ಇವತ್ತು ಮೈಸೂರಿನಲ್ಲಿ ರಾಜಕೀಯ ವಾಗ್ಯುದ್ಧ ಹೆಚ್ಚಾಗಿತ್ತು ಒಂದು ಕಡೆ ಕೆ ಆರ್ ಆಸ್ಪತ್ರೆಯಲ್ಲಿ ಎಂಆರ್ಐ ಮಷೀನ್ ಕುರಿತು ಮಾತನಾಡುತ್ತಿದ್ದ ಸಂಸದ ಪ್ರತಾಪ್ ಸಿಂಹ ರಾಜ್ಯದಲ್ಲಿರುವ ಆಡಳಿತರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರವನ್ನ ನಡೆಸಿದ್ದರು. ಇದೀಗ ಅವರ ವಿರುದ್ಧ ಒಂದು ಕಡೆ ಸಾರ್ವಜನಿಕರು ಮತ್ತೊಂದು ಕಡೆ ಕಾಂಗ್ರೆಸ್ ನಾಯಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ

ಇಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುವುದಕ್ಕೆ ಪ್ರಮುಖವಾದ ಕಾರಣ ಅಂದ್ರೆ ಬೆಂಗಳೂರು ಮೈಸೂರು ದಶಕಥ ಹೆದ್ದಾರಿಯ ಟೋಲ್ ಸಂಗ್ರಹ ಹೆಚ್ಚು ಮಾಡಿರುವುದನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ ಇದು ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವವರ ಆಕ್ರೋಶಕ್ಕೆ ಕಾರಣವಾಗಿದ್ದು ಸಂಸದ ಮಹಾಶಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ
ಇನ್ನು ಮೈಸೂರಿನ ರಾಜಕೀಯದಲ್ಲಿ ಸಂಸದ ಪ್ರತಾಪ್ ಸಿಂಹ ಬಾಯಿಬಿಟ್ಟರೆ ಬರಿ ವಿವಾದಗಳು ಎಂಬ ಮಾತಿವೆ. ಅದರಂತೆ ಇಂದು ಕೂಡ ಅವರ ಕೆಲವೊಂದು ಮಾತುಗಳು ಕಾಂಗ್ರೆಸ್ ನಾಯಕರ ಟೀಕಾ ಪ್ರಹಾರಕ್ಕೆ ಶಕ್ತಿಯನ್ನು ತುಂಬಿವೆ, ಅದರಲ್ಲೂ ಇವತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ ಮಹದೇವಪ್ಪ ಸಂಸದ ಪ್ರತಾಪ್ ಸಿಂಹ ವಿರುದ್ಧ ವ್ಯಾಪಕವಾದ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ

ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ ಎಂದು ಪ್ರತಾಪ್ ಸಿಂಹ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ಬಗ್ಗೆ ತನಿಖೆ ಆಗಲ್ಲ ಎಂದಿದ್ದ ಪ್ರತಾಪ್ ಸಿಂಹಗೆ, 40% ಕಮಿಷನ್ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಕೈಗೊಳ್ಳಲಿದೆ. ಎಲ್ಲಿ ದುರ್ಬಳಕೆ, ಕಾನೂನು ಉಲ್ಲಂಘನೆ ಆಗಿದೆ ಎಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ಎಂದು ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ
ಸದ್ಯದ ಮಟ್ಟಿಗೆ ಇವತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಹರಿಹಾಯ್ದಿದ್ದು, ಅವರ ಹೇಳಿಕೆಗಳು ಹಳೆ ಮೈಸೂರು ಭಾಗದ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ