ಬೆಂಗಳೂರು: ಸೆಂಟ್ರಲ್ ಜೈಲಿನಲ್ಲಿ ಮೊಬೈಲ್ ಬಳಕೆ ಸಂಬಂಧ ಗೃಹ ಸಚಿವ ಪರಮೇಶ್ವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯುತ್ತಿದೆ. ಫ್ರೀಡಂ ಪಾರ್ಕ್ ಬಳಿ ಇರುವ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯಲ್ಲಿ ಸಭೆ ನಡೆಯುತ್ತಿದೆ.

ಜೈಲಿನ ಒಳಗೆ ಕೈದಿಗಳು ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸರ್ಕಾರಕ್ಕೆ ಮುಜುಗರ ತಂದಿತ್ತು. ಈ ಬಗ್ಗೆ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಪರಮೇಶ್ವರ್ ತಿಳಿಸಿದ್ದರು. ಹೀಗಾಗು ಇಂದು ಬೆಳಗ್ಗೆ 10.30ಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

ಗೃಹ ಸಚಿವರ ನೇತೃತ್ವದ ಸಭೆಗೆ ಖುದ್ದು ಡಿಜಿ & ಐಜಿಪಿ ಡಾ.ಎಂ.ಎ.ಸಲೀಂ, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಾಗಿದ್ದಾರೆ.
ಇನ್ನು ಕಾರಾಗೃಹ ಇಲಾಖೆ ಎಡಿಜಿಪಿ ಬಿ.ದಯಾನಂದ್ ವಿದೇಶ ಪ್ರವಾಸದಲ್ಲಿ ಇರುವುದರಿಂದ ಸಭೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ̤







