• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆಯಾ ಬಿಜೆಪಿ?

ಯದುನಂದನ by ಯದುನಂದನ
June 10, 2021
in ದೇಶ, ರಾಜಕೀಯ
0
ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆಯಾ ಬಿಜೆಪಿ?
Share on WhatsAppShare on FacebookShare on Telegram

ಚುನಾವಣಾ ಸಮಯದಲ್ಲಿ ರಾಜಕೀಯ ನಾಯಕರು ವಾಗ್ದಾಳಿ ನಡೆಸುವುದು, ದ್ವೇಷ-ಅಸೂಹೆ ಕಾರಿಕೊಳ್ಳುವುದು, ಸಭ್ಯತೆಯ ಎಲ್ಲೆ ಮೀರುವುದು, ಪದವಿಯ ಘನತೆಯನ್ನು ಮರೆಯುವುದು ಸಾಮಾನ್ಯ. ಚುನಾವಣೆ ಮುಗಿದ ಬಳಿಕ ಜನಾದೇಶ ಪಾಲಿಸಬೇಕು. ಗೆದ್ದವರು-ಸೋತವರು ಮತ್ತೆ ಸುಮಧುರ ವಾತಾವರಣ ನಿರ್ಮಾಣ ಮೂಡುವಂತೆ ಮಾಡಬೇಕು. ಭಾರತ ಮಾದರಿಯ ಒಕ್ಕೂಟ ವ್ಯವಸ್ಥೆ ಎಂಬುದನ್ನು ಜಗತ್ತಿಗೆ ಸಾರಿ ಹೇಳಬೇಕು.

ADVERTISEMENT

ಈವರೆಗೆ ಬಹುಪಾಲು ಅದೇ ರೀತಿ ಆಗಿದೆ. ಆದರೆ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಅದಕ್ಕೆ ಅಪವಾದ. ‘ಮಳೆ ನಿಂತರೂ ಹನಿ‌‌ ನಿಲ್ಲದು’ ಎನ್ನುವಂತೆ ಫಲಿತಾಂಶ ಬಂದು ತಿಂಗಳಾದರೂ ಪ್ರತಿಕಾರದ ತೀವ್ರತೆ ಕಡಿಮೆ ಆಗಿಲ್ಲ. ಈಗ ಅದು ಇನ್ನೊಂದು ಪರಾಕಾಷ್ಠೆ ತಲುಪಿದೆ ಎಂಬ ಮಾತು ಕೇಳಿಬರುತ್ತಿವೆ. ಸೋತು ತೀವ್ರ ಮುಖಭಂಗ ಅನುಭವಿಸಿರುವ ಬಿಜೆಪಿ‌ ಈಗ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಏರಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ‌.


ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಜಯ ಸಾಧಿಸಿರುವುದರಿಂದ ಅಂದರೆ 294 ಕ್ಷೇತ್ರಗಳ ಪೈಕಿ 213 ಸ್ಥಾನಗಳನ್ನು ಗೆದ್ದುಕೊಂಡಿರುವುದರಿಂದ ‘ರಾಷ್ಟ್ರಪತಿ ಆಳ್ವಿಕೆ ಹೇರುವ’ ಸಂಗತಿ ಕೇಳಿದಾಕ್ಷಣ ಒಪ್ಪಲು ಸಾಧ್ಯವಾಗುವುದಿಲ್ಲ. ಆದರೆ ಫಲಿತಾಂಶ ಹೊರಬಂದಾಗಿನಿಂದ ಈವರೆಗೆ ಪಶ್ಚಿಮ ಬಂಗಾಳದ ವಿಷಯದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಂಥದೊಂದು ಅನುಮಾನ ಮೂಡದೇ ಇರದು.


ಮೊದಲಿಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೊತ್ತರ ಗಲಭೆ, ಘರ್ಷಣೆಗಳನ್ನು ಬಿಜೆಪಿ ದೇಶಾದ್ಯಂತ ಚರ್ಚೆಯಾಗುವಂತೆ ಮಾಡಿತು. ಪಕ್ಷದ ವತಿಯಿಂದ ಮತ್ತು ಆರ್‌ಎಸ್‌ಎಸ್  ಪರೋಕ್ಷವಾಗಿ ನಡೆಸುವ ನೂರಾರು ಸಂಸ್ಥೆಗಳ ಮೂಲಕ, ಬಿಜೆಪಿ ಐಟಿ ಸೆಲ್ ನ ಟ್ರೋಲ್ ಪಡೆಗಳ ಮೂಲಕ ವಿಷಯವನ್ನು ‘ದೊಡ್ಡದು’ ಮಾಡಿತು. ಇದರಲ್ಲಿ ಮೂರು ಉದ್ದೇಶಗಳಿದ್ದವು. ಪ್ರಧಾನ ಮಂತ್ರಿ ನರೇಂದ್ರ ಮೋದಿಯಂತಹ ಧೈತ್ಯ ನಾಯಕನನ್ನು ಮಣಿಸಿದ ಮಮತಾ ಬ್ಯಾನರ್ಜಿ ಅವರ ಬಗ್ಗೆ‌ ದೇಶದ ಇತರೆ ಭಾಗದಲ್ಲಿ ಒಂದು ರೀತಿಯ ಅಸಮಾಧಾನದ ಭಾವನೆ ಬಿತ್ತುವುದು ಮೊದಲ ಉದ್ದೇಶವಾಗಿತ್ತು. ಬಿಜೆಪಿ ಬಗ್ಗೆ ಮೃಧು ಧೋರಣೆ ಬರುವಂತೆ ಮಾಡುವುದು ಮತ್ತೊಂದು ಉದ್ದೇಶವಾಗಿತ್ತು. ಇದಲ್ಲದೆ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಅಧಿಕಾರದ ದರ್ಪ ಅತಿಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಬಿಂಬಿಸಿ ‘ರಾಷ್ಟ್ರಪತಿ ಆಳ್ವಿಕೆ’ಗೆ ಮುನ್ನುಡಿ ಬರೆಯುವುದು ಮೂರನೇಯ ಉದ್ದೇಶವಾಗಿತ್ತು.


ಇದಾದ ಮೇಲೆ ಅಲ್ಲಿನ ರಾಜ್ಯಪಾಲ ಜಗದೀಪ್ ದಂಖರ ಅವರು ನಿರಂತರವಾಗಿ ‘ರಾಜ್ಯದಲ್ಲಿ ‌ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು‌ ಹೇಳುತ್ತಿದ್ದಾರೆ. ಇದು‌ ಕೂಡ ಮುಂದೊಂದು‌ ದಿನ ರಾಷ್ಟ್ರಪತಿಗೆ ದೂರು ನೀಡಲು ಬರೆಯುತ್ತಿರುವ ಪೀಠಿಕೆಯೇ ಆಗಿದೆ. ಈ ನಡುವೆ ದಶಕಗಳಷ್ಟು ಹಳೆಯದಾದ ‘ನಾರದಾ ಪ್ರಕರಣ’ಕ್ಕೆ ಜೀವ ತುಂಬಿ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಮಾತ್ರ ಕ್ರಮ ಕೈಗೊಳ್ಳುವ ಪ್ರಯತ್ನವಾಯಿತು. ಅಧಿಕಾರಿಗಳು ಅಧಿಕಾರದಲ್ಲಿ ಇರುವವರ ಸಲಹೆ-ಸೂಚನೆಗಳಿಗೆ ಅನುಗುಣವಾಗಿ ವರ್ತಿಸುತ್ತಾರೆ ಎಂಬುದು ಸಾಮಾನ್ಯವಾದ ಸಂಗತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳಕ್ಕೆ ಚಂಡಮಾರುತದಿಂದ ಆದ ಹಾನಿಯನ್ನು ‌ಪರಿಶೀಲಿಸಲು ಭೇಟಿ ನೀಡಿದ್ದಾಗ ಗೃರು ಆಗಿದ್ದರು ಎಂಬ ಕಾರಣಕ್ಕೆ ಅಲ್ಲಿನ ಮುಖ್ಯ ಕಾರ್ಯದರ್ಶಿ (ಆಗ) ಅಲ್ಪನ್ ಬಂಡೋಪಾಧ್ಯಾಯ ಅವರಿಗೆ ನೊಟೀಸ್ ನೀಡಲಾಯಿತು.


ಪಶ್ಚಿಮ ಬಂಗಾಳಕ್ಕೆ ಕರೋನಾ ಲಸಿಕೆಗಳನ್ನು‌ ಕೊಡುವುದರಲ್ಲಿ ತಾರತಮ್ಯ ಮಾಡಲಾಯಿತು. ಮಮತಾ ಬ್ಯಾನರ್ಜಿ ‘ರಾಜ್ಯ ಸರ್ಕಾರವೇ ಲಸಿಕೆ ನೀಡಬೇಕಾದರೆ ಲಸಿಕೆ ಪಡೆದ ದಾಖಲೆ ಪತ್ರದ ಮೇಲೆ ರಾಜ್ಯದ ಜನರ ತೆರಿಗೆ ಹಣದಲ್ಲಿ ನಿಮ್ಮ ಫೋಟೋ ಏಕೆ ಹಾಕಬೇಕು, ಮುಖ್ಯಮಂತ್ರಿ ಆಗಿರುವ ತಮ್ಮದೇ ಫೋಟೋವನ್ನು ಹಾಕುತ್ತೇನೆ’ ಎಂದು ಹೇಳಿದ್ದು ಪ್ರಚಾರ ಪ್ರಿಯ ಮೋದಿಯನ್ನು ವಿಚಲಿತರನ್ನಾಗಿ ಮಾಡಿತು. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡಿದ್ದಾರೆ. ಅತ್ತ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಕೋಲ್ಕತ್ತಾದಲ್ಲಿ ಶಾಸಕರ ಸಭೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದೂರು ನೀಡುವ ತಯಾರಿ ನಡೆಸಿದ್ದಾರೆ.‌ ಅಲ್ಲಿಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ಬಿಕೆ ಹೇರಲು ಪ್ರಯತ್ನಿಸುತ್ತಿರುವುದು ಬಹಿರಂಗವಾದಂತಾಗಿದೆ.

Previous Post

ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೊಂಡರೂ ನಿಲ್ಲದ ಸಾ.ರಾ ಮಹೇಶ್ ಆರೋಪ: ಸಿಂಧೂರಿ ತಿರುಗೇಟು

Next Post

ಕೊಡಗು ಜಿಲ್ಲೆಯಲ್ಲಿ ಈ ತಿಂಗಳಾಂತ್ಯದವರೆಗೂ ಲಾಕ್‌ಡೌನ್‌ ಅವಶ್ಯಕತೆ ಇದೆಯೇ ?

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Next Post
ಕೊಡಗು ಜಿಲ್ಲೆಯಲ್ಲಿ ಈ ತಿಂಗಳಾಂತ್ಯದವರೆಗೂ ಲಾಕ್‌ಡೌನ್‌ ಅವಶ್ಯಕತೆ ಇದೆಯೇ ?

ಕೊಡಗು ಜಿಲ್ಲೆಯಲ್ಲಿ ಈ ತಿಂಗಳಾಂತ್ಯದವರೆಗೂ ಲಾಕ್‌ಡೌನ್‌ ಅವಶ್ಯಕತೆ ಇದೆಯೇ ?

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada