• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾವು 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು:ಗೃಹ ಸಚಿವ ಡಾ. ಜಿ.ಪರಮೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ADVERTISEMENT

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ. ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದ ಆಧಾರದ ಮೇಲೆ ನಾವು 40 ಪರ್ಸೆಂಟ್ ಆರೋಪ ಮಾಡಿದ್ದೇವೆ.

ನೋಂದಾಯಿತ ಸಂಘವು ಅಧಿಕೃತವಾಗಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಾಗ ನಾವು ಕೂಡ ಪಕ್ಷವಾಗಿ ಜನರ ಹಿತ ದೃಷ್ಟಿಯಿಂದ ಪ್ರಶ್ನೆ ಮಾಡಿದ್ದೇವೆ. ಯಾವ ಆಧಾರದ ಮೇಲೆ 40 ಪರ್ಸೆಂಟ್ ನಡೆದಿಲ್ಲ ಎನ್ನುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿದ್ದೇವೆ. ಬರೀ 40 ಪರ್ಸೆಂಟ್ ಆರೋಪದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದರು.

ವಕ್ಫ್ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೋಮುಗಲಭೆ, ಶಾಂತಿ ಹಾಳು ಮಾಡಲು ಅವರು ಏನಾದರು ಮಾಡಬಹುದು. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಮುಂದಕ್ಕೆ ಯಾವರೀತಿ ತೆಗೆದುಕೊಳ್ಳುತ್ತದೆ ಎಂದು ಈಗ ಊಹೆ ಮಾಡಲು ಆಗುವುದಿಲ್ಲ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ರಾಷ್ಟ್ರಪತಿ ಆಡಳಿತ ಹೇರುವ ಬಿಜೆಪಿಯವರ ಪ್ರಯತ್ನದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲ ಸಾಧ್ಯವಿಲ್ಲ. ಪೊಲೀಸ್ ಇಲಾಖೆಯು ಸಮರ್ಥವಾಗಿ ಕಳೆದ ಒಂದೂವರೆ ವರ್ಷದಿಂದ ಶಾಂತಿಯನ್ನು ಕಾಪಾಡಿಕೊಂಡು ಬಂದಿದ್ದೇವೆ. ರಾಜ್ಯದಲ್ಲಿ ಶಾಂತಿ ಕದಡಲು ಅಥವಾ ಶಾಂತಿ ಭಂಗ ಮಾಡಲು ಪ್ರಯತ್ನಿಸಿದರೆ ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಷ್ಟು ಸುಲಭವಾಗಿ ಬಿಟ್ಟುಬಿಡುತ್ತೇವೆಯೇ ಎಂದು ಎಚ್ಚರಿಸಿದರು.

ಶಾಸಕರಿಗೆ 50 ಕೋಟಿ ರೂ. ಆಮಿಷದ ಕುರಿತು ಸಿಎಂ ಆರೋಪಕ್ಕೆ ಬಿಜೆಪಿಯವರು ದಾಖಲೆ ಕೇಳಿರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ 200 ಕೋಟಿ ರೂ. ಆರೋಪಕ್ಕೆ ದಾಖಲೆ ಕೊಟ್ಟಿದ್ದಾರೆಯೇ? ಇನ್ನಷ್ಟು ಜೋರಾಗಿ ಪ್ರತಿಭಟನೆ ಮಾಡುತ್ತೇವೆ, ರೂ. 200 ಕೋಟಿ ಆರೋಪಕ್ಕೆ ದಾಖಲೆಗಳನ್ನು ಕೊಡಿ ಎಂದು ರಾಜ್ಯ ಬಿಜೆಪಿ ಮುಖಂಡರು ಪ್ರಧಾನಮಂತ್ರಿಯನ್ನು ಕೇಳಲಿ. ಆನಂತರ ನಾವು ದಾಲೆಗಳನ್ನು ಕೊಡುತ್ತೇವೆ ಎಂದು ಟೀಕಿಸಿದರು.

Tags: 40% commission allegation is false..Congress PartyHome Minister Dr G Parameshwar
Previous Post

ಹಿಂದೂ ದೇವರ ವಿಗ್ರಹ ವಿರೂಪ ಕೇಸ್:ಅಪ್ರಾಪ್ತ ಮಾಡಿದ ಅವಾಂತರಕ್ಕೆ ಪೊಲೀಸ್ರೇ ಶಾಕ್!

Next Post

40 ಪರ್ಸೆಂಟ್‌ ಕಮಿಷನ್‌ ಆರೋಪ ಮುಕ್ತಾವಾಯ್ತಾ ಬಿಜೆಪಿ..?

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

40 ಪರ್ಸೆಂಟ್‌ ಕಮಿಷನ್‌ ಆರೋಪ ಮುಕ್ತಾವಾಯ್ತಾ ಬಿಜೆಪಿ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada