• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಚಂದ್ರನ ಮೇಲೆ ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌

Any Mind by Any Mind
September 21, 2023
in ಇದೀಗ, ದೇಶ
0
ಚಂದ್ರನ ಮೇಲೆ  ಮತ್ತೆ ಬೆಳಗಾಯಿತು; ನಿದ್ರೆಯಿಂದ ಏಳುವುದೇ ಲ್ಯಾಂಡರ್‌, ರೋವರ್?‌
Share on WhatsAppShare on FacebookShare on Telegram

ಹೊಸದಿಲ್ಲಿ: ಚಂದ್ರನ ಮೇಲೆ ರಾತ್ರಿ (moon night) ಮುಗಿದು (ಭೂಮಿಯ ಹದಿನಾಲ್ಕು ದಿನ, ಚಂದ್ರನ ಒಂದು ದಿನಕ್ಕೆ ಸಮ) ಬುಧವಾರ ಮುಂಜಾನೆಯಾಗಿದೆ. ಸೂರ್ಯನ ಬೆಳಕಿನ ಅನುಪಸ್ಥಿತಿಯಲ್ಲಿ ಕಾರ್ಯಾಚರಣೆ ನಿಲ್ಲಿಸಿದ್ದ ಇಸ್ರೋದ (ISRO) ಚಂದ್ರಯಾನ- 3 (Chandrayaan 3) ಮಿಷನ್‌ನ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್‌ಗಳು ಮತ್ತೆ ಕಾರ್ಯಾರಂಭಿಸಲಿವೆಯೇ ಎಂಬ ಕುತೂಹಲ ಎದುರಾಗಿದೆ.

ADVERTISEMENT

ಚಂದ್ರನ ಮೇಲೆ ಈಗ ಅತ್ಯಂತ ಶೀತ ವಾತಾವರಣವಿದ್ದು, ಇವುಗಳನ್ನು ನಿದ್ರೆಯಿಂದ ಎಚ್ಚರಗೊಳಿಸಲು ಇಸ್ರೋ ಪ್ರಯತ್ನಿಸುತ್ತಿವೆ. ಗುರುವಾರ ಅಥವಾ ಶುಕ್ರವಾರ ಹೆಚ್ಚಿನ ಬಿಸಿಲು ಲಭ್ಯವಾಗಬಹುದು. ನಂತರ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್‌ಗಳಲ್ಲಿರುವ ಆನ್‌ಬೋರ್ಡ್ ಉಪಕರಣಗಳು ಸೋಲಾರ್‌ ಶಕ್ತಿಯಿಂದ ಪುನರುಜ್ಜೀವನಗೊಳ್ಳಬಹುದು ಎಂಬ ನಿರೀಕ್ಷೆಯಿದೆ ಎಂದು ಇಸ್ರೋ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲ್ಯಾಂಡರ್‌ ಹಾಗೂ ರೋವರ್‌ಗಳು ಮರಳಿ ಕೆಲಸ ಮಾಡುವ ಸ್ಥಿತಿಗೆ ಬರುವ ಸಾಧ್ಯತೆಗಳು ತುಂಬಾ ಹೆಚ್ಚೇನೂ ಇಲ್ಲ. ಆದರೆ ಹತಾಶ ಪರಿಸ್ಥಿತಿಯೂ ಇಲ್ಲ. ಲ್ಯಾಂಡರ್ ಅಥವಾ ರೋವರ್ ಮಾಡ್ಯೂಲ್ ಎಚ್ಚರಗೊಳ್ಳುವ ಸಾಧ್ಯತೆಯಿದೆ. ಆದರೆ ಮೊದಲ ʼದಿನʼದಂತೆ ಸಂಪೂರ್ಣ ಶಕ್ತಿಯಿಂದ ಕ್ರಿಯಾಶೀಲವಾಗಲು ಸಾಧ್ಯವಿಲ್ಲ ಎಂದು ಇಸ್ರೋ ಹೇಳಿದೆ.

ಸೌರಶಕ್ತಿ ಚಾಲಿತ ಚಂದ್ರಯಾನ- 3 ಮಾಡ್ಯೂಲ್‌ಗಳು ಕೇವಲ ಒಂದು ಚಂದ್ರನ ದಿನದ ಮಿಷನ್ ಜೀವನಾವಧಿಯನ್ನು ಹೊಂದಿವೆ. ಇದು ಭೂಮಿಯ ಮೇಲೆ ಸುಮಾರು 14 ದಿನಗಳಿಗೆ ಸಮ. ಚಂದ್ರಯಾನ- 3 ಬಂದಿಳಿದ ದಕ್ಷಿಣ ಧ್ರುವದ ಬಳಿ ರಾತ್ರಿಯ ತಾಪಮಾನ ಅತ್ಯಂತ ಶೀತಮಯವಾಗಿದ್ದು, -200 ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಗಿಳಿದಿದೆ. ಇದನ್ನು ತಡೆದುಕೊಳ್ಳಲು ಈ ಮಾಡ್ಯೂಲ್‌ಗಳಲ್ಲಿರುವ ಎಲೆಕ್ಟ್ರಾನಿಕ್‌ ಸಾಧನಗಳಿಗೆ ಸಾಧ್ಯವಿಲ್ಲ. ಚಂದ್ರನ ಮೇಲೆ ರಾತ್ರಿಯೂ ಕಾರ್ಯಾಚರಿಸುವಂತೆ ವಿನ್ಯಾಸಗೊಳಿಸಲಾಗಿರುವ ಕೆಲವು ಬಾಹ್ಯಾಕಾಶ ನೌಕೆಗಳಲ್ಲಿ ಆನ್‌ಬೋರ್ಡ್ ಸಾಧನಗಳು ಈ ತಾಪಮಾನ ತಡೆಯಲು ಸಾಧ್ಯವಾಗುವಂತಿದೆ. ಚಂದ್ರನ ಮೇಲೆ ಇಳಿಯಲು ವಿಫಲವಾದ ರಷ್ಯಾದ ಲೂನಾ -25ರಲ್ಲಿ ಅಂತಹ ವ್ಯವಸ್ಥೆಯಿತ್ತು. ಆದರೆ ಚಂದ್ರಯಾನ-3ಯ ವಿನ್ಯಾಸ ಕೇವಲ ಒಂದು ದಿನಕ್ಕೆ ಮಾತ್ರವಿತ್ತು.

ಆದರೂ, ಚಂದ್ರಯಾನ-3ರ ಮುಖ್ಯ ವೈಜ್ಞಾನಿಕ ಪ್ರಯೋಗದ ಉದ್ದೇಶಗಳು ಮುಗಿದ ನಂತರ, ಇಸ್ರೋ ಒಂದು ಚಾನ್ಸ್‌ ತೆಗೆದುಕೊಳ್ಳಲು ನಿರ್ಧರಿಸಿತು. ಲ್ಯಾಂಡರ್ ಮತ್ತು ರೋವರ್‌ನ ಜೀವಿತಾವಧಿಯನ್ನು ವಿಸ್ತರಿಸಲು ಪ್ರಯತ್ನಿಸಿತು. ಹೀಗಾಗಿ ಸೂರ್ಯಾಸ್ತಕ್ಕಿಂತ ಸ್ವಲ್ಪ ಮುಂಚಿತವಾಗಿ ಎಲ್ಲಾ ಉಪಕರಣಗಳ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿತು ಮತ್ತು ಅವುಗಳನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಿತು. ಆ ಹೊತ್ತಿಗೆ ಸಂಪೂರ್ಣವಾಗಿ ಚಾರ್ಜ್ ಆಗಿದ್ದ ಬ್ಯಾಟರಿಗಳು ರಾತ್ರಿಯಲ್ಲಿ ಸುಸ್ಥಿತಿಯಲ್ಲಿ ಉಳಿಯಲು ಬೇಕಾದಷ್ಟು ಶಕ್ತಿಯನ್ನು ಸಂಗ್ರಹಿಸಿದ್ದು, ಸಾಕಷ್ಟು ಬೆಚ್ಚಗಾಗಿರಲಿವೆ ಎಂದು ಆಶಿಸಲಾಗಿದೆ.

ಇಸ್ರೋದ ಈ ಪ್ರಯೋಗ ಸಫಲಗೊಂಡರೆ, ಲ್ಯಾಂಡರ್ ಮತ್ತು ರೋವರ್ ಮತ್ತೆ ಕನಿಷ್ಠ 14 ಭೂಮಿಯ ದಿನಗಳವರೆಗೆ ಕಾರ್ಯನಿರ್ವಹಿಸಲಿವೆ. ಅವು ಈಗಾಗಲೇ ಇಲ್ಲಿಗೆ ಕಳುಹಿಸಿರುವ ವೈಜ್ಞಾನಿಕ ಡೇಟಾ ಮತ್ತು ಅವಲೋಕನಗಳನ್ನು ಪುಷ್ಟೀಕರಿಸಬಹುದು. ಈಗಾಗಲೇ, ಚಂದ್ರಯಾನ-3 ಚಂದ್ರನ ಪರಿಸರಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ಡೇಟಾಗಳನ್ನು ಸಂಗ್ರಹಿಸಿದೆ.

Tags: Chandrayaan 3IndiaISROPragyan RovarVikram Lander
Previous Post

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಸುಪ್ರೀಂ ಕೋರ್ಟ್ ಗೆ ತುರ್ತಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹ: ಹೆಚ್‌ ಡಿ ಕುಮಾರಸ್ವಾಮಿ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
Next Post
ಸುಪ್ರೀಂ ಕೋರ್ಟ್ ಗೆ ತುರ್ತಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹ: ಹೆಚ್‌ ಡಿ ಕುಮಾರಸ್ವಾಮಿ

ಸುಪ್ರೀಂ ಕೋರ್ಟ್ ಗೆ ತುರ್ತಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹ: ಹೆಚ್‌ ಡಿ ಕುಮಾರಸ್ವಾಮಿ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada