• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯಡಿಯೂರಪ್ಪಗೆ ಬಿಜೆಪಿ ಗೌರವವೋ..? ಕಾನೂನು ಅಸ್ತ್ರದ ಭೀತಿಯೋ..?

ಕೃಷ್ಣ ಮಣಿ by ಕೃಷ್ಣ ಮಣಿ
March 29, 2023
in Top Story, ಇದೀಗ, ಕರ್ನಾಟಕ
0
ಯಡಿಯೂರಪ್ಪಗೆ ಬಿಜೆಪಿ ಗೌರವವೋ..? ಕಾನೂನು ಅಸ್ತ್ರದ ಭೀತಿಯೋ..?
Share on WhatsAppShare on FacebookShare on Telegram

ಬೆಂಗಳೂರು:ಮಾ.29: ಯಡಿಯೂರಪ್ಪ ಹಾಗು ವಿಜಯೇಂದ್ರ ಬಗ್ಗೆ ಬಿಜೆಪಿಯಲ್ಲಿ ಭಾರೀ ಗೌರವಾಧರಗಳನ್ನು ನೀಡಲಾಗ್ತಿದೆ. ಯಡಿಯೂರಪ್ಪ ಮುಂದಾಳತ್ವದಲ್ಲೇ ನಾವು ಚುನಾವಣೆ ಮಾಡುತ್ತೇವೆ. ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡುವ ವಿಚಾರವೇ ಇಲ್ಲ, ಎಂದು ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಈ ಗೌರವ ಮೇಲ್ನೋಟಕ್ಕೆ ಕಾಣಿಸುವ ಗೌರವ ಎನ್ನುವ ಆರೋಪವೂ ಕೇಳಿಬರುತ್ತಿದೆ. ಯಡಿಯೂರಪ್ಪ ಅಂಡ್​ ಸನ್ಸ್​​ ಬಿಜೆಪಿ ವಿರುದ್ಧ ಮಾತನಾಡಿದರೆ ಕಾನೂನು ಸಂಕಷ್ಟಕ್ಕೆ ಸಿಲುಕಿಸುವ ಭೀತಿ ಸೃಷ್ಟಿಸಲಾಗಿದೆ ಎನ್ನುವುದು ಅಲ್ಲಲ್ಲಿ ಕೇಳಿ ಬರುತ್ತಿರುವ ಗಂಭೀರ ಆರೋಪ. ಯಡಿಯೂರಪ್ಪ ಅಥವಾ ಬಿ.ವೈ ರಾಘವೇಂದ್ರ, ಬಿ.ವೈ ವಿಜಯೇಂದ್ರ ಪಕ್ಷಕ್ಕೆ ಹಾನಿಯಾಗುವ ರೀತಿಯ ಹೇಳಿಕೆ ಅಥವಾ ಕೆಲಸ ಮಾಡಿದರೆ ಕಾನೂನು ಅಸ್ತ್ರ ಪಯೋಗ ಆಗಲಿದೆ ಎನ್ನುವ ಮಾತುಗಳಿವೆ. ಇದೇ ಕಾರಣದಿಂದ ಯಡಿಯೂರಪ್ಪ ಅವರ ಆಪ್ತ ಬಳಗದ ನಾಯಕರನ್ನು ಸದೆ ಬಡಿಯುವ ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

ADVERTISEMENT

ಯಡಿಯೂರಪ್ಪ ಅವರನ್ನು ಒಂಟಿ ಮಾಡುವ ಯತ್ನ..!

ಬೃಹತ್​ ಹೆಮ್ಮರವನ್ನು ಕತ್ತರಿಸುವಾಗ ಬುಡ ಕತ್ತರಿಸಿದ ಮಾತ್ರಕ್ಕೆ ಹೆಮ್ಮರವೇ ಕೆಳಕ್ಕೆ ಬೀಳುತ್ತದೆ ಎನ್ನುವುದು ಸುಳ್ಳು. ಹಾಗೆಯೇ ಹಿರಿಯ ನಾಯಕನ ಹಿಡಿತದಿಂದ ಪಕ್ಷವನ್ನು ಬಿಡಿಸುವುದು ಅಷ್ಟು ಸುಲಭದ ಮಾತಲ್ಲ. ಇದೀಗ ಯಡಿಯೂರಪ್ಪ ಹಿಡಿತದಿಂದ ಬಿಜೆಪಿ ಪಕ್ಷವನ್ನು ಬಿಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಬಿಜೆಪಿ ಹೈಕಮಾಂಡ್​. ಏಕಾಏಕಿ ಬಿಎಸ್​ ಯಡಿಯೂರಪ್ಪ ಹಿಡಿತದಿಂದ ಪಕ್ಷವನ್ನು ಬಿಡಿಸುವ ಯತ್ನವನ್ನು ಹೈಕಮಾಂಡ್​ ಮಾಡಿತ್ತಾದರೂ ಪಕ್ಷಕ್ಕೇ ಬಲವಾದ ಹೊಡೆತ ಬೀಳುವ ಮುನ್ಸೂಚನೆ ಸಿಕ್ಕಿದ್ದರಿಂದ ಹೈಕಮಾಂಡ್​ ಯೂಟರ್ನ್​ ಹೊಡೆದಿದೆ. ಇನ್ನು ಮುಂದಿನ ದಿನಗಳಲ್ಲಿ ಸರ್ಕಾರ ರಚನೆ ಮಾಡುವ ಸಂಭವ ಎದುರಾದಾಗ ಬಿ.ಎಸ್​ ಯಡಿಯೂರಪ್ಪ ಷರತ್ತು ಹಾಕಬಾರದು ಅಥವಾ ಸರ್ಕಾರದಲ್ಲಿ ಯಡಿಯೂರಪ್ಪ ಪಾತ್ರ ಇರಬಾರದು ಅನ್ನೋ ಕಾರಣಕ್ಕೆ ಯಡಿಯೂರಪ್ಪ ಸುತ್ತಮುತ್ತ ಸುತ್ತುವ ನಾಯಕರನ್ನು ದೂರ ಮಾಡಲಾಗ್ತಿದೆ. ಕೆಲವರನ್ನು ಕಾನೂನು ಅಸ್ತ್ರದ ಮೂಲಕ ನಿಯಂತ್ರಣ ಮಾಡುವ ಕೆಲಸ ಆಗುತ್ತಿದೆ ಎನ್ನುವುದು ರಾಜಕೀಯ ಪರಿಣಿತರ ಮಾತು.

ಬೆಂಬಲಿಗರಿಂದ ದೂರ ಮಾಡುತ್ತಿದೆ ಹೈಕಮಾಂಡ್​..!?

ಒಂದು ಕಾಲದಲ್ಲಿ ಯಡಿಯೂರಪ್ಪ ಮನೆ ಮುಂದೆ ಜನಸಾಗರೇ ಇರುತ್ತಿತ್ತು. ಅದರಲ್ಲೂ ಶೋಭಾ ಕರಂದ್ಲಾಜೆ, ಎಂಪಿ ರೇಣುಕಾಚಾರ್ಯ ಸೇರಿದಂತೆ ಹತ್ತಾರು ಶಾಸಕರು ಯಡಿಯೂರಪ್ಪ ಹಿಂಬಾಲಕರ ರೀತಿಯಲ್ಲಿ ಇದ್ದರು. ಯಡಿಯೂರಪ್ಪ ವಿರುದ್ಧ ಯಾರಾದರೂ ಟೀಕೆ ಮಾಡಿದ್ದರೆ ಯಡಿಯೂರಪ್ಪಗೂ ಮೊದಲು ಹಿಂಬಾಲಕ ಪಡೆ ಎದ್ದು ನಿಲ್ಲುತ್ತಿತ್ತು. ಈಗ ಕಾಲ ಬದಲಾಗಿದೆ. ಯಡಿಯೂರಪ್ಪ ಹಿಂದೆ ಮುಂದೆ ಸುತ್ತುತ್ತಿದ್ದ ನಾಯಕರು ದೂರ ಆಗಿದ್ದಾರೆ. ಇದರ ಹಿಂದೆ ಪಕ್ಷವನ್ನು ಯಡಿಯೂರಪ್ಪ ಹಿಡಿತದಿಂದ ವಾಪಸ್​ ಬಿಡಿಸಿಕೊಳ್ಳುವ ಹೈಕಮಾಂಡ್​ನ ಒಂದು ರಣತಂತ್ರ. ಪಕ್ಷದಲ್ಲಿ ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಯಡಿಯೂರಪ್ಪ ಮನೆಯಲ್ಲಿ ಕೂರುವಂತಿಲ್ಲ. ಹೈಕಮಾಂಡ್​ ನಾಯಕರ ಎದುರು ಕೈಕಟ್ಟಿ ಕೂರುತ್ತ, ಬಿಜೆಪಿಯನ್ನು ಗೆಲ್ಲಿಸಿಕೊಂಡು ಬರಬೇಕು. ಇಲ್ಲದಿದ್ದರೆ ಕಾನೂನು ಅಸ್ತ್ರ ಬೆಂಬಲಿಗರ ಮೇಲಿಂದ ಯಡಿಯೂರಪ್ಪ ಅಂಡ್​ ಸನ್ಸ್​ ಕಡೆಗೆ ತಿರುಗುವ ಭೀತಿಯಲ್ಲಿ ಯಡಿಯೂರಪ್ಪ ಬಸವನ ರೀತಿ ಕತ್ತು ಅಲುಗಾಡಿಸುತ್ತಾ ಇದ್ದಾರೆ ಎನ್ನುವುದು ಇತ್ತೀಚಿಗೆ ನಡೆಯುತ್ತಿರುವ ಚರ್ಚೆ.

ಕೈ ಕಟ್ಟಿ ಕೂರುವ ಪರಿಸ್ಥಿತಿ ಬಂದಿದ್ದು ಯಾಕೆ..?

ಮಾಡಾಳು ವಿರೂಪಾಕ್ಷಪ್ಪ ಬಂಧನ ಆಗಿದೆ. ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದ ಪ್ರಕರಣದಲ್ಲಿ ಮಾಡಾಳ್​ ವಿರೂಪಾಕ್ಷಪ್ಪ ಅವರನ್ನು ಬಂಧನ ಮಾಡಲಾಗಿದೆ. ಅದೇ ರೀತಿ ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೆಲವು ಪ್ರಕರಣಗಳನ್ನು ಹಿಡಿದುಕೊಂಡು ಯಡಿಯೂರಪ್ಪ ಅವರನ್ನು ಬೆದರಿಸಲಾಗಿದೆ. ಇದೇ ಕಾರಣಕ್ಕೆ ಗುಡುಗುತ್ತಿದ್ದ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್​ ನಾಯಕರ ಮಾತಿಗೆ ಮೌನವಾಗಿದ್ದಾರೆ ಎನ್ನುವ ಮಾತುಗಳಿವೆ. ಇದರಲ್ಲಿ ಎಷ್ಟು ಸತ್ಯವೋ ಎಷ್ಟು ಸುಳ್ಳು ಅನ್ನೋ ಖಚಿತ ಮಾಹಿತಿ ಸಿಗಲ್ಲ. ಇದೆಲ್ಲಾ ನಮ್ಮ ಕಿವಿಗೆ ಅಲ್ಲಿ ಇಲ್ಲಿ ಕೇಳಿಸಿದ್ದು. ಆದರೆ ಇತ್ತೀಚಿಗೆ ಯಡಿಯೂರಪ್ಪ ಆವಭಾವ ನಡವಳಿಕೆಯನ್ನು ನೋಡಿದಾಗ ಅಭಿಮಾನಿಗಳು, ಬೆಂಬಲಿಗರು ಈ ರೀತಿ ಮಾತನಾಡಿಕೊಳ್ಳುವುದರಲ್ಲಿ ತಪ್ಪಿಲ್ಲ ಎಂದು ಯಾರಿಗಾದರೂ ಅನಿಸುತ್ತವೆ ಅಲ್ಲವೇ..? ನಿಮಗೆ ಏನನ್ನಿಸುತ್ತೆ ಅನ್ನೋದನ್ನು ಕಮೆಂಟ್​ ಮಾಡಿ ತಿಳಿಸಿ.

ಕೃಷ್ಣಮಣಿ

Tags: Amith ShaBJPbjpkarnatakaBSYbsyediyurappabyvijayendrajpnaddaPMModirechanukachariyaShobha Karandlajeನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಹುಲ್‌ ಗಾಂಧಿ ಅನರ್ಹತೆ: ಅಮೇರಿಕಾದ ಪ್ರಶ್ನೆಗೆ ಮೋದಿ ಸರ್ಕಾರ ಏನು ಉತ್ತರಿಸುತ್ತದೆ? ಸ್ವಾಮಿ ಪ್ರಶ್ನೆ

Next Post

ಸುದ್ದಿಗೋಷ್ಠಿ ಕರೆದ ಕೇಂದ್ರ ಚುನಾವಣಾ ಆಯೋಗ : ಇಂದೇ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಸುದ್ದಿಗೋಷ್ಠಿ ಕರೆದ ಕೇಂದ್ರ ಚುನಾವಣಾ ಆಯೋಗ : ಇಂದೇ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ಸುದ್ದಿಗೋಷ್ಠಿ ಕರೆದ ಕೇಂದ್ರ ಚುನಾವಣಾ ಆಯೋಗ : ಇಂದೇ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada