• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೇಲ್–ಇರಾನ್ ಸಂಘರ್ಷ : ಸುದ್ದಿ ಚಾನೆಲ್‌ಗಳ ಟಿಆರ್‌ಪಿ ಪ್ರಕಟಣೆ ಸ್ಥಗಿತ

ಪ್ರತಿಧ್ವನಿ by ಪ್ರತಿಧ್ವನಿ
March 7, 2026
in Top Story
0
ಇಸ್ರೇಲ್–ಇರಾನ್ ಸಂಘರ್ಷ : ಸುದ್ದಿ ಚಾನೆಲ್‌ಗಳ ಟಿಆರ್‌ಪಿ ಪ್ರಕಟಣೆ ಸ್ಥಗಿತ
Share on WhatsAppShare on FacebookShare on Telegram

ಇಸ್ರೇಲ್–ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ವರದಿ ಮಾಡುವಲ್ಲಿ ಕೆಲವು ಸುದ್ದಿ ವಾಹಿನಿಗಳ ನಡೆ ಕುರಿತು ಆತಂಕ ವ್ಯಕ್ತಪಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B), ಸುದ್ದಿ ಟಿವಿ ಚಾನೆಲ್‌ಗಳ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳ (TRP) ಪ್ರಕಟಣೆಯನ್ನು ನಾಲ್ಕು ವಾರಗಳ ಕಾಲ ಸ್ಥಗಿತಗೊಳಿಸಲು ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC) ಗೆ ನಿರ್ದೇಶನ ನೀಡಿದೆ.

ADVERTISEMENT

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವುದಾಗಿ ಸಚಿವಾಲಯ ತಿಳಿಸಿದ್ದು, ನಾಲ್ಕು ವಾರಗಳವರೆಗೆ ಅಥವಾ ಮುಂದಿನ ನಿರ್ದೇಶನಗಳು ಹೊರಬರುವವರೆಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.

ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಸಚಿವಾಲಯ, “ಕೆಲವು ಸುದ್ದಿ ಟಿವಿ ವಾಹಿನಿಗಳು ಅನಗತ್ಯ ಸಂಚಲನ ಮೂಡಿಸುವ ಮತ್ತು ಊಹಾತ್ಮಕ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಸಾರ್ವಜನಿಕರಲ್ಲಿ, ವಿಶೇಷವಾಗಿ ಸಂಘರ್ಷ ಪ್ರದೇಶಗಳಲ್ಲಿ ಇರುವ ಕುಟುಂಬಸ್ಥರು ಅಥವಾ ಪರಿಚಯಸ್ಥರಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದೆ” ಎಂದು ತಿಳಿಸಿದೆ.

Social Media Ban For Children : ಸೋಷಿಯಲ್​ ಮೀಡಿಯಾನ ಹೇಗೆ ಬಳಸ್ಕೊಳ್ಬೇಕು ಅಂತ ಬುದ್ಧಿ ಇರ್ಬೇಕು #pratidhvani

ಆದರೆ ಯಾವ ವಾಹಿನಿಗಳು ಈ ರೀತಿಯ ವರದಿ ಮಾಡಿವೆ ಎಂಬುದನ್ನು ಸಚಿವಾಲಯ ಸ್ಪಷ್ಟವಾಗಿ ತಿಳಿಸಿದೆ. “ಸಾರ್ವಜನಿಕ ಹಿತದೃಷ್ಟಿಯಿಂದ” ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು,

ಈ ಕ್ರಮ ಕೈಗೊಳ್ಳಲು ಸರ್ಕಾರವು 2014 ಜನವರಿ 16ರಂದು ಜಾರಿಯಾದ ಟಿವಿ ರೇಟಿಂಗ್ ಏಜೆನ್ಸಿಗಳ ನೀತಿ ಮಾರ್ಗಸೂಚಿಗಳ ಕ್ಲಾಸ್ 24.2 ಅನ್ನು ಉಲ್ಲೇಖಿಸಿದೆ. ಅದರ ಪ್ರಕಾರ, BARC ಸಂಸ್ಥೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕಾಲಕಾಲಕ್ಕೆ ನೀಡುವ ಆದೇಶಗಳು ಹಾಗೂ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿದೆ.

Social Media Ban  : ಸರ್‌.. ಸೋಷಿಯಲ್‌ ಮೀಡಿಯಾದಿಂದ ಚಿಕ್ಕ ಚಿಕ್ಕ ಮಕ್ಕಳು ಹಾಳಾಗ್ತಿದ್ದಾವೆ ಬ್ಯಾನ್‌ ಮಾಡಿ..

ಟಿಆರ್‌ಪಿ ಅಂದರೆ ದೂರದರ್ಶನ ವಾಹಿನಿಗಳ ವೀಕ್ಷಕರ ಸಂಖ್ಯೆಯನ್ನು ಅಳೆಯುವ ಪ್ರಮುಖ ಮಾನದಂಡವಾಗಿದ್ದು, ಜಾಹೀರಾತು ದರಗಳನ್ನು ನಿರ್ಧರಿಸಲು ಪ್ರಸಾರ ಸಂಸ್ಥೆಗಳು ಮತ್ತು ಜಾಹೀರಾತುದಾರರು ಇದನ್ನು ಬಳಸುತ್ತಾರೆ. ಟಿಆರ್‌ಪಿ ಪ್ರಕಟಣೆ ಸ್ಥಗಿತಗೊಳ್ಳುವುದರಿಂದ ಸುದ್ದಿ ವಾಹಿನಿಗಳ ವ್ಯಾಪಾರಿಕ ಸ್ಥಾನಮಾನಕ್ಕೂ ಪರಿಣಾಮ ಬೀಳುತ್ತದೆ.

ಇದಕ್ಕೂ ಮೊದಲು 2020ರಲ್ಲಿ ಟಿಆರ್‌ಪಿ ಅಂಕಿಅಂಶಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆ ಮುಂಬೈ ಪೊಲೀಸ್ ತನಿಖೆ ನಡೆದಾಗ ಕೂಡ ಕೇಂದ್ರ ಸರ್ಕಾರ ಕೆಲವು ವಾರಗಳ ಕಾಲ ಸುದ್ದಿ ವಾಹಿನಿಗಳ ಟಿಆರ್‌ಪಿ ಪ್ರಕಟಣೆಯನ್ನು ಸ್ಥಗಿತಗೊಳಿಸಿತ್ತು.

 

2010ರಲ್ಲಿ ಪ್ರಸಾರೋದ್ಯಮದ ಆಶ್ರಯದಲ್ಲಿ ಸ್ಥಾಪಿತವಾದ BARC ಭಾರತದಲ್ಲಿ ಟಿವಿ ವೀಕ್ಷಕರ ಮಾಹಿತಿಯನ್ನು ಅಳೆಯಲು ಮತ್ತು ಪ್ರಕಟಿಸಲು ಅಧಿಕೃತ ಸಂಸ್ಥೆಯಾಗಿದೆ. ಇದರ ಅಂಕಿಅಂಶಗಳು ಬಹು ಕೋಟಿ ರೂ.ಗಳ ಜಾಹೀರಾತು ಒಪ್ಪಂದಗಳಿಗೆ ಆಧಾರವಾಗಿರುವುದರಿಂದ ಈ ಸ್ಥಗಿತ ಕ್ರಮ ಪ್ರಸಾರ ಕ್ಷೇತ್ರದಲ್ಲಿ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.ಇಸ್ರೇಲ್ ಮತ್ತು ಇರಾನ್ ನಡುವಿನ ಪರಸ್ಪರ ದಾಳಿಗಳ ಬಳಿಕ ಸಂಘರ್ಷ ತೀವ್ರಗೊಂಡಿದ್ದು, ಈ ಘಟನೆಗಳ ವರದಿಗೆ ಭಾರತೀಯ ಸುದ್ದಿ ವಾಹಿನಿಗಳು ಹೆಚ್ಚಿನ ಸಮಯ ಮೀಸಲಿಡುತ್ತಿವೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Israel-Iran conflictNews ChannelspratidavaniTRP
Previous Post

ಗ್ರಾಮೀಣ ಮಕ್ಕಳ ಕ್ರೀಡಾ ಪ್ರೋತ್ಸಾಹಕ್ಕೆ ಕ್ರೀಡಾಂಗಣ ನಿರ್ಮಾಣ : ಕುಮಾರಸ್ವಾಮಿ ಘೋಷಣೆ

Next Post

ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?

ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada