ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧಕ್ಕೆ ತಕ್ಷಣವೇ ವಿರಾಮ ಘೋಷಿಸಬೇಕೆಂದು ಕರೆ ನೀಡುವ ಸಂಬಂಧ ವಿಶ್ವಸಂಸ್ಥೆಯಲ್ಲಿ ಜೋರ್ಡಾನ್ ಮಂಡಿಸಿದ್ದ ನಿರ್ಣಯದ ಕುರಿತ ಮತದಾನದಿಂದ ಭಾರತ ದೂರ ಉಳಿದಿದ್ದು, ಈ ನಿರ್ಧಾರದ ವಿರುದ್ಧ ವಿಪಕ್ಷಗಳು ಟೀಕಾ ಪ್ರಕಾರ ನಡೆಸಿವೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದ ನಿರ್ಣಯವನ್ನು 120 ದೇಶಗಳ ಸಹಮತಿಯ ಮೂಲಕ ಅಂಗೀಕರಿಸಲಾಯಿತು. ಆದರೆ, 14 ದೇಶಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿದರೆ, ಭಾರತ ಸೇರಿದಂತೆ 45 ರಾಷ್ಟ್ರಗಳು ಮತದಾನದಿಂದ ದೂರ ಉಳಿದವು.
ಮತದಾನ ಕುರಿತು ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತನಿಧಿ ಯೋಜನಾ ಪಟೇಲ್ ಅವರು, ಭಯೋತ್ಪಾದನೆ ಎಂಬುದು ಮಾರಣಾಂತಿಕವಾಗಿದ್ದು, ಅದಕ್ಕೆ ಯಾವುದೇ ಎಲ್ಲೆ ಇರುವುದಿಲ್ಲ. ನಾವು ಮಾನವೀಯ ನೆರವು ಕೊಡಬಹುದೆಂಬುದನ್ನು ಒಪ್ಪಬಹುದಾದರೂ ನಾವು ಭಯೋತ್ಪಾದನೆಯಲ್ಲಿ ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದೇವೆ ಎಂಬ ಅಂಶವನ್ನು ನಿರ್ಣಯದಲ್ಲಿ ಸೇರಿಸಿದ ಕಾರಣ ಮತದಾನದಿಂದ ದೂರವುಳಿಯುತ್ತಿದ್ದೇವೆಂದು ಹೇಳಿದರು.