• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನವಜೋತ್‌ ಸಿಂಗ್‌ ಸಿಧುಗೆ ಆಪ್‌ ಬಾಗಿಲು ತೆರೆಯುತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
May 4, 2022
in ದೇಶ, ರಾಜಕೀಯ
0
ನವಜೋತ್‌ ಸಿಂಗ್‌ ಸಿಧುಗೆ ಆಪ್‌ ಬಾಗಿಲು ತೆರೆಯುತ್ತಾ?
Share on WhatsAppShare on FacebookShare on Telegram

ರಾಷ್ಟ್ರ ರಾಜಕಾರಣದಲ್ಲಿ ಹುಚ್ಚು ದೊರೆ ಎಂದು ತೀವ್ರ ಕುಖ್ಯಾತಿ ಪಡೆದಿರುವ ಮಾಜಿ ಕ್ರಿಕೆಟಿಗ, ಮಾಜಿ ಸಚಿವ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ದ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಉಸ್ತುವಾರಿ ಹಾಗೂ ನಾಯಕರುಗಳ ದೂರಿನ ಮೇರೆಗೆ ಶಿಸ್ತು ಕ್ರಮ ಜರುಗಿಸಲು ಮುಂದಾಗಿದೆ.

ADVERTISEMENT

ಈ ನಡುವೆ ಸಿಧು ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಪಕ್ಷದ ಇಮೇಜನ್ನು ಸಾಕಷ್ಟು ಡ್ಯಾಮೇಜ್ ಮಾಡಿದ್ದಾರೆ ಎಂಬ ಆರೋಪ ಒಂದುಕಡೆಯಾದರೆ, ಈ ಡ್ಯಾಮೇಜ್ ಮತ್ತೆ ಕವರ್ ಮಾಡಲು ಅಂದರೆ ಪಂಜಾಬ್ನಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳ್ಳಲು ಸಾಕಷ್ಟು ಸಮಯ ಬೇಕಿದೆ ಎಂದು ಇಡೀ ರಾಕಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಸಿಧು ಗಾಳಿ ಯಾವ ಕಡೆ ಬೀಸುತ್ತದೋ ಆ ಕಡೆ ತಿರುಗುತ್ತಾರೆ ಎಂಬ ಮಾತುಗಳು ರಾಷ್ಟ್ರ ರಾಜಕಾರಣದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತದೆ. ಈ ಮಧ್ಯೆ ಸಿಧು ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ 2004ರಲ್ಲಿ ಬಿಜೆಪಿ ಸೇರಿದ ಸಿಧು ಅಮೃತಸರ ಲೋಕಸಭೆ ಕ್ಷೇತ್ರದ ಟಿಕೆಟ್ಅನ್ನು ನಿರಾಯಸವಾಗಿ ಪಡೆದು ಎರಡು ಭಾರೀ ಗೆದ್ದರು 2014ರಲ್ಲಿ ಬದಲಾದ ರಾಜಕೀಯ ವಿದ್ಯಾಮಾನದಲ್ಲಿ ಸಿಧು ಸೋಲನ್ನು ಕಂಡು ಮತ್ತು 2016ರಲ್ಲಿ ಸ್ಥಳೀಯ ಬಿಜೆಪಿ ನಾಯಕರ ತೀವ್ರ ವಿರೋಧದ ನಡುವೆ ರಾಜ್ಯಸಭೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದರು.

2017ರಲ್ಲಿ ಚುನಾವಣೆ ನಡೆಯುವ ಹೊಸ್ತಿಲಲ್ಲಿ ಸಿಧು ಬಿಜೆಪಿ ಹಾಗೂ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿ ಅಮೃತಸರ ಪೂರ್ವದ ಟಿಕೆಟ್ ಪಡೆದು ಗೆದ್ದು ಕ್ಯಾಪ್ಟನ್ ಸರ್ಕಾರದಲ್ಲಿ ಸಚಿವರಾಗಿದ್ದರು. ತಮ್ಮ ಬಹುಕಾಲದ ಆಪ್ತ ಸ್ನೇಹಿತ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ 2018ರಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿಧು ಭಾರತದಿಂದ ಸ್ನೇಹಿತನಿಗೆ ಶುಭಾಶಯ ಕೋರಲು ಹೋಗಿದ್ದರು. ನಂತರ ವಿವಾದಾತ್ಮಕ ಹೇಳಿಕೆಯನ್ನು ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಂದಿನ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಕಾಂಗ್ರೆಸ್ ಹೈಕಮಾಂಡ್ನಿಂದ ಶಸ್ತುಕ್ರಮದ ಎಚ್ಚರಿಕೆಯನ್ನು ಸಹ ಪಡೆದಿದ್ದರು ನಂತರದ ದಿನಗಳಲ್ಲಿ ಹೀಗೆ ಮುಂದುವರೆದ ಕಾರಣ ಸಿಧುರನ್ನ ಸಚಿವ ಸ್ಥಾನದಿಂದ ವಜಾ ಮಾಡಲಾಗಿತ್ತು.

ಆ ನಂತರ ರಾಜಕೀಯ ಬೆಳವಣಿಗೆಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಸಿಧು ಆಡಿದೆ ಆಟ ಎಂಬಂತ್ತಾಗಿತ್ತು ಅದು ಎಷ್ಟರ ಮಟ್ಟಿಗೆ ಎಂದರೆ ಪಕ್ಷ ಹೀನಾಮಾನವಾಗಿ ಸೋಲುವಷ್ಟು. ಈ ನಡುವೆ ಸಿಧು ಕಾಂಗ್ರೆಸ್ ವಿರುದ್ದ ಮತ್ತೊಮ್ಮೆ ಬಹಿರಂಗವಾಗಿ ಗುಡುಗಲು ಶುರು ಮಾಡಿದ್ದು ಸ್ವತಃ ಕಾಂಗ್ರೆಸ್ ನಾಯಕರನ್ನೇ ಪಕ್ಷದ ವೇದಿಕೆಯಲ್ಲಿ ನಿಂತುಕೊಂಡು ಹಿಗ್ಗಾಮುಗ್ಗಾ ಜರಿಯುತ್ತಿದ್ದಾರೆ.

ಆದರೆ, ಮಹತ್ವದ ಬೆಳವಣಿಗೆಯಲ್ಲಿ ಸಿಧು ಎಎಪಿ ಸೇರಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಅದಕ್ಕೆ ಪೂರಕವೆಂಬಂತೆ ಸಿಧು ಇತ್ತೀಚಿನ ದಿನಗಳಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ರನ್ನು ಹಾಡಿ ಹೊಗಳುತ್ತಿರುವುದು ಅಧಿಕಾರದ ಚುಕ್ಕಾಣಿ ಹಿಡಿದು ಕೆಲವೇ ಕೆಲವು ದಿನಗಳಾದರು ಸಹ ಜನರ ಮನ್ನಣೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದ ಕಾರಣ ಸಿಧು ಮಾನ್ರನ್ನು ಎಲ್ಲಡೆ ಹಾಡಿ ಹೊಗಳುತ್ತಿದ್ದಾರೆ.

ಅದಕ್ಕೆ ಪೂರವೆಂಬಂತೆ ಈ ಹಿಂದೆ ಆಮ್ ಆದ್ಮಿ ಪಕ್ಷದಿಂದ ತಮ್ಮಗೆ ಆಫರ್ ಬಂದಿದೆ ಎಂದು ಹೇಳಿ ಸಿಧು ಸುದ್ದಿಯಲ್ಲಿದ್ದರು. ಇತ್ತಿಛಿನ ದಿನಗಳಲ್ಲಿ ಸಿಧು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಸದ್ಯ ಪಂಜಾಬನಲ್ಲಿ 5 ರಾಜ್ಯಸಭಾ ಸ್ಥಾನಗಳು ಖಾಲಿಯಿದ್ದು ಅದೆಲ್ಲವು ಸಹ ಆಡಳಿತ ಪಕ್ಷದ ಪಾಲಾಗಿದೆ ಸಿಧು ಅದರ ಮೇಲೆ ಕಣ್ಣಿಟ್ಟಿದ್ದು ತಮ್ಮನ್ನು ನಾಮನಿರ್ದೇಶನ ಮಾಡುವಂತೆ ಆಪ್ ನಾಯಕರ ಬಳಿ ಎಂದು ಸುತ್ತು ಮಾತುಕತೆ ನಡೆಸಿದ್ದಾರಂತೆ. ಆದರೆ, ಆಪ್ ನಾಯಕರಿಗೆ ಇವರ ಸೇರ್ಪಡೆ ಇಷ್ಟವಿಲ್ಲ ಎಂದು ಪಕ್ಷದ ಒಂದು ಮೂಲ ಹೇಳಿದೆ ಯಾಕೆಂದರೆ ಸಿಧು ಹೋದ ಕಡೆ ಆಯಾ ಪಕ್ಷಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಕೇಳಿ ಬರುತ್ತಿದೆ.

ಮುಂದಿನ ದಿನಗಳಲ್ಲಿ ಈ ಕ್ಷಿಪ್ರ ಬೆಳವಣಿಗೆ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress Partyis-navjot-singh-sidhu-joining-aapನರೇಂದ್ರ ಮೋದಿಬಿಜೆಪಿ
Previous Post

ದಂಗಲ್ ದಾಖಲೆ ಮುರಿದ ರಾಕಿಭಾಯ್: ಅತೀ ಹೆಚ್ಚು ಗಳಿಸಿದ 2ನೇ ಚಿತ್ರ ಕೆಜಿಎಫ್-2 ದಾಖಲೆ!

Next Post

ಆರ್ ಸಿಬಿಗೆ 13 ರನ್ ರೋಚಕ ಜಯ, ಚಾಲೆಂಜ್ ಸೋತ ಚೆನ್ನೈ!

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಆರ್ ಸಿಬಿಗೆ 13 ರನ್ ರೋಚಕ ಜಯ, ಚಾಲೆಂಜ್ ಸೋತ ಚೆನ್ನೈ!

ಆರ್ ಸಿಬಿಗೆ 13 ರನ್ ರೋಚಕ ಜಯ, ಚಾಲೆಂಜ್ ಸೋತ ಚೆನ್ನೈ!

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada