• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ನಿಮ್ಮ ಪ್ರಯಾಣಕ್ಕೆ ಬಸ್ ಮುಖ್ಯವೋ..?​ ಡ್ರೈವರ್ ​ಮುಖ್ಯವೋ..? ಮಾಲೀಕನೋ..? ಇಲ್ಲಿದೆ ನಿಖರ ಮಾಹಿತಿ..

ಕೃಷ್ಣ ಮಣಿ by ಕೃಷ್ಣ ಮಣಿ
February 26, 2023
in ಅಂಕಣ
0
ನಿಮ್ಮ ಪ್ರಯಾಣಕ್ಕೆ ಬಸ್ ಮುಖ್ಯವೋ..?​ ಡ್ರೈವರ್ ​ಮುಖ್ಯವೋ..? ಮಾಲೀಕನೋ..? ಇಲ್ಲಿದೆ ನಿಖರ ಮಾಹಿತಿ..
Share on WhatsAppShare on FacebookShare on Telegram

ADVERTISEMENT

ಬಸ್​, ರೈಲು, ವಿಮಾನದಲ್ಲಿ ನೀವು ಪ್ರಯಾಣ ಮಾಡುವಾಗ ವಾಹನ ಯಾವುದು ಅಂತಾ ನೋಡ್ತೇವೆ. ಆದರೆ ಬಸ್​ ಚಾಲನೆ ಮಾಡುವ ಚಾಲಕ ಚೆನ್ನಾಗಿ ಓಡಿಸ್ತಾನಾ..? ಅನ್ನೋದನ್ನು ಪ್ರಮುಖವಾಗಿ ನೋಡುತ್ತೇವೆ. ಒಮ್ಮೊಮ್ಮೆ ಚಾಲಕ ಸರಿಯಾಗಿ ಓಡಿಸುವುದಿಲ್ಲ ಎನ್ನುವುದು ಗೊತ್ತಾದರೆ ಬಸ್​ ಬಿಟ್ಟು ಇಳಿದು ಹೋಗುವುದು ಸರಿ. ಕೆಲವೊಮ್ಮೆ ಡಕೋಟಾ ಬಸ್​ ಆದರೂ ಚಾಲಕನ ಭರವಸೆ ಮೇಲೆ ಪ್ರಯಾಣವನ್ನೂ ಮಾಡುತ್ತೇವೆ. ಇದೀಗ ಕರ್ನಾಟಕ ರಾಜಕೀಯ ಪರಿಸ್ಥಿತಿ ಇದೇ ರೀತಿ ಆಗಿದೆ. ಕರ್ನಾಟಕದ ಜನರು ಪ್ರಯಾಣಿಕರಾಗಿದ್ದು, ಭಾರೀ ಪೈಪೋಟಿಯಲ್ಲಿರುವ ಮೂರು ಬಸ್​ಗಳಿವೆ. ಅದರಲ್ಲಿ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ಭಾರೀ ಪೈಪೋಟಿ ನಡೆಸುತ್ತಿವೆ. ಆದರೆ ಇದರಲ್ಲಿ ಮೂರು ಬಸ್​ಗಳಿಗೆ ಡ್ರೈವರ್​ ಯಾರು ಎನ್ನುವುದನ್ನು ನೋಡಿ ಜನರು ಮತ ಚಲಾವಣೆ ಮಾಡಬೇಕಿದೆ. ಆದರೆ ಬಸ್​ ಮಾಲೀಕನನ್ನು ನೋಡಿಕೊಂಡು ಮತ ಚಲಾಯಿಸುವ ಸಂಕಷ್ಟ ಕರ್ನಾಟಕದ ಜನರಿಗೆ ಎದುರಾಗಿದೆ.

ಬಿಜೆಪಿಯೆಂಬ ಬಸ್​’ಗೆ ಚಾಲಕ ಯಾರು ಅನ್ನೋದೇ ಗೊಂದಲ..!

ರಾಜ್ಯ ಬಿಜೆಪಿಯಲ್ಲಿ ಮೊದಲಿಗೆ ಚಾಲಕನ ರೂಪದಲ್ಲಿ ಬಿ.ಎಸ್​ ಯಡಿಯೂರಪ್ಪ ಅವರಿದ್ದರು. ಯಡಿಯೂರಪ್ಪ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಜನರು ಮತ ಚಲಾವಣೆ ಮಾಡಬಹುದಿತ್ತು. ಯಡಿಯೂರಪ್ಪ ಒಮ್ಮೆ ಮಾತು ಕೊಟ್ಟರೆ ತಪ್ಪುವುದಿಲ್ಲ ಎನ್ನುವ ಮಾತಿತ್ತು. ಆದರೆ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಹುದ್ದೆಯಿಂದ ಬಿಜೆಪಿ ಇಳಿಸಿ ಚಾಲಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಕೂರಿಸಿದೆ. ಮುಂದೆ ಅಧಿಕಾರಕ್ಕೆ ಬಂದರೆ ಇದೇ ಬಸವರಾಜ ಬೊಮ್ಮಾಯಿ ಅವರೇ ರಾಜ್ಯವನ್ನು ಮುನ್ನಡೆಸುತ್ತಾರಾ..? ಎನ್ನುವ ಪ್ರಶ್ನೆಗೆ ಬಿಜೆಪಿ ಉತ್ತರ, ಇಲ್ಲ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡಲಾಗುತ್ತದೆ. ಆದರೆ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದನ್ನು ಚುನಾವಣೆ ಬಳಿಕ ನಿರ್ಧಾರ ಮಾಡ್ತೇವೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅಂದರೆ ಬಿಜೆಪಿ ಎಂಬ ಬಸ್​ಗೆ ಚಾಲಕ ಯಾರು ಅನ್ನೋದು ನಿಖರವಾಗಿ ಗೊತ್ತಿಲ್ಲ. ಅದೇ ಕಾರಣಕ್ಕೆ ಬಸ್​ ಮಾಲೀಕತ್ವ ಹೊಂದಿರುವ ನರೇಂದ್ರ ಮೋದಿ ಅವರನ್ನು ತೋರಿಸಿ ಮತ ಕೇಳುವ ಪ್ರಯತ್ನ ಮಾಡುತ್ತಿದ್ದಾರೆ.

ಕಾಂಗ್ರೆಸ್​’ನಲ್ಲಿ ನಡೆದಿದೆ ಚಾಲಕ ಸ್ಥಾನಕ್ಕೇ ಪೈಪೋಟಿ..!

ಕಾಂಗ್ರೆಸ್​ ಎಂಬ ಬಸ್​​ ಏರುವ ಜನರಿಗೂ ಸಣ್ಣಪುಟ್ಟ ಗೊಂದಲಗಳಿವೆ. ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಚಾಲಕ ಸ್ಥಾನಕ್ಕೆ ಕಚ್ಚಾಟ ನಡೆಯುವುದು ಗ್ಯಾರಂಟಿ. ಈಗಾಗಲೇ ಡಿ.ಕೆ ಶಿವಕುಮಾರ್​ ಹಾಗು ಸಿದ್ದರಾಮಯ್ಯ ಬೆಂಬಲಿಗರ ನಡುವೆ ಮಾತಿನ ಸಮರವೂ ನಡೆದಿದೆ. ಚುನಾವಣೆ ಮುಗಿಯುವ ತನಕ ಚಾಲಕ ಯಾರು ಅನ್ನೋ ಬಗ್ಗೆ ಚರ್ಚೆ ಮಾಡಬಾರದು. ಚುನಾವಣೆಯಲ್ಲಿ ಮತದಾರರು ಗೊಂದಲಕ್ಕೆ ಒಳಗಾಗುತ್ತಾರೆ ಎನ್ನುವ ಹೈಕಮಾಂಡ್​ ಸಲಹೆಯನ್ನು ಪಡೆದಿರುವ ನಾಯಕರು ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎನ್ನುವ ಹಾಗೆ ತೋರಿಸಿಕೊಳ್ತಿದ್ದಾರೆ. ಆದರೆ ಚುನಾವಣೆ ಮುಗಿದು ಮತ ಎಣಿಕೆ ದಿನ ಕಾಂಗ್ರೆಸ್​ ಪಕ್ಷಕ್ಕೆ ಬಹುಮತ ಬಂದರೆ..! ಕಾಂಗ್ರೆಸ್​ ಒಳಗೇ ರೆಸಾರ್ಟ್​ ರಾಜಕಾರಣ ನಡೆದರೂ ಅಚ್ಚರಿಯೇನಿಲ್ಲ. ಅಥವಾ ಪಿತ್ರಾರ್ಜಿತ ಆಸ್ತಿಯನ್ನು ಪಾಲು ಮಾಡಿಕೊಂಡಂತೆ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ನಡುವೆ ಹಂಚಿಕೆ ಆದರೂ ಆಗಬಹುದು. ಒಟ್ಟಿನಲ್ಲಿ ಇಬ್ಬರು ಚಾಲಕರು ಸಿದ್ಧರಿದ್ದಾರೆ. ಇವರಿಬ್ಬರಲ್ಲೇ ಒಬ್ಬರು ಕಾಂಗ್ರೆಸ್​ ಬಸ್​ ಓಡಿಸಲಿದ್ದಾರೆ ಎನ್ನುವುದು ಖಚಿತ.

ಜೆಡಿಎಸ್​ ಬಸ್’​ಗೆ ಒಬ್ಬನೇ ಚಾಲಕ, ಆದರೂ ಜನ ಹತ್ತುತ್ತಿಲ್ಲ..!

ಜೆಡಿಎಸ್​ ಎಂಬ ಬಸ್’​ಗೆ ಚಾಲಕ ಯಾರು ಅನ್ನೋದನ್ನು ಯಾರು ಹೇಳೋದು ಬೇಕಿಲ್ಲ. ಯಾಕಂದ್ರೆ ಮಾಜಿ ಸಿಎಂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗುವುದು ಖಚಿತ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇನ್ನೂ ರಾಜ್ಯಾದ್ಯಂತ ಪಂಚರತ್ನ ಯೋಜನೆಗಳನ್ನು ಹೇಳುತ್ತಾ ಊರೂರು ಸುತ್ತುತ್ತಿರುವ ಕುಮಾರಸ್ವಾಮಿಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಅವಕಾಶ ಮಾಡಿಕೊಟ್ಟರೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ತೇನೆ. ಬಡವರ ಸಮಸ್ಯೆಗೆ ದನಿಯಾಗ್ತೇನೆ. ನನಗೆ ಹಣದ ಮೇಲೆ ವ್ಯಾಮೋಹ ಇಲ್ಲ, ಈ ಜೀವ ಹೋಗುವುದರ ಒಳಗಾಗಿ ಈ ನಾಡಿನ ರೈತರಿಗೆ ಒಂದಿಷ್ಟು ಒಳ್ಳೆ ಕೆಲಸಗಳನ್ನು ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ವ್ಯಕ್ತವಾಗುತ್ತಿರುವ ಜನಬೆಂಬಲ ನೋಡಿದಾಗ ಈ ಬಾರಿ ಜೆಡಿಎಸ್​ ಬಸ್​ ಚಾಲಕನ ಮೇಲೆ ಜನ ಭರವಸೆ ಇಟ್ಟು ಬಸ್​ ಪ್ರಯಾಣ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೂ ಪ್ರಯಾಣಿಕರು ಬಸ್​ ನಿಲ್ದಾಣದ ತನಕ ಬಂದು ಬೇರೆ ಬಸ್​ ಹತ್ತಿದರೂ ಅಚ್ಚರಿಯೇನಿಲ್ಲ. ಕುಮಾರಸ್ವಾಮಿ ಅವರ ಬಸ್​ಒಂದು ಭಾಗಕ್ಕೆ ಸೀಮಿತ ಅನ್ನೋ ಮಾತುಗಳು ಇವೆ. ಆದರೆ ಜನರು ಯಾವ ಬಸ್​ ಹತ್ತಬೇಕು. ಬಸ್​ನ ಚಾಲಕ ಯಾರು..? ಬಸ್​ ನೋಡಿಕೊಂಡು ಬಸ್​ ಹತ್ತಿದರೆ ಮುಂದೆ ಅಪಘಾತ ನಡೆದರೆ ಏನು ಮಾಡಬೇಕು ಅನ್ನೋ ಬಗ್ಗೆಯೂ ಚಿಂತಿಸಿದರೆ ಉತ್ತಮ

Tags: Congress PartyJDS Karnatakaಎಚ್ ಡಿ ಕುಮಾರಸ್ವಾಮಿಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಯಕತ್ವ ಇಲ್ಲದ್ದಕ್ಕೆ ಬಿಜೆಪಿ ಪರದಾಟ..! ಕಾವಿಗೆ ಪಟ್ಟ ಕಟ್ಟುವ ತಯಾರಿ..!

Next Post

mimicry gopi siddu mimicry ಕೆ ಜೆ ಜಾರ್ಜ್ ಎದುರು ಸಿದ್ದರಾಮಯ್ಯನವರ ಮಿಮಿಕ್ರಿ ತುಣುಕು!

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

June 25, 2025

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025
Next Post
mimicry gopi siddu mimicry ಕೆ ಜೆ ಜಾರ್ಜ್ ಎದುರು ಸಿದ್ದರಾಮಯ್ಯನವರ ಮಿಮಿಕ್ರಿ ತುಣುಕು!

mimicry gopi siddu mimicry ಕೆ ಜೆ ಜಾರ್ಜ್ ಎದುರು ಸಿದ್ದರಾಮಯ್ಯನವರ ಮಿಮಿಕ್ರಿ ತುಣುಕು!

Please login to join discussion

Recent News

Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada