• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Winter Session 2025: ಕಲಾಪಕ್ಕೆ ಬಾರದ ಪರಿಷತ್‌ ಸದಸ್ಯರು: ನೆಪಕ್ಕೆ ಮಾತ್ರ ನಡೀತಿದೆಯಾ ಬೆಳಗಾವಿ ಅಧಿವೇಶನ..?

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಕಲಾಪಕ್ಕೆ ಬಾರದ ಪರಿಷತ್‌ ಸದಸ್ಯರು: ನೆಪಕ್ಕೆ ಮಾತ್ರ ನಡೀತಿದೆಯಾ ಬೆಳಗಾವಿ ಅಧಿವೇಶನ..?
Share on WhatsAppShare on FacebookShare on Telegram

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸರ್ಕಾರ ರಾಜ್ಯದ ಸಮಸ್ಯೆಗಳು, ಅದರ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲು ಅಧಿವೇಶನ(session )ನಡೆಸುತ್ತ ಬಂದಿದೆ. ಅದರಂತೆ ಪ್ರಮುಖವಾಗಿ ಅಖಂಡ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಕುಂದು ಕೊರತೆ, ಮೂಲಭೂತ ಸೌಕರ್ಯಗಳ, ರೈತರು, ಕಾರ್ಮಿಕರು, ಯುವಕರು, ಮಹಿಳೆಯರ ಸಾಕಷ್ಟು ಸಮಸ್ಯೆಗಳಿವೆ. ಆದರೆ ಇದುವರೆಗೂ ಪರಿಹಾರವಾಗದಿರುವುದು ದುರಂತ.

ADVERTISEMENT
Belagavi session : ಸಿದ್ದರಾಮಯ್ಯ ರಾಜ್ಯಕ್ಕೆ ಏನೂ ಅನುದಾನ ಕೊಟ್ಟಿಲ್ಲ #pratidhvani #drcnashwathnarayan

ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ( Belagavi session) ನಡೆಯುತ್ತಿದೆ. ಈ ಬಾರಿಯೂ ರಾಜ್ಯದ ಜನರು ಅಧಿವೇಶನದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಮ್ಮ ಸಮಸ್ಯೆಗಳಿಗೆ ಈಗಲಾದರೂ ಒಂದು ಪರಿಹಾರ ದೊರೆಯಬಹುದಾ ಎಂಬ ಆಶಾಭಾವದಲ್ಲಿದ್ದಾರೆ. ಆದರೆ ಈ ಬಗ್ಗೆ ಜನರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸಬೇಕಿದ್ದ ಜನಪ್ರತಿನಿಧಿಗಳು ಮೌನಕ್ಕೆ ಶರಣಾದಂತೆ ಕಂಡು ಬರುತ್ತಿದೆ. ವಿಧಾನಸಭೆಯಾಗಲಿ ಅಥವಾ ಪರಿಷತ್ತಾಗಲಿ ಜನರ ಭಾವನೆಗಳನ್ನು ಮನ್ನಿಸಿ, ಜನಸಾಮಾನ್ಯರ ಪ್ರಶ್ನೆಗಳಿಗೆ ಪರಿಹಾರ ನೀಡಿ, ಅವುಗಳನ್ನು ಗೌರವಿಸುವ ಕೇಂದ್ರಗಳಾಗಬೇಕೇ ಹೊರತು, ಶಾಸಕರು, ಮಂತ್ರಿಗಳಿಗೆ ಕಾಲ ಹರಣ ಮಾಡುವ ವಿಶ್ರಾಂತಿ ಸ್ಥಳಗಳಾಗಬಾರದು.

Siddaramaiah : 5 ವರ್ಷ ಸಿಎಂ ‌ಆಗಿ ನೀವೇ ಮುಂದುವರಿತೀರಾ ಸರ್ ಅಂತಿದ್ದಂತೆ ಸಿದ್ದು ಉತ್ತರ ನೋಡಿ! #pratidhvani

ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಅಧಿವೇಶನದಲ್ಲಿ ಶಾಸಕರು ಚರ್ಚೆಯಲ್ಲಿ ಪಾಲ್ಗೊಳ್ಳಲು ಮುಂದಾಗುತ್ತಿಲ್ಲವಾ? ಹೀಗೊಂದು ಪ್ರಶ್ನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ವಿಧಾನ ಪರಿಷತ್‌ನಲ್ಲಿ ಸಾಕಷ್ಟು ಹಿರಿಯ ರಾಜಕಾರಣಿಗಳು ಇರುತ್ತಾರೆ. ಅದರಲ್ಲಿ ಸಾಕಷ್ಟು ಸಮಸ್ಯೆಗಳು ಗಂಭೀರವಾಗಿ ಚರ್ಚೆಯಾಗಬೇಕು. ಅಲ್ಲದೇ ಅವುಗಳನ್ನು ಪರಿಹರಿಸುವ ಮಾರ್ಗೋಪಾಯಗಳ ಬಗ್ಗೆಯೂ ಗಮನ ಹರಿಸಬೇಕು. ಆದರೆ ಈ ಬಾರಿಯ ಸದನಕ್ಕೆ ಪರಿಷತ್‌ ಸದಸ್ಯರ ಹಾಜರಾತಿ ಕೊರತೆ ಎದ್ದು ಕಾಣುತ್ತಿದೆ. ಪ್ರಮುಖವಾಗಿ ವಿಧಾನಪರಿಷತ್‌ ಕೂಡ ಶಾಸನಗಳ ರಚನೆ ಅವುಗಳ ಕಾರ್ಯರೂಪಕ್ಕೆ ತರುವಲ್ಲಿ ಪಾತ್ರ ವಹಿಸುತ್ತದೆ.

Belagavi Winter Session: ವಿಪಕ್ಷ ನಾಯಕ ಅಶೋಕ್ ಬಗ್ಗೆ ಸಿಎಂ ಸಿದ್ರಾಮಯ್ಯ ಹೀಗ್ಯಾಕಂದ್ರು? #pratidhvani

ವಿಧಾನಸಭೆಯ ಸದಸ್ಯರಷ್ಟೇ ಅವರಿಗೂ ಅಭಿವೃದ್ದಿಯ ದೃಷ್ಟಿಕೋನ, ಸುಧಾರಣೆಯ ತುಡಿತ ಹಾಗೂ ಚರ್ಚೆಯ ಉತ್ಸುಕತೆ ಇರಬೇಕು. ಆದರೆ ಬಹುತೇಕ ಸದಸ್ಯರಲ್ಲಿ ಅದರ ಕೊರತೆಯು ಕಂಡು ಬರುತ್ತಿದೆ. ಬೆರಳೆಣಿಕೆಯಷ್ಟೇ ಜನರು ಭಾಗವಹಿಸಿ ಚರ್ಚೆ ಮಾಡಿದರೆ ಅದರಿಂದ ಏನು ಪ್ರಯೋಜನ? ಇರುವ 75 ಜನರಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಹಾಜರಾಗಬೇಕು. ಅಂದಾಗ ಮಾತ್ರ ರಾಜ್ಯದ ಹಲವು ಸಮಸ್ಯೆಗಳಿಗೆ ಮುಕ್ತಿ ಹಾಡಲು ಸಾಧ್ಯವಾಗಬಹುದು. ಆದರೆ ಜನರ ತೆರಿಗೆ ಹಣದಲ್ಲಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಕೇವಲ ಶಾಸಕರು, ಸಚಿವರ ಮೋಜು, ಮಸ್ತಿಗೆ ಸೀಮಿತವಾದರೆ ಏನು ಲಾಭ..? ಸದನಕ್ಕೆ ಹಾಜರಾಗದೇ ಕಾಲ ಹರಣ ಮಾಡುವ ಜನಪ್ರತಿನಿಧಿಗಳು ತಮ್ಮನ್ನು ಆಯ್ಕೆ ಮಾಡಿದ ಜನರ ಏಳ್ಗೆಯನ್ನು, ಜನರ ಬದುಕಲ್ಲಿ ಬದಲಾವಣೆ ಹೇಗೆ ತರುತ್ತಾರೆ ಎನ್ನುವುದು ಕೂಡು ದೊಡ್ಡ ಪ್ರಶ್ನೆಯಾಗಿದೆ.

Santhosh Lad: ಹತ್ತು ವರ್ಷದ ಹಿಂದೆ ಮೋದಿ ಸಾಹೇಬ್ರು ಚೌಕಿದಾರ್ ಅಂತಿದ್ರು.. ಈಗ್ಯಾಕೆ ಮೌನವಾಗಿದ್ದಾರೆ..?#pmmodi

ಕಳೆದ ಬಾರಿ 15 ಕೋಟಿ ವೆಚ್ಚದಲ್ಲಿ ನಡೆದಿದ್ದ ಬೆಳಗಾವಿ ಅಧಿವೇಶನಕ್ಕೆ, ಈ ಸಲ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದೆ. ಹೀಗಿರುವಾಗ ರಾಜ್ಯದ ಅಭಿವೃದ್ದಿಯ ಬಗ್ಗೆ ಚರ್ಚಿಸಿ ಪರಿಹಾರ ನೀಡದಿದ್ದರೆ ಎಲ್ಲವೂ ನೀರಲ್ಲಿ ಹೋಮ ಮಾಡಿದಂತಾಗುತ್ತದೆ. ಇನ್ನುಳಿದ ಬಾಕಿ ದಿನಗಳಲ್ಲಾದರೂ ವಿಧಾನಸಭೆ ಹಾಗೂ ಪರಿಷತ್‌ ಸದಸ್ಯರು ಎರಡೂ ಸದನಗಳಲ್ಲಿ ಗಂಭೀರ, ಗಹನವಾದ ಚರ್ಚೆ ನಡೆಸಬೇಕು. ಅಲ್ಲದೇ ಸಾಧ್ಯವಾದಷ್ಟು ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮಹತ್ವದ ನಿರ್ಧಾರಗಳಿಗೆ ಈ ಅಧಿವೇಶನ ಸಾಕ್ಷಿಯಾಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

Tags: belagavi sessionBJPcongressJDSKarnataka PoliticsPolitics
Previous Post

ನೀವು ಹೆಮ್ಮೆಪಡುವ ಪತ್ರಿಕೋದ್ಯಮ ಇದೇನಾ?: ಮಾಧ್ಯಮಗಳಿಗೆ ದರ್ಶನ್ ಪತ್ನಿ ನೇರ ಪ್ರಶ್ನೆ

Next Post

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada