• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ರಾಜಕಾರಣಕ್ಕೆ ಮಾನವರ ಕೊಲೆ ನಡೆಯುವುದು ಅತ್ಯವಶ್ಯಕವೇ..?

ಕೃಷ್ಣ ಮಣಿ by ಕೃಷ್ಣ ಮಣಿ
April 19, 2023
in ಅಂಕಣ
0
ರಾಜಕಾರಣಕ್ಕೆ ಮಾನವರ ಕೊಲೆ ನಡೆಯುವುದು ಅತ್ಯವಶ್ಯಕವೇ..?
Share on WhatsAppShare on FacebookShare on Telegram

ಸಾಯುವ ದನಗಳ ಮಾಂಸಕ್ಕಾಗಿ ಬಳಕೆ ಮಾಡುವುದಕ್ಕೂ ರಾಜ್ಯ ಸರ್ಕಾರ ನಿಯಮಗಳನ್ನು ಮಾಡಿದೆ. ದನಗಳ ಸಾಗಾಟ ಮಾಡುವಾಗ ದನಗಳ ರಕ್ಷಣೆಗೆ ಯುವಕರ ಗುಂಪು ಜನರ ಮೇಲೆ ದಾಳಿ ಮಾಡಿ ಕೊಂದ ಆರೋಪವೂ ಇದೆ. ಇನ್ನು ಬೆಂಗಳೂರಿನಲ್ಲಿ ನಾಯಿಗಳ ಹಾವಳಿ ತಡೆಯಲು ಮುಂದಾದರೆ ಬಿಜೆಪಿ ಸಂಸದೆ ಮನೇಕಾ ಗಾಂಧಿ ದಿಲ್ಲಿಯಿಂದ ಫೋನ್ ಮಾಡಿ ಕನ್ನಡಿಗ ಅಧಿಕಾರಿಗೆ ಬಾಯಿಗೆ ಬಂದ ಹಾಗೆ ಬೈಯ್ಯುತ್ತಾರೆ. ಇದರ ನಡುವೆ ರಾಜ್ಯದಲ್ಲಿ ರಾಜಕಾರಣಕ್ಕಾಗಿ ಮನುಷ್ಯರ ಕೊಲೆಗಳು ನಡೆಯುವುದಕ್ಕೆ ಶುರು ಆಗಿವೆ. ಧಾರವಾಡದಲ್ಲಿ ಯುವಕನ ಕೊಲೆ ನಡೆದಿದೆ. ಅದೂ ಕೂಡ ಓರ್ವ ಬಿಜೆಪಿ ಕಾರ್ಯಕರ್ತನ ಕೊಲೆ.

ADVERTISEMENT

ಧಾರವಾಡದ ಕೋಟೂರು ಗ್ರಾಮದ ಪ್ರವೀಣ್ ಕಮ್ಮಾರ ಎಂಬಾತನ ಕೊಲೆ ನಡೆದಿದೆ. ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. 36 ವರ್ಷದ ಪ್ರವೀಣ್ ಕಮ್ಮಾರ, ಗ್ರಾಮದಲ್ಲಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯಲ್ಲಿ ಗಲಾಟೆ ಬಿಡಿಸಿ ಕಳುಹಿಸಿದ್ದ. ಜಾತ್ರೆಯಲ್ಲಿ ಪ್ರಸಾದವಿತರಣೆ ವೇಳೆ ಕೆಲವರು ಕುಡಿದು ಗಲಾಟೆ ಮಾಡುತ್ತಿದ್ದಾಗ ಪ್ರವೀಣ್ ಕಮ್ಮಾರ, ಜಗಳ ಬಿಡಿಸಿ ಕಳುಹಿಸಿದ್ದ ಎನ್ನಲಾಗಿದೆ. ಜಗಳ ಮಾಡುತ್ತಿದ್ದ ಒಂದು ಗುಂಪಿನವರು ಪುನಃ ಆಗಮಿಸಿ ಚಾಕು ಇರಿದಿದ್ದಾರೆ ಎಂದು ದೂರಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ಪ್ರವೀಣ ಸಾವನ್ನಪ್ಪಿದ್ದಾನೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿಯ ಕೆಳಮಟ್ಟದ ಕಾರ್ಯಕರ್ತನ ಹತ್ಯೆ ಆಗಿದೆ. ಇದು ರಾಜಕೀಯ ಕೊಲೆ, ಇದೊಂದು ದುರ್ದೈವ ಸಂಗತಿ ಎಂದಿದ್ದಾರೆ. ಈ ಮೊದಲು ಯೋಗೇಶ ಗೌಡರ ಕೊಲೆ ಆಗಿತ್ತು, ತನಿಖೆ ಸಹ ಆಗುತ್ತಿದೆ. ಈಗ ಪ್ರವೀಣ ಕಮ್ಮಾರನ ಕೊಲೆ ಆಗಿದೆ. ಶಾಸಕ ಅಮೃತ ದೇಸಾಯಿ ಅವರು ಪ್ರವೀಣ್ ಅವರಿಗೆ ಎಚ್ಚರದಿಂದ ಇರಲು ಹೇಳಿದ್ರು. ಆದರೂ ಈ ಘಟನೆ ನಡೆದಿದೆ. ಸೂಕ್ತ ಕ್ರಮಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರ ಅತ್ಯಂತ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಬೇಕು. ಮೃತ ಪ್ರವೀಣನ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ ಕುಟುಂಬದ ಜೊತೆಗೆ ನಾನು ಹಾಗು ಅಮೃತ ದೇಸಾಯಿ ಇಬ್ಬರೂ ಇರ್ತೀವಿ. ಕೊಲೆಗೆ ನಿಖರವಾಗಿ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯಕ್ಕೆ ನಡೆದಿರುವ ಕೊಲೆ ಎಂದು ಮಾಹಿತಿ ಸಿಕ್ಕಿದೆ ಎಂದಿದ್ದಾರೆ.

ಪ್ರವೀಣ ಯಾರ ಜೊತೆಗೂ ಜಗಳ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಲಿಂಗಾಯತ ಪಂಚಮಸಾಲಿ ಸಮುದಾಯದ ಯುವಕನ ಕೊಲೆ ಆಗಿದೆ. ನಾನು ಯಾರ ಮೇಲೂ ಆರೋಪ ಮಾಡುತ್ತಿಲ್ಲ. ಕುಟುಂಬಕ್ಕೆ ಪರಿಹಾರವನ್ನು ನೀಡುತ್ತೇವೆ ಎನ್ನುತ್ತಲೇ ರಾಜಕಾತಣಕ್ಕೆ ಬೇಕಾದ ಅಂಶಗಳನ್ನು ಬಹಿರಂಗ ಮಾಡಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಯುವಕನ ಹತ್ಯೆ ಎಂದು ಉಲ್ಲೇಖಿಸಿದ್ದಾರೆ. ಬಿಜೆಪಿ ತಳ ಮಟ್ಟದ ಕಾರ್ಯಕರ್ತನ ಕೊಲೆ ಆಗಿದೆ ಎಂದಿದ್ದಾರೆ. ರಾಜಕಾರಣಕ್ಕೆ ನಡೆದಿರುವ ಹತ್ಯೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆ ಯೋಗೇಶ್ ಗೌಡರ ಕೊಲೆ ನಡೆದಿತ್ತು, ವಿಚಾರಣೆಯೂ ನಡೆಯುತ್ತಿದೆ. ಈ ಕೊಲೆ ಪಾತಕರಿಗೆ ಶಿಕ್ಷೆಯಾಗಬೇಕು ಎಂದಿರುವ ಕೇಂದ್ರ ಸಚಿವರು, ಕುಟುಂಬಕ್ಕೆ ಪರಿಹಾರ ನೀಡುವುದಾಗಿಯೂ ತಿಳಿಸಿದ್ದಾರೆ. ಆದರೆ ನಾನು ಯಾರ ಮೇಲೂ ಆರೋಪ ಮಾಡಲ್ಲ ಎನ್ನುವ ಮೂಲಕ ವಿರೋಧ ಪಕ್ಷಗಳ ಕಡೆಗೆ ಮಾತಿನ ನೋಟ ತಿರುಗುವಂತೆ ಮಾತನಾಡಿದ್ದಾರೆ.

ರಾಜಕಾರಣದಲ್ಲಿ ಎದುರಾಳಿ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ ಎನ್ನುವ ಕಾರಣಕ್ಕೆ ಕೆಲವೊಮ್ಮೆ ಪ್ರಬಲ ನಾಯಕರ ಹತ್ಯೆಗಳು ನಡೆಯುತ್ತದೆ. ಇನ್ನು ರಾಜಕಾರಣದಲ್ಲಿ ಸೋಲು ಎದುರಾಗುತ್ತದೆ ಎನ್ನುವ ಸಮಯದಲ್ಲಿ ಕೆಲವೊಮ್ಮೆ ತಮ್ಮವರನ್ನೇ ಕೊಂದು ರಾಜಕೀಯ ಲಾಭ ಪಡೆಯುವ ಕೆಲಸವೂ ನಡೆಯುತ್ತದೆ. ಕಳೆದ ಚುನಾವಣೆ ಸಮಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪರೇಶ್ ಮೇಸ್ತಾ ಎಂಬ ತಳ ಮಟ್ಟದ ಹಿಂದೂ ಕಾರ್ಯಕರ್ತನ ಕೊಲೆ ನಡೆದಿತ್ತು. ಅದನ್ನು ರಾಜಕೀಯ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕೊಲೆ ಮಾಡಿದ್ದಾರೆ, ಸಿದ್ದರಾಮಯ್ಯ ಸರ್ಕಾರವೇ ಬೆಂಬಲ ಕೊಡುತ್ತಿದೆ ಎಂದು ಆರೋಪ ಮಾಡಿದ್ದರು. ಕೊಲೆಗೂ ನಮಗೂ ಸಂಬಂಧವೇ ಇಲ್ಲ ಎಂದು ಕಡ್ಡಿ ಮುರಿದಂತೆ ಮಾತನಾಡಿದ್ದ ಸಿದ್ದರಾಮಯ್ಯ, ಸಿಬಿಐ ತನಿಖೆಗೆ ಆದೇಶ ಮಾಡಿದ್ದರು. ಕಳೆದ ಐದಾರು ತಿಂಗಳ ಹಿಂದೆ ಸಿಬಿಐ ತನಿಖಾ ವರದಿ ಸಲ್ಲಿಸಿದ್ದು, ಕೊಲೆಗೆ ರಾಜಕೀಯ ನಂಟಿಲ್ಲ ಎಂದಿತ್ತು. ಕೇಂದ್ರ ಹಾಗು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿ ಇದ್ದಾಗಲೇ ವರದಿ ಬಂದಿದ್ದು ಕಾಂಗ್ರೆಸ್ ವಾದಕ್ಕೆ ಆನೆ ಬಲ ಬಂದಂತಾಗಿತ್ತು.

ಅದೇನೇ ಇರಲಿ, ಪ್ರಾಣಿಗಳ ಮೇಲೆ ತೋರಿಸುವ ಪ್ರೀತಿ ಮನುಷ್ಟರ ಮೇಲೂ ಇರಬೇಕು. ಯಾಕಂದ್ರೆ ಮನುಷ್ಯ ಕೂಡ ಒಂದು ಜಾತಿಯ ಪ್ರಾಣಿಯೇ ಆಗಿದ್ದಾನೆ. ಈ ಪ್ರಕರಣದಲ್ಲೂ ಕೊಂದವರಿಗೆ ಶಿಕ್ಷೆಯಾಗಬೇಕು. ರಾಜಕಾರಣದಲ್ಲಿ ತಳ ಸಮುದಾಯ ಹುಡುಗರ ಕೊಲೆಗಳು ನಡೆಯುವುದು ನಿಲ್ಲಬೇಕು.

ಕೃಷ್ಣಮಣಿ

Tags: cow slaughter banEnglish ಪ್ರವೀಣ್​ ಕಮ್ಮಾರManeka GandhimurderPraveen KammarState Governmentಕೊಲೆಗೋ ಹತ್ಯೆ ನಿಷೇಧಮೇನಕಾ ಗಾಂಧಿರಾಜ್ಯ ಸರ್ಕಾರ
Previous Post

ಬಿಜೆಪಿ ಸರ್ಕಾರ ಪುಲ್ವಾಮ ದಾಳಿಯನ್ನು ರಾಜಕೀಯವಾಗಿ ಬಳಸಿಕೊಂಡು ಚುನಾವಣೆ ನಡೆಸಿತು: ರಮೇಶ್‌ ಬಾಬು

Next Post

ಜನ ನಮ್ಮನ್ನು ಮನೆಯ ಮಕ್ಕಳಂತೆ ನೋಡ್ತಿದ್ದಾರೆ: ಅನಿತಾ ಕುಮಾರಸ್ವಾಮಿ‌

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಜನ ನಮ್ಮನ್ನು ಮನೆಯ ಮಕ್ಕಳಂತೆ ನೋಡ್ತಿದ್ದಾರೆ: ಅನಿತಾ ಕುಮಾರಸ್ವಾಮಿ‌

ಜನ ನಮ್ಮನ್ನು ಮನೆಯ ಮಕ್ಕಳಂತೆ ನೋಡ್ತಿದ್ದಾರೆ: ಅನಿತಾ ಕುಮಾರಸ್ವಾಮಿ‌

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada