• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರದಿಂದ ಅನ್ಯಾಯ ಆಗಿದೆಯೇ? : ಬಹಿರಂಗ ಚರ್ಚೆಗೆ ಬನ್ನಿ ಹೆಚ್ಡಿಕೆ ಸವಾಲು

Any Mind by Any Mind
February 20, 2024
in Top Story, ಕರ್ನಾಟಕ, ರಾಜಕೀಯ
0
ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಕ್ತಾರಾರಾಗಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು (Bengaluru): ತೆರಿಗೆ, ಅನುದಾನದಲ್ಲಿ ಅನ್ಯಾಯವಾಗಿದ್ದರೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು (H.D.Kumarswamy) ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರಿಗೆ ನೇರ ಸವಾಲು ಹಾಕಿದ್ದಾರೆ.

ADVERTISEMENT

ಕೇಂದ್ರದಿಂದ ಅನ್ಯಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸರಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕೂಡಿಸಿಕೊಂಡು ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದಿಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿಗಳು ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂ.ನಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು. 2624 ಕೋಟಿ ರೂ. ಎಸ್ ಡಿಆರ್ ಎಫ್ ನಲ್ಲಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತಾರಲ್ಲಾ ಈ ಹಣದಲ್ಲಿ 75% ಮೊತ್ತವನ್ನು ಕೇಂದ್ರ ಸರ್ಕಾರವೇ ನೀಡಿದೆ. ನಾವು ಕೊಟ್ಟೆವು ಎಂದು ಇವರು ಹೇಳಿದ್ದೇ ಹೇಳಿದ್ದು. ನಾನು ಹೇಳೋದೇ ಸತ್ಯ, ನಾನು ಹೇಳೋದೇ ಸತ್ಯ ಎಂದು ಹೇಳ್ತಾನೇ ಇದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯ ಮಾಡು ಎಂದು ನಮ್ಮ ಹಿರಿಯರು ಗಾದೆ ಮಾತು ಹೇಳಿದ್ದಾರೆ, ಅದನ್ನು ನಮ್ಮ ಮುಖ್ಯಮಂತ್ರಿಗಳು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕನ್ನಡಿಗರಿಗೆ ಅನ್ಯಾಯ, ಕನ್ನಡಿಗರಿಗೆ ಅನ್ಯಾಯ ಎಂದು ಜಾಗಟೆ ಹೊಡೆಯುತ್ತಿರಲ್ಲ, ಅಲ್ಲಿ ಆನೆ ತುಳಿದು ಸತ್ತರೆ 15 ಲಕ್ಷ ರೂ. ಕೊಡುತ್ತೀರಿ. ಇಲ್ಲಿ ಆನೆ ತುಳಿದು ಸತ್ತರೆ 5 ಲಕ್ಷ ಕೊಡುತ್ತೀರಿ. ಅದನ್ನು ಪಡೆಯುವುದಕ್ಕೆ ಐವತ್ತು ಸಲ ಕಚೇರಿಗಳಿಗೆ ಅಳೆಯಬೇಕು. ನಿಮ್ಮ ನೀತಿ ಹೇಗಿದೆ ಎಂದರೆ; ರಾಜ್ಯಕ್ಕೆ ಅನ್ಯಾಯ! ಕೇರಳಕ್ಕೆ ನ್ಯಾಯ!! ಎನ್ನುವಂತೆ ಆಗಿದೆ ಎಂದರು.‌

ಸಿದ್ದರಾಮಯ್ಯ ಅವರು ತಮ್ಮ ರಾಷ್ಟ್ರೀಯ ನಾಯಕರ ಸಲಹೆ ಮೇರೆಗೆ 15 ಲಕ್ಷ ರೂ. ಕೊಟ್ಟಿದ್ದಾರೆ. ನಾನೆಲ್ಲೂ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂದು ಹೇಳಿಲ್ಲ. ನಮ್ಮ ರೈತರಿಗೆ ಬರ ಪರಿಹಾರ ಎಂದು ಎರಡು ಸಾವಿರ ರೂ. ಘೋಷಣೆ ಮಾಡುತ್ತಾರೆ. ಕೇರಳದವಗೆ 15 ಲಕ್ಷ ರೂ. ಕೊಡುತ್ತಾರೆ. ಕೇಳಿದರೆ ಕೇಂದ್ರದಿಂದ ಪರಿಹಾರವೇ ಬಂದಿಲ್ಲ ಅಂತ ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯ ಆಗಿದೆ ಎನ್ನುತ್ತಾರೆ. ಸಾವಿರ ಸಲ ಸುಳ್ಳು ಹೇಳಿ ಅದನ್ನೇ ನಿಜ ಮಾಡುವ ರೀತಿ ಇವರು ಬರೀ ಸುಳ್ಳುಗಳನ್ನೇ ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಹಣಕಾಸು ಆಯೋಗದ ಮುಂದೆ ಮಾಹಿತಿ ಕೊಡಿ:

ರಾಜ್ಯ ಸರಕಾರಕ್ಕೆ ನನ್ನ ಸಲಹೆ ಇಷ್ಟೇ. ಈಗ 16ನೇ ಹಣಕಾಸು ಆಯೋಗ ರಚನೆ ಆಗಿದೆ. ಆಯೋಗ ರಾಜ್ಯಕ್ಕೆ ಬಂದಾಗ ಸರಿಯಾದ ಮಾಹಿತಿ ಕೊಟ್ಟು ಹಕ್ಕು ಮಂಡಿಸಿ. ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟರೆ ಅಥವಾ ದೂರಿದರೆ ಉಪಯೋಗ ಇಲ್ಲ. ತೆರಿಗೆ ಪಾಲು, ಅನುದಾನ ಹಂಚಿಕೆ ಮಾಡುವುದು ಆಯೋಗವೇ ಹೊರತು ಕೇಂದ್ರವಲ್ಲ. ಈಗಾಗಲೇ ಕೇಂದ್ರದಿಂದ ಬಂದಿರುವ ಹಣವನ್ನು ಸರ್ಕಾರ ಸದ್ಬಳಕೆ ಮಾಡಿಲ್ಲ. ಆ ಬಗ್ಗೆ ಇವರು ಚಕಾರ ಎತ್ತುತ್ತಿಲ್ಲ ಎಂದು ಅವರು ದೂರಿದರು.

ಖರ್ಗೆ ಯಾಕೆ ಸುಮ್ಮನೆ ಇದ್ದರು?:

ರಾಜ್ಯಕ್ಕೆ ಅನ್ಯಾಯ ಆದರೆ ನಾವು ಸುಮ್ಮನೆ ಇರುವ ಪ್ರಶ್ನೆಯೇ ಇಲ್ಲ. ರಾಜ್ಯಸಭೆಯಲ್ಲಿ ಮೇಕೆದಾಟು ವಿಷಯದಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಮಾತನಾಡಿದಾಗ ರಾಜ್ಯವನ್ನು ಪ್ರತಿನಿಧಿಸುವ ಕಾಂಗ್ರೆಸ್ ಸದಸ್ಯರು ಯಾಕೆ ಬೆಂಬಲ ಕೊಡಲಿಲ್ಲ? ಅವರು ದನಿ ಎತ್ತಿದರೆ ನಿಮ್ಮ ಪಕ್ಷದ ಒಬ್ಬರೂ ಮಾತನಾಡಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಇದ್ದರಲ್ಲ, ಭಾವೀ ಪ್ರಧಾನಿ ಎಂದು ಹೇಳಿಕೊಂಡು ತಿರುಗುತ್ತಿದ್ದಿರಿ. ಅವರೇಕೆ ಮಾತನಾಡಲಿಲ್ಲ? ಇಲ್ಲಿ ಅನ್ಯಾಯ ಆಗಿದ್ದರೆ ಅವರು ಬಾಯಿ ತೆಗೆಯಬೇಕಿತ್ತಲ್ಲ. ಅವರು ಯಾಕೆ ಮೌನವಾಗಿ ಇದ್ದರು ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಮಾಜಿ ಸಚಿವರಾದ ಸಿ.ಸಿ.ಪಾಟೀಲ್, ಶಾಸಕರಾದ ಸಮೃದ್ಧಿ ಮಂಜುನಾಥ್, ಕರೆಮ್ಮ ನಾಯಕ್ ಅವರು ಈ ಸಂದರ್ಭದಲ್ಲಿ ಇದ್ದರು.

#karnataka #bengaluru #hdkumarswamy #siddaramaiah #congress #jds #bjp

Previous Post

ಧಮ್ಕಿ ಹಾಕುವ ಸಂಸ್ಕೃತಿ ನನ್ನದಲ್ಲ: ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Next Post

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
Next Post
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

Please login to join discussion

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada