ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದಿದ್ದ ಕೋಮು ಗಲಭೆ ಖಂಡಿಸಿ ಪ್ರತಿಭಟನೆ ನಡೆಸಲಾಯ್ತು. ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಟೌನ್ಹಾಲ್ ಬಳಿ ಪ್ರತಿಭಟನೆ ಮಾಡಿದ್ರು. ಹಿಂದೂ ಸಂಘಟನಕಾರರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಅವಕಾಶ ಕೊಡದೆ ಪೊಲೀಸರು ವಶಕ್ಕೆ ಪಡೆಯುವ ಯತ್ನ ಮಾಡಿದ್ರು. ಡಿಸಿಪಿ ಶೇಖರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಂಡು ಹೋರಾಟಗಾರರನ್ನು ವಶಕ್ಕೆ ಪಡೆಯಲಾಯ್ತು.
ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆಗೆ ಮುಂದಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಕೆಲಸ ಮಾಡಲಾಯ್ತು. ಪ್ರತಿಭಟನೆ ನೋಡಲು ಬಂದಿದ್ದ ವಿಶ್ವ ಹಿಂದೂ ಪರಿಷತ್ ಸದಸ್ಯರನ್ನು ಪೊಲೀಸ್ರು ವಶಕ್ಕೆ ಪಡೆದುಕೊಂಡ್ರು. ನಾನು ಕೇಸರಿ ಶಾಲು ಹಾಕಿದ್ದೇನೆ ಎಂಬ ಕಾರಣಕ್ಕೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ. ಕೇಸರಿ ಶಾಲು ಹಾಕುವುದೇ ತಪ್ಪಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಟೌನ್ ಹಾಲ್ ಬಳಿ ಬೆಂಗಳೂರು ಗಣೇಶ ಉತ್ಸವ ಸಮಿತಿ ಸಭೆ ಇತ್ತು, ಹೀಗಾಗಿ ಸಭೆಗೆ ಬಂದಿದ್ದೆ, ಪ್ರತಿಭಟನೆ ಮಾಡಲು ಬಂದಿರಲಿಲ್ಲ ಎಂದಿದ್ದಾರೆ.
ಹಿಂದೂ ಕಾರ್ಯಕರ್ತರು ಟೌನ್ ಹಾಲ್ ಬಳಿ ಪ್ರತಿಭಟನೆಗೆ ಗಣೇಶ ಮೂರ್ತಿ ಜೊತೆಗೆ ಬಂದಿದ್ದರು. ಪ್ರತಿಭನೆಗೆ ಮುಂದಾಗ್ತಿದ್ದ ಹಾಗೆ ಪ್ರತಿಭಟನಕಾರರಿಂದ ಪೊಲೀಸ್ರು ಗಣೇಶ್ ಮೂರ್ತಿ ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ಗಣೇಶ ಮೂರ್ತಿಯನ್ನು ಪೊಲೀಸರು ಜೀಪ್ನಲ್ಲಿ ತೆಗೆದುಕೊಂಡು ಹೋದರು. ಈ ವೇಳೆ ಪೋಲಿಸರ ನಡೆಗೆ ಅಕ್ರೋಶ ಹೊರಬಿತ್ತು. ಕೇಸರಿ ಶಾಲು ಹಾಕಿದಕ್ಕೆ ನಮ್ಮನ್ನ ಅರೆಸ್ಟ್ ಮಾಡಿದ್ದಾರೆ. ನಾವು ತಾಯಿ ಗರ್ಭದಲ್ಲಿ ಇದ್ದಾಗಲೇ ಕೇಸರಿ ತಿಂದು ಬಂದವರು. ಜಿಹಾದಿ ಮನಸ್ಥಿತಿ ಇರೋರನ್ನ ಬಂಧಿಸಲಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ಗಣೇಶ ಮೂರ್ತಿಯನ್ನು ಅರೆಸ್ಟ್ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ