ಬೆಂಗಳೂರು ಹಾಗೂ ಮೈಸೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು 15 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿಗೆ ಒಳಗಾದವರು ಫೈನಾನ್ಶಿಯರ್ಗಳು ಎನ್ನಲಾಗಿದ್ದು ಇವರೆಲ್ಲ ಚುನಾವಣಾ ಅಭ್ಯರ್ಥಿಗಳಿಗೆ ಹಣಕಾಸಿನ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ.


ಬೆಂಗಳೂರು ಹಾಗೂ ಮೈಸೂರಿನ ವಿವಿಧ ಭಾಗಗಳಲ್ಲಿ ಸುಮಾರು 15 ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಉದ್ಯಮಿ ಸುನೀಲ್ ರಾಧಾಕೃಷ್ಣ ಕಾರ್ಲೋ ನಿವಾಸ ಹಾಗೂ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಂಜಯ ನಗರ, ಜೆಪಿ ನಗರ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಲಾಗಿದೆ. ಇವರು ಚುನಾವಣಾ ಅಭ್ಯರ್ಥಿಗಳಿಗೆ ಹಣ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.


15 ಕೋಟಿ ರೂಪಾಯಿ ಹಣದ ಜೊತೆಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, RMV ಬಡಾವಣೆ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.