• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು, ಜ.7 : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ADVERTISEMENT

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.
ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ
ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.


ಸತ್ಯಕ್ಕೇ ಅಂತಿಮ ಜಯ
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags: BJPCongress PartyGovernerMuda Scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ಅವ್ರಿಗೆ ನನ್ನನ್ನು ಕಂಡ್ರೆ ಭಯ..?

Next Post

ವಿನೀಶ್ ಫೋಗಾಟ್‌ಗೆ ಬಿಗ್ ಶಾಕ್ ! ಫೈನಲ್ ಪಂದ್ಯದ ಮುನ್ನವೇ ಅನರ್ಹಗೊಳಿಸಿದ ಒಲಿಂಪಿಕ್ಸ್ ಅಸೋಸಿಯೇಷನ್ !

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ವಿನೀಶ್ ಫೋಗಾಟ್‌ಗೆ ಬಿಗ್ ಶಾಕ್ ! ಫೈನಲ್ ಪಂದ್ಯದ ಮುನ್ನವೇ ಅನರ್ಹಗೊಳಿಸಿದ ಒಲಿಂಪಿಕ್ಸ್ ಅಸೋಸಿಯೇಷನ್ !

ವಿನೀಶ್ ಫೋಗಾಟ್‌ಗೆ ಬಿಗ್ ಶಾಕ್ ! ಫೈನಲ್ ಪಂದ್ಯದ ಮುನ್ನವೇ ಅನರ್ಹಗೊಳಿಸಿದ ಒಲಿಂಪಿಕ್ಸ್ ಅಸೋಸಿಯೇಷನ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada