• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಅಂದುಕೊಂಡಷ್ಟು ಸೀಟ್ ಗೆಲ್ಲುತ್ತಾ..?

Any Mind by Any Mind
May 7, 2023
in ರಾಜಕೀಯ
0
ರಾಜ್ಯದಲ್ಲಿ ಕಾಂಗ್ರೆಸ್ ಅಂದುಕೊಂಡಷ್ಟು ಸೀಟ್ ಗೆಲ್ಲುತ್ತಾ..?
Share on WhatsAppShare on FacebookShare on Telegram

ರಾಜ್ಯ ರಾಜಕಾರಣದ ಕಾವು ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಚುನಾವಣೆ ದಿನಾಂಕ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ರಾಜ್ಯದ ಜನರ ಮನಸ್ಸು ಯಾವ ಕಡೆಗೆ ವಾಲುತ್ತಿದೆ ಅನ್ನೋ ಪಕ್ಕಾ ಲೆಕ್ಕಾಚಾರ ನಿಮ್ಮ ಮುಂದಿಡುವ ಪ್ರಯತ್ನ ನಮ್ಮದು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ನಮ್ಮ ಪಕ್ಷ ಅಧಿಕಾರ ಹಿಡಿಯುತ್ತದೆ ಎಂದು ಹೇಳಿಕೊಳ್ಳುತ್ತಿದೆ. ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು, ಕರ್ನಾಟಕದ ಜನತೆ ಈಗಾಗಲೇ ಕಾಂಗ್ರೆಸ್ಗೆ ಅಧಿಕಾರ ಕೊಡಲು ತೀರ್ಮಾನ ಮಾಡಿದ್ದಾರೆ. ನಮ್ಮ ಪಕ್ಷದ ಪರವಾಗಿ ಒಲವು ವ್ಯಕ್ತವಾಗ್ತಿದೆ ಎನ್ನುತ್ತಿದ್ದಾರೆ. ಆದರೆ ರಾಜ್ಯದ ಬಹುತೇಕ ಜಿಲ್ಲೆಗಳ ಸ್ಥಿತಿಗತಿಗಳನ್ನು ನೋಡಿದಾಗ ಸಂಪೂರ್ಣವಾಗಿ ಹೌದು ಎನ್ನುವುದಕ್ಕೆ ಸಾಧ್ಯವಿಲ್ಲ. ಕಾಂಗ್ರೆಸ್ ಹಾಗು ಬಿಜೆಪಿ ಸಮಬಲದ ಪೈಪೋಟಿ ನಡೆಸುತ್ತಿದ್ದು, ಜೆಡಿಎಸ್ ಈ ಭಾರೀ ಮತಗಳಿಕೆ ಪ್ರಮಾಣವನ್ನು ಗಣನೀಯವಾಗಿ ಏರಿಸಿಕೊಳ್ಳುವ ಮುನ್ಸೂಚನೆ ಸಿಗುತ್ತಿದೆ. ಪ್ರಾಂತ್ಯವಾರು ಪಕ್ಷಗಳ ಸದ್ಯದ ಪೈಪೋಟಿ ನೋಡುವುದಾದ್ರೆ..

ADVERTISEMENT

ಹಳೇ ಮೈಸೂರಲ್ಲಿ ನಿಯಂತ್ರಣಕ್ಕೆ ಸಿಗದ ಜೆಡಿಎಸ್..!

ಹಳೇ ಮೈಸೂರು ಭಾಗದ ಜನರ ಲೆಕ್ಕಾಚಾರವೇ ಬೇರೆ, ಈ ಬಾರಿ ಜೆಡಿಎಸ್ ಭದ್ರಕೋಟೆ ಆಗಿರುವ ಹಳೇ ಮೈಸೂರು ಭಾಗದ ಮೇಲೆ ರಾಜಕೀಯ ದಾಳಿ ಮಾಡಲು ಕಾಂಗ್ರೆಸ್ ಬಿಜೆಪಿ ಹವಣಿಸಿದ್ದವು. ಆದರೆ ಕೆಲವು ಕ್ಷೇತ್ರಗಳು ಕಾಂಗ್ರೆಸ್ಗೆ ದಕ್ಕಿದರೂ ಬಿಜೆಪಿಗೆ ನೆಲೆ ಕಂಡುಕೊಳ್ಳುವುದಕ್ಕೆ ಮಾತ್ರ ಸಾಧ್ಯವಾಗ್ತಿದೆ. ಗೆಲುವು ಅನ್ನೋದು ಸದ್ಯಕ್ಕೆ ಸಿಗದ ಫಲ. ಇನ್ನು ಜೆಡಿಎಸ್ ಕಳೆದ ಬಾರಿಯಷ್ಟು ಸ್ಥಾನಗಳನ್ನು ಗೆಲ್ಲದಿದ್ದರೂ ಅತಂತ್ರ ವಿಧಾನಸಭೆ ಬರುವ ಮುನ್ಸೂಚನೆ ಸಿಗುತ್ತಿರುವ ಕಾರಣ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿ ಎನ್ನುವ ಕೂಗು ಎದ್ದಿದೆ. ಸರ್ವೇಗಳಲ್ಲಿ ಬರುತ್ತಿರೋ ಮಾಹಿತಿ ಸುಳ್ಳು ಅನ್ನೋದನ್ನು ಜೆಡಿಎಸ್ ಪ್ರಬಲವಾಗಿ ಜನರ ಮನಸ್ಸಿಗೆ ಮುಟ್ಟುವಂತೆ ರವಾನೆ ಮಾಡಿದೆ. ಅತಂತ್ರ ಸ್ಥಿತಿಯಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವ ಪ್ರಶ್ನೆಗೆ ರಾಜ್ಯಾದ್ಯಂತ ಕುಮಾರಸ್ವಾಮಿ ಅನ್ನೋ ಮಾತೇ ಫೈನಲ್ ಆಗ್ತಿದೆ. ಹೀಗಿರುವಾಗ ಒಕ್ಕಲಿಗರು ಜೆಡಿಎಸ್ ಕಡೆಗೆ ವಾಲುವ ಸಾಧ್ಯತೆ ಹೆಚ್ಚಾಗಿ ಕಾಣಿಸುತ್ತಿದೆ.

ಒಟ್ಟು ಸ್ಥಾನ: 57

ಬಿಜೆಪಿ 10
ಕಾಂಗ್ರೆಸ್ 22
ಜೆಡಿಎಸ್ 25

ಕರಾವಳಿ ಕರ್ನಾಟಕದಲ್ಲಿ ಮತ್ತೆ ನೆಲಕಚ್ಚುವ ಕಾಂಗ್ರೆಸ್..!

ಕರಾವಳಿ ಕಳೆದ 2 ಲೋಕಸಭಾ ಚುನಾವಣೆ ಬಳಿಕ ಕಲಮ ಪಾಳಯದ ಕಡೆಗೆ ಕರಾವಳಿ ಜನತೆ ಮುಖ ಮಾಡಿದ್ದಾರೆ. ಈ ಬಾರಿ ಕರಾವಳಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಕೇಸರಿ ಪಾಳಯ ಉರುಳಿಸಿದ ಹೊಸ ಅಭ್ಯರ್ಥಿಗಳ ದಾಳ ಬಿಜೆಪಿಗೆ ಮತ್ತೆ ಕೈ ಹಿಡಿಯುವ ಸಾಧ್ಯತೆ ಹೆಚ್ಚಾಗಿದೆ. ಜೆಡಿಎಸ್ ಹೇಳಿಕೊಳ್ಳುವ ಮಟ್ಟದಲ್ಲಿ ಮತಗಳನ್ನು ಸೆಳೆಯುವ ಶಕ್ತಿ ಇಲ್ಲದ ಕಾರಣಕ್ಕೆ ಜೆಡಿಎಸ್ ಕರಾವಳಿಯಲ್ಲಿ ಕರಾಮತ್ತು ತೋರಿಸುವ ಸಾಧ್ಯತೆ ಕಡಿಮೆ ಇದೆ. ಕೇಸರಿ ಅಲೆ ವಿರುದ್ಧ ಕಾಂಗ್ರೆಸ್ ಗ್ಯಾರಂಟಿ ಕಳೆದು ಹೋಗಿದ್ದು ಬಿಜೆಪಿ ಅಭ್ಯರ್ಥಿಗಳು ಗೆದ್ದು ಬೀಗುವ ಸಾಧ್ಯತೆ ಇದೆ. ಅಷ್ಟು ಮಾತ್ರವಲ್ಲದೆ ಇತ್ತೀಚಿಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗ ದಳ ನಿಷೇಧ ವಿಚಾರ ಕರಾವಳಿಯಲ್ಲಿ ಕಿಚ್ಚು ಹೊತ್ತಿಸಿದ್ದು, ಕಾಂಗ್ರೆಸ್ ಗೆಲುವನ್ನೇ ತಡೆಯುವ ಸಾಧ್ಯತೆಯೂ ದಟ್ಟವಾಗಿದೆ.

ಒಟ್ಟು ಸ್ಥಾನ: 19

ಬಿಜೆಪಿ – 15
ಕಾಂಗ್ರೆಸ್ – 03
ಜೆಡಿಎಸ್ – 01

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲೂ ಮೋದಿ ಅಬ್ಬರ..!

ಕಲ್ಯಾಣ ಕರ್ನಾಟಕ ಹಾಗು ಕಿತ್ತೂರು ಕರ್ನಾಟಕ ಕಾಂಗ್ರೆಸ್​ ಪಾಲಿಗೆ ಸಾಕಷ್ಟು ಲಾಭ ತಂದುಕೊಡುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಕಳೆದ ಬಾರಿ ಬಿಜೆಪಿ 30 ಸ್ಥಾನಗಳಲ್ಲಿ ಗೆಲುವು ಕಂಡರೆ, ಕಾಂಗ್ರೆಸ್​ 17 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಸ್ವಲ್ಪ ಸ್ಥಾನ ಕಳೆದುಕೊಳ್ಳುವ ಬಗ್ಗೆ ಸಮೀಕ್ಷೆಗಳಲ್ಲಿ ಕಾಣಿಸಿದರೂ ಕಾಂಗ್ರೆಸ್​ ಅಂದುಕೊಂಡಷ್ಟು ಸ್ಥಾನಗಳು ಬರುವುದಿಲ್ಲ ಎನಿಸುತ್ತಿದೆ. ಇನ್ನು ಕಲ್ಯಾಣ ಕರ್ನಾಟಕದಲ್ಲೂ ಕಳೆದ ಬಾರಿ ಕಾಂಗ್ರಸ್​ 15 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ ಕೇವಲ 12 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಜೆಡಿಎಸ್​ 4 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು. ಈ ಬಾರಿಯೂ ಕೂಡ ಕಾಂಗ್ರೆಸ್​ ಬಿಜೆಪಿ ಅದೇ ಮಟ್ಟದಲ್ಲಿ ಗೆಲುವು ಕಾಣಲಿದ್ದು, ಬಿಜೆಪಿಗೆ ಹಿನ್ನಡೆ ಆಗುವುದಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಕಿತ್ತೂರು – 50

ಬಿಜೆಪಿ – 21
ಕಾಂಗ್ರೆಸ್​ – 27
ಜೆಡಿಎಸ್​ – 01
ಇತರೆ – 01

ಕಲ್ಯಾಣ ಕರ್ನಾಟಕ – 31

ಬಿಜೆಪಿ – 08
ಕಾಂಗ್ರೆಸ್​ – 20
ಜೆಡಿಎಸ್​ – 03
ಇತರೆ – 00

ಬೆಂಗಳೂರು ಮಲೆನಾಡಲ್ಲಿ ಕಾಂಗ್ರೆಸ್​ಗೆ ಲಾಭ ಅಸಾಧ್ಯ..!

ಮಲೆನಾಡು ಹಾಗು ಬೆಂಗಳೂರು ಭಾಗದಲ್ಲಿ ಈ ಬಾರಿ ಕಾಂಗ್ರೆಸ್​ಗೆ ಲಾಭ ತಂದುಕೊಡುವ ಯಾವುದೇ ಅಂಶಗಳು ಕಾಣಿಸುತ್ತಿಲ್ಲ. ಬಿಜೆಪಿ ಕೂಡ ಕಾಂಗ್ರೆಸ್​ ಜೊತೆಗೆ ತೀವ್ರ ಪೈಪೋಟಿ ನೀಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಂಚಾರ ಮಾಡುತ್ತಿರುವುದು ಬಿಜೆಪಿಗೆ ಮೇಲುಗೈ ತಂದುಕೊಟ್ಟರೂ ಅಚ್ಚರಿಯಿಲ್ಲ. ಸದ್ಯಕ್ಕೆ ಬರ್ತಿರೋ ಸಮೀಕ್ಷೆಗಳು ಜನರ ಒಂದಿಷ್ಟು ಮನಸನ್ನು ಬಿಜೆಪಿ ಸೆಳೆಯುವುದರಲ್ಲಿ ಸಂಶಯವಿಲ್ಲ. ಬಿಜೆಪಿ ಕಾಂಗ್ರೆಸ್​ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಏರ್ಪಟ್ಟಿದ್ದು, ಅಧಿಕಾರದ ಸನಿಹಕ್ಕೆ ಯಾರು ಬರಬಹುದು ಅನ್ನೋದನ್ನು ರಾಜ್ಯ ಜನರು ಬಿಡಿಸಿ ಹೇಳಲಿದ್ದಾರೆ.

Tags: BJPElectionpre-election surveyState Assembly Election 2023ಕಾಂಗ್ರೆಸ್​ಚುನಾವಣಾ ಪೂರ್ವ ಸಮೀಕ್ಷೆಚುನಾವಣೆಬಿಜೆಪಿರಾಜ್ಯ ವಿಧಾನಸಭಾ ಚುನಾವಣೆ 2023
Previous Post

ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಅನ್ನೋದು ಕನಸು: ವಿ.ಸೋಮಣ್ಣ

Next Post

ರೋಡ್‌ ಶೋ ವೇಳೆ ಶಂಕರ್‌ ನಾಗ್‌ ಪ್ರತಿಮೆಗೆ ನರೇಂದ್ರ ಮೋದಿ ಪುಷ್ಪಾರ್ಚನೆ..!

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

November 19, 2025
Next Post
ರೋಡ್‌ ಶೋ ವೇಳೆ ಶಂಕರ್‌ ನಾಗ್‌ ಪ್ರತಿಮೆಗೆ ನರೇಂದ್ರ ಮೋದಿ ಪುಷ್ಪಾರ್ಚನೆ..!

ರೋಡ್‌ ಶೋ ವೇಳೆ ಶಂಕರ್‌ ನಾಗ್‌ ಪ್ರತಿಮೆಗೆ ನರೇಂದ್ರ ಮೋದಿ ಪುಷ್ಪಾರ್ಚನೆ..!

Please login to join discussion

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada