ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಮನೆಯೂಟ ಗಗನ ಕುಸುಮ ಎನ್ನುವಂತಾಗಿದೆ. ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಜಾ ಮಾಡಿತ್ತು. ಆ ಬಳಿಕ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.
ಈ ನಡುವೆ ಆಗಸ್ಟ್ 10ರ ಒಳಗಾಗಿ ಜೈಲು ಅಧಿಕಾರಿಗಳು ಕೋರ್ಟ್ಗೆ ವರದಿ ನೀಡುವಂತೆ ಸೂಚನೆ ಕೊಡಲಾಗಿತ್ತು. ಅದರಂತೆ ಈಗಾಗಲೇ ಜೈಲು ಅಧಿಕಾರಿಗಳು ವರದಿ ಸಿದ್ಧ ಮಾಡಿದ್ದು, ಮನೆಯೂಟ ಕೇಳಿದ್ದ ನಟ ದರ್ಶನ್ಗೆ ಜೈಲಾಧಿಕಾರಿಗಳು ಶಾಕ್ ನೀಡಿದ್ದಾರೆ.
ದರ್ಶನ್ಗೆ ಮನೆ ಊಟದ ವಿಚಾರವಾಗಿ ಹತ್ತು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ದರ್ಶನ್ ಮನವಿಯನ್ನು ಜೈಲಾಧಿಕಾರಿಗಳು ನಿರಾಕರಿಸಿದ್ದಾರೆ. ಈ ಬಗ್ಗೆ ಜೈಲಾಧಿಕಾರಿಗಳು ವರದಿ ಸಿದ್ಧಪಡಿಸಿದ್ದಾರೆ. ಆಗಸ್ಟ್ 19ಕ್ಕೆ ದರ್ಶನ್ ಮನೆ ಊಟ ಅರ್ಜಿ ವಿಚಾರಣೆ ಹೈಕೋರ್ಟ್ ನಡೆಸಲಿದೆ.
ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಬಂಧಿಗಳಿದ್ದಾರೆ. ಒಬ್ಬೊಬ್ಬರಿಗೆ ಮನೆ ಊಟಕ್ಕೆ ಅವಕಾಶ ನೀಡಿದರೆ, ಜೈಲಿನ ಊಟ ಮಾಡುವವರು ಇರುವುದಿಲ್ಲ. ಅಲ್ಲದೆ ನಟ ದರ್ಶನ್ಗೆ ಮನೆ ಊಟದ ಅಗತ್ಯವಿಲ್ಲ. ಜೈಲಿನಲ್ಲಿ ಗುಣಮಟ್ಟದ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಕೋರ್ಟ್ಗೆ ವರದಿಯಲ್ಲಿ ಸಲ್ಲಿಸಿದ್ದಾರೆ.
ಕೃಷ್ಣಮಣಿ