟೆಲ್ ಗ್ರೂಪ್ ಪ್ರಮುಖರನ್ನು ಭೇಟಿ ಮಾಡಿದರು. ಈ ಪ್ರವಾಸ ಕಾರ್ಯಕ್ರಮ ಮೂರು ತಿಂಗಳ ಹಿಂದೆಯೇ‌ ನಿಗದಿಯಾಗಿತ್ತು.

ಈ ಸಂದರ್ಭದಲ್ಲಿ ರಾಜ್ಯದಲ್ಲಿರುವ ಕೈಗಾರಿಕಾ ಕಾರ್ಯ ಪರಿಸರ, ಮೂಲಸೌಕರ್ಯ, ಭೂಮಿಯ ಲಭ್ಯತೆ, ವಿಷನ್ ಗ್ರೂಪ್ ಚಿಂತನೆ, ಇನ್ವೆಸ್ಟ್ ಕರ್ನಾಟಕ ಫೋರಂನ ಉದ್ದೇಶ, ಪ್ರವರ್ಧಮಾನಕ್ಕೆ ಬರುತ್ತಿರುವ ಆಧುನಿಕ ಉದ್ದಿಮೆಗಳು, ರಫ್ತುಕೇಂದ್ರಿತ ಕೈಗಾರಿಕಾ ನೀತಿ, ಕೊಡಲಾಗುವ ರಿಯಾಯಿತಿ/ವಿನಾಯಿತಿ ಮತ್ತು ಪ್ರೋತ್ಸಾಹನಾ ಭತ್ಯೆಗಳನ್ನು ಕುರಿತು ಸಮಗ್ರ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವೈಮಾಂತರಿಕ್ಷ ಕ್ಷೇತ್ರದಲ್ಲಿ ಹೆಸರಾಗಿರುವ ಮಾರ್ಟಿನ್ ಬೇಕರ್ ಕಂಪನಿಯ ಪ್ರತಿನಿಧಿಗಳ ಜತೆಗಿನ ಮಾತುಕತೆ ಸಕಾರಾತ್ಮಕವಾಗಿತ್ತು. ಅವರಿಗೆ ರಾಜ್ಯದಲ್ಲಿ ತಮ್ಮದೊಂದು ತಯಾರಿಕಾ ಘಟಕವನ್ನು ಸ್ಥಾಪಿಸುವಂತೆ ಚರ್ಚಿಸಲಾಗಿದೆ. ಅವರು ಕೂಡ ತಮ್ಮ ಕಂಪನಿಯ ಪರಂಪರೆ, ವಿನ್ಯಾಸ ಮತ್ತು `ಎಜೆಕ್ಷನ್ ಸೀಟ್’ ತಯಾರಿಕೆಯಲ್ಲಿ ಸಾಧಿಸಿರುವ ತಾಂತ್ರಿಕ ಪರಿಣತಿ ಹಾಗೂ ಜಾಗತಿಕ ಮಟ್ಟದಲ್ಲಿ ಹೊಂದಿರುವ ಸ್ಥಾನಮಾನವನ್ನು ವಿವರಿಸಿದ್ದಾರೆ. ಜತೆಗೆ ಕರ್ನಾಟಕದಲ್ಲಿರುವ ಕೈಗಾರಿಕಾ ವ್ಯವಸ್ಥೆ, ಪ್ರತಿಭಾಪೂರ್ಣ ಮಾನವ ಸಂಪನ್ಮೂಲ ಮತ್ತು ಏರೋಸ್ಪೇಸ್ ಹಾಗೂ ರಕ್ಷಣಾ ವಲಯಗಳಿಗೆ ನಾವು ಒದಗಿಸಿರುವ ಮೂಲಸೌಕರ್ಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ನುಡಿದಿದ್ದಾರೆ.

ಈ ಮಾತುಕತೆಯಲ್ಲಿ ಮಾರ್ಟಿನ್ ಬೇಕರ್ ಕಂಪನಿಯ ಪರವಾಗಿ ಅದರ ನಿರ್ದೇಶಕ ಮತ್ತು ಹಿರಿಯ ಉಪಾಧ್ಯಕ್ಷ ಆ್ಯಂಡ್ರೂ ಮಾರ್ಟಿನ್, ಸಿಎಫ್ಒ ರಾಬರ್ಟ್ ಮಾರ್ಗನ್, ವಾಣಿಜ್ಯ ವ್ಯವಹಾರಗಳ ಮುಖ್ಯಸ್ಥ ಬ್ರಿಯಾನ್ ಪೋವೆಲ್ ಭಾಗವಹಿಸಿದ್ದರು.

ಎರಡನೇ ದಿನ ಗ್ರೀನ್ ಜೆಟ್ಸ್, ನಥಿಂಗ್ ಜತೆ ಮಾತುಕತೆ
ಎರಡನೇ ದಿನವಾದ ಮಂಗಳವಾರ ಎಂಬಿಡಿಎ, ಎಲಿಮೆಂಟ್ 6 ಯುಕೆ, ಗ್ರೀನ್ ಜೆಟ್ಸ್, ಫಿಡೋ ಎಐ, ನಥಿಂಗ್, ರೋಡ್ಸ್ ಗ್ರೂಪ್, ಜಿ.ಎನ್.ಕೆ ಅಂಡ್ ಮೆಲ್ರೋಸ್ ಕಂಪನಿಗಳ ಮುಖ್ಯಸ್ಥರು/ಸಿಇಒಗಳೊಂದಿಗೆ ಹೂಡಿಕೆ ಕುರಿತು ಇಲ್ಲಿನ ಫೋರ್ ಸೀಸನ್ ಹೋಟೆಲಿನಲ್ಲಿ ಮಾತುಕತೆ ನಡೆಸಲಾಗುವುದು. ಸಂಜೆ ಯುನೈಟೆಡ್ ಕಿಂಗಡಮ್ ಮತ್ತು ಭಾರತ ವಾಣಿಜ್ಯ ಸಮಿತಿ ಆಯೋಜಿಸಿರುವ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದರಲ್ಲಿ ಹಲವು ಕಂಪನಿಗಳೊಂದಿಗೆ ಎರಡು ಸುತ್ತಿನಲ್ಲಿ ಸಭೆಗಳು ನಿಗದಿಯಾಗಿವೆ ಎಂದು ಅವರು ವಿವರಿಸಿದ್ದಾರೆ.

ಮೂರನೆಯ ಮತ್ತು ಅಂತಿಮ ದಿನವಾದ ಬುಧವಾರ ಆಕ್ಸಫರ್ಡ್ ಸ್ಪೇಸ್ ಸಿಸ್ಟಮ್ಸ್, ಮೂಗ್, ಬ್ರಿಟಿಷ್ ಚೇಂಬರ್ ಆಫ್ ಕಾಮರ್ಸ್ ಮತ್ತು ಸೆನೆಟರ್ ಗ್ರೂಪ್ ಕಂಪನಿಗಳೊಂದಿಗೆ ಸಭೆಗಳನ್ನು ನಡೆಸಲಾಗುವುದು. ಈ ಮೂಲಕ ಕರ್ನಾಟಕದ ಕೈಗಾರಿಕಾ ವಲಯಕ್ಕೆ ಹೆಚ್ಚು ಬಂಡವಾಳ ಹರಿವನ್ನು ಖಾತ್ರಿಪಡಿಸಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಖ್ಯವಾಗಿ ರಾಜ್ಯದ ಕೈಗಾರಿಕಾ ವಲಯವು ಈಗ ಸ್ಥಳೀಯ ತಯಾರಿಕೆ ಮತ್ತು ರಫ್ತು ವಹಿವಾಟಿಗೆ ಒತ್ತು ಕೊಡುತ್ತಿದೆ. ಅದರಲ್ಲೂ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಸೆಮಿಕಂಡಕ್ಟರ್, ಮರುಬಳಕೆ ಇಂಧನ, ಪರಿಸರಸ್ನೇಹಿ ಇಂಧನ, ವೈಮಾಂತರಿಕ್ಷ ಮತ್ತು ರಕ್ಷಣೆ, ಬಾಹ್ಯಾಕಾಶ ಮುಂತಾದ ಆಧುನಿಕ ಉದ್ದಿಮೆಗಳಿಗೆ ಒತ್ತು ನೀಡಲಾಗುತ್ತಿದೆ ಎನ್ನುವುದನ್ನು ಯುನೈಟೆಡ್ ಕಿಂಗಡಮ್ ನ ಕಂಪನಿಗಳಿಗೆ ಮನದಟ್ಟು ಮಾಡಿಕೊಡಲಾಗುತ್ತಿದೆ ಎಂದು ಪಾಟೀಲ ನುಡಿದಿದ್ದಾರೆ. ಸಚಿವರು ಇತ್ತೀಚೆಗೆ ಕೈಗೊಂಡಿದ್ದ ಜಪಾನ್ ಪ್ರವಾಸದ ವೇಳೆ ರಾಜ್ಯಕ್ಕೆ 4,500 ಕೋಟಿ ರೂ. ಬಂಡವಾಳ ಹೂಡಿಕೆಯ ಭರವಸೆ ಸಿಕ್ಕಿರುವುದನ್ನು ಇಲ್ಲಿ ನೆನೆಯಬಹುದು.

ಸಚಿವರ ನೇತೃತ್ವದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಇದ್ದಾರೆ.

Tags: 60 seconds mb patilbm patilM B PatilMB Patilmb patil 60 secondsmb patil angrymb patil bhashanmb patil bijapurmb patil congressmb patil familymb patil fansmb patil housemb patil latestmb patil latest mewsmb patil latest newsmb patil meetingmb patil mlamb patil newsmb patil on yatnalmb patil press meetmb patil sonmb patil songmb patil speechmb patil supportersmb patil today newsmb patil videomb patil videosmbpatilMinister MB Patilyatnal vs mb patil
Previous Post

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ನವೆಂಬರ್ 28ರಂದು ತೆರೆಗೆ

Next Post

ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ ನೀಡಿದ ಸಚಿವ ಕೆ.ಜೆ.ಜಾರ್ಜ್..

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post

ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ ನೀಡಿದ ಸಚಿವ ಕೆ.ಜೆ.ಜಾರ್ಜ್..

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada