• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಮ್ಮ ಹಕ್ಕಿಗಾಗಿ ಸಂಘಟಿತರಾದ ಕಾರ್ಮಿಕರನ್ನು ಕೆಲಸದಿಂದ ವಜಾಮಾಡಿದ ಐಟಿಐ; 80 ಕಾರ್ಮಿಕರು ಬೀದಿಗೆ

Any Mind by Any Mind
December 10, 2021
in ಕರ್ನಾಟಕ
0
ತಮ್ಮ ಹಕ್ಕಿಗಾಗಿ ಸಂಘಟಿತರಾದ ಕಾರ್ಮಿಕರನ್ನು ಕೆಲಸದಿಂದ ವಜಾಮಾಡಿದ ಐಟಿಐ; 80 ಕಾರ್ಮಿಕರು ಬೀದಿಗೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರಿನ ಐಟಿಐ ಲಿಮಿಟೆಡ್ ನಲ್ಲಿ  ಕೆಲಸ ಮಾಡುವ ಕಾರ್ಮಿಕರು ತಮ್ಮ ಮೂಲಭೂತ ಹಕ್ಕಿಗಾಗಿ ಸಂಘಟನೆ ಮಾಡಿದ್ದಕ್ಕಾಗಿ ಮಹಿಳೆಯರು ಸೇರಿದಂತೆ ಒಟ್ಟು ೮೦ ಕಾರ್ಮಿಕರನ್ನು ಕಾನೂನು ಬಾಹಿರವಾಗಿ ಉದ್ಯೋಗದಿಂದ ತಗೆದುಹಾಕಿರುವ ಪ್ರಸಂಗ ನಡೆದಿದೆ.

ಕಳೆದ ೮ ದಿನದಿಂದ ಐಟಿಐನ ಹೊರಭಾಗದಲ್ಲಿ ತಮ್ಮ ಹಕ್ಕಿಗಾಗಿ ಪ್ರತಿಭಟಿಸುತ್ತಿದ್ದರು. ೩೦ ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡಿದ ಕಾರ್ಮಿಕರನ್ನು ಹಠಾತ್ ಕೆಲಸದಿಂದ ವಜಾಗೊಳಿಸಿದ್ದರಿಂದ ಈಗ ಅವರೆಲ್ಲ  ಬೀದಿಪಾಲಾಗಿದ್ದಾರೆ.

ಭಾರತ ಸರ್ಕಾರದ ಸಂಪರ್ಕ ಸಚಿವಾಲಯದ ದೂರಸಂಪರ್ಕ ಇಲಾಖೆ ಅಡಿಯಲ್ಲಿ ಬರುವ ಐಟಿಐ ಕಾರ್ಖಾನೆಯು ತನ್ನ ೮೦ ಕಾರ್ಮಿಕರಿಗೆ ಡಿಸೆಂಬರ್ ಆರಂಭದಿಂದ ಕೆಲಸ ನಿರಾಕರಿಸಿದೆ. ತರಾತುರಿಯಲ್ಲಿ  ಐಟಿಐ ಲಿಮಿಟೆಡ್ ಆಡಳಿತ ಮಂಡಳಿಯು ಹೊಸ ಗುತ್ತಿಗೆದಾರರನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಆದರೆ, ತಮ್ಮ ಕಾರ್ಖಾನೆಯಲ್ಲಿ ೫ ರಿಂದ ೩೦ ವರ್ಷಗಳ ವರೆಗೆ ಕೆಲಸ ಮಾಡಿರುವ  ಕಾರ್ಮಿಕರನ್ನು ಕೆಲಸದಿಂದ ತಗೆದಿರುವ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ಐಟಿಐ ತಿಳಿಸಿಲ್ಲ.

ಐಟಿಐನ ಕಾನೂನು ಬಾಹಿರ ಕ್ರಮದ ವಿರುದ್ಧ ಕಳೆದ ೮ ದಿನದಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರನ್ನು ಶುಕ್ರವಾರ ಹೊರಗೆ ತಳ್ಳಲಾಗಿದ್ದು, ಐಟಿಐನ ಎಲ್ಲ ಗೇಟ್ಗಳಿಗೂ ಬೀಗ ಜಡಿಯಲಾಗಿದೆ. ಆದರೂ ಪಟ್ಟು ಬಿಡದೆ ತಮ್ಮ ಕಾನೂನು ಬದ್ಧ ಹಕ್ಕಿಗಾಗಿ ಗೇಟ್ ಬಳಿಯಲ್ಲೇ ಕುಳಿತು ಕಾರ್ಮಿಕರು ಪ್ರತಿಭಟನೆ ಮುಂದುವರಿಸಿದ್ದಾರೆ.

ಐಟಿಐಯು ದೇಶದ ಸೇನೆ, ಡಿ.ಆರ್.ಡಿ.ಒ, ಇಸ್ರೋ ಸೇರಿದಂತೆ ಇತರೆ ರಕ್ಷಣಾ ವಲಯದ ಸಂಸ್ಥೆಗಳಿಗೆ  ಸಂಬಂಧಿಸಿದ ಅನೇಕ ಯೋಜನೆಗಳನ್ನು ಹೊಂದಿದೆ. ಹಲವು ಬಗೆಯ ರಕ್ಷಣಾ ಸಾಮಾಗ್ರಿ ಮತ್ತು ಸಾಧನಗಳನ್ನು ತಯಾರು ಮಾಡಿಕೊಡುತ್ತದೆ.  ಈ ಕಾರ್ಮಿಕರು ಇಂತಹ  ಸಾಮಾಗ್ರಿ ಮತ್ತು ಸಾಧನಗಳ ಉತ್ಪಾದನೆ ಕಾರ್ಯದಲ್ಲಿ ಇದ್ದರು. ಕೆಲಸ ನಿರಾಕರಿಸಲ್ಪಟ್ಟಿರುವ ಈ ಕಾರ್ಮಿಕರನ್ನು ಖಾಯಂಗೊಳಿಸುವುದಕ್ಕೆ ಸಂಬಂಧ ಪಟ್ಟಂತೆ ಭಾರತ ಸರ್ಕಾರದ ಬೆಂಗಳೂರಿನ ಪ್ರಾದೇಶಿಕ ಕಾರ್ಮಿಕ ಆಯುಕ್ತರ ಕಛೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದರಿ ಪ್ರಕರಣ ಚಾಲ್ತಿಯಲ್ಲಿರುವುದ್ದರಿಂದ ಈ ಕಾರ್ಮಿಕರ ಸೇವಾ ಷರತ್ತುಗಳನ್ನು ಬದಲಾಯಿಸಬಾರದೆಂದು ಕಾರ್ಮಿಕ ಆಯುಕ್ತರು ಐಟಿಐ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೂ ಐಟಿಐ ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಧಿಕ್ಕರಿಸಿ ಈ ಕಾರ್ಮಿಕರಿಗೆ ಕೆಲಸ ನಿರಾಕರಿಸಿರುವುದು ಕಾರ್ಮಿಕ ಆಯುಕ್ತರ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.

ಈ ಕಾರ್ಮಿಕರ ವಿವಾದದಲ್ಲಿ ಭಾರತ ಸರ್ಕಾರದ  ಸಂಪರ್ಕ ಸಚಿವಾಲಯ ಮತ್ತು ಕೇಂದ್ರ ಕಾರ್ಮಿಕ ಇಲಾಖೆಯು ತಕ್ಷಣವೇ ಮಧ್ಯಪ್ರವೇಶಿಸಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಮತಿ ನೀಡುವಂತೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನು ಬಾಹಿರ ಕ್ರಮಗಳನ್ನು ತೆಗೆದುಕೊಳ್ಳದಂತೆ ಐಟಿಐ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕಿದೆ.

ಕಾನೂನುಬದ್ಧ ಹಕ್ಕಿಗಾಗಿ ಕಾರ್ಮಿಕರ ಪ್ರತಿಭಟನೆ!
Tags: ITI who fired workers organized for their rights
Previous Post

ನವ ಉದಾರವಾದಿ ಆರ್ಥಿಕ ನೀತಿಗಳ ನಡುವೆ ನಶಿಸುತ್ತಿರುವ ಮಾನವ ಹಕ್ಕುಗಳು!

Next Post

ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
Next Post
ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ

ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ಸಿಬ್ಬಂದಿಗೆ ಪ್ರವೇಶ ಬೇಡ: ಸಿಎಂ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada