• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಲೆಗಡುಕರು ಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ: ʼಕೈʼ ಶಾಸಕ ನಾರಾ ವಿರುದ್ಧ ಗುಡುಗಿದ ರೆಡ್ಡಿ ಬ್ರದರ್ಸ್‌..!

ಪ್ರತಿಧ್ವನಿ by ಪ್ರತಿಧ್ವನಿ
January 2, 2026
in Top Story, ಕರ್ನಾಟಕ, ರಾಜಕೀಯ
0
ಕೊಲೆಗಡುಕರು ಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ: ʼಕೈʼ ಶಾಸಕ ನಾರಾ ವಿರುದ್ಧ ಗುಡುಗಿದ ರೆಡ್ಡಿ ಬ್ರದರ್ಸ್‌..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಗಣಿನಾಡಿನಲ್ಲಿ ಇದೀಗ ಗುಂಡಿನ ಸದ್ದು ಕೇಳಿ ಬಂದಿದ್ದು, ಬಳ್ಳಾರಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್ ಕಟುವ ವಿಚಾರವಾಗಿ ಗುರುವಾರ ರಾತ್ರಿ ಗಲಾಟೆ ನಡೆದಿದೆ. ಈ ವೇಳೆ ಗುಂಡು ತಗುಲಿ ಭರತ್‌ ರೆಡ್ಡಿ ಆಪ್ತ ರಾಜುಶೇಖರ ಸಾವನ್ನಪ್ಪಿದ್ದಾರೆ. ಸದ್ಯ ಬಳ್ಳಾರಿಯಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾಣವಾಗಿದೆ.

Ballri Political Raw : ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನಾರಾ ಭರತ್ ರೆಡ್ಡಿ ಸಾಂತ್ವನ..!

ಬಳ್ಳಾರಿ‌ ನಗರ ಶಾಸಕ ನಾರಾ ಭರತ್ ರೆಡ್ಡಿ, ಅಪ್ತ ಸತೀಶ್ ರೆಡ್ಡಿ ಹಾಗೂ ಭರತ್ ರೆಡ್ಡಿ ತಂದೆ ನಾರಾ ಸೂರ್ಯನಾರಾಣರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ನಿವಾಸದ ಮುಂದೆ ಗನ್ ಮ್ಯಾನ್ ಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಗಂಗಾವತಿಯಿಂದ ಕಾರಿನಲ್ಲಿ ಬಂದು ಇಳಿಯುತ್ತಿದ್ದಂತೆ ಗುಂಡಿನ‌ ದಾಳಿ ಆರಂಭಿಸಿದ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಲ್ಕಾರು ರೌಂಡ್ ಪೈರ್ ಮಾಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

Somashekhar reddy on Firing: ನನ್ನ ತಮ್ಮ ಜನಾರ್ದನ ರೆಡ್ಡಿಗೆ ಬುಲೆಟ್‌ ಬಿದ್ದದ್ರೆ ಏನಾಗ್ತಿತ್ತು ಪರಿಸ್ಥಿತಿ..!

ಭರತ್‌ ರೆಡ್ಡಿಯಿಂದ ದಬ್ಬಾಳಿಕೆ..

ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ ಹೆಸರಲ್ಲಿ ಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗಡುಕರನ್ನು ಹಿಂದಿಟ್ಟುಕೊಂಡು ಶಾಸಕ ಭರತ್‌ ರೆಡ್ಡಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ನಾರಾ ವಿರುದ್ಧ ಗಂಗಾವತಿ ಶಾಸಕ ಕಿಡಿ ಕಾರಿದ್ದಾರೆ. ಇನ್ನೂ ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸೋಮಶೇಖರ್‌ ರೆಡ್ಡಿ, ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್‌ಗಳಿಂದಲೇ ಬುಲೆಟ್ ಹೊರ ಬಿದ್ದಿದೆ. ಖಾಸಗಿ ಗನ್ ಮ್ಯಾನ್‌ಗಳೆಂದರೆ ಅದು ಸತೀಶ ರೆಡ್ಡಿ ಗನ್ ಮ್ಯಾನ್‌ಗಳೇ ಹೀಗಾಗಿ ಗಲಾಟೆಯಲ್ಲಿ ಫೈರಿಂಗ್ ಮಾಡಿದ್ದು ಸತೀಶ್ ರೆಡ್ಡಿ ಗನ್ ಮ್ಯಾನ್ ಎಂದು ದೂರಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಸಾವಿಗೆ ಭರತ್ ರೆಡ್ಡಿ ಬೆಂಬಲಿಗರೇ ಕಾರಣ. ಕಾರ್ಯಕರ್ತನ ಸಾವಿನ ಬಗ್ಗೆ ತನಿಖೆ ಆಗಬೇಕು ಎಂದು ಸೋಮಶೇಖರ್ ರೆಡ್ಡಿ ಒತ್ತಾಯಿಸಿದ್ದಾರೆ.

Sriramulu on Ballari Banner Row: ಶ್ರೀರಾಮುಲುಗೆ ಹೊಡೆಯೋಕೆ ಹೋದ ಕಾಂಗ್ರೆಸ್ ಕಾರ್ಯಕರ್ತರು..! Ballari |

ಬುಲೆಟ್‌ ಪ್ರದರ್ಶಿಸಿದ ರೆಡ್ಡಿ..

ಅಲ್ಲದೆ ಪೈರ್ ಮಾಡಿದ ಬುಲೆಟ್ ಅನ್ನು ಶಾಸಕ ಜನಾರ್ದನ ರೆಡ್ಡಿ ಪ್ರದರ್ಶಿಸಿದ್ದಾರೆ. ಆದರಲ್ಲಿ ಒಂದು ಗುಂಡು ರಾಜಶೇಖರನ ಎದೆಗೆ ತಗುಲಿದ್ದು, ಇದೀಗ ಈ ಗುಂಡು ಯಾರದ್ದು ಎಂದು ಎಫ್‌ಎಸ್‌ಎಲ್‌ ತಂಡದಿಂದ ಪರಿಶೀಲಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಶಾಸಕ ನಾರಾ ಭರತ್ ರೆಡ್ಡಿ ಆಗಮಿಸಿ ಮೃತ‌ ಆಪ್ತ ರಾಜಶೇಖರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಜನವರಿ 3 ರಂದು ವಾಲ್ಮೀಕಿ ಅನಾವರಣ ಕಾರ್ಯಕ್ರಮ ನಡೆಯಲಿರುವ ಬಳ್ಳಾರಿಯು ಸದ್ಯಕ್ಕೆ ರಾಜಕೀಯ ವೈರುದ್ಧ್ಯದ ಸಂಘರ್ಷದ ಕೊತ ಕೊತ ಕುದಿಯುತ್ತಿದೆ. ಘಟನೆಯ ಕುರಿತು ರಾಜಕೀಯ ನಾಯಕರ ಪರಸ್ಪರ ಕೆಸರೆರಚಾಟ ಜೋರಾಗಿ ನಡೆಯುತ್ತಿದೆ. ಆದರೆ ಇಬ್ಬರು ರಾಜಕೀಯ ನಾಯಕರ ನಡುವಿನ ರಾಜಕೀಯ ವೈಷಮ್ಯದಲ್ಲಿ ಅನ್ಯಾಯವಾಗಿ ಜೀವವೊಂದು ಉಸಿರು ನಿಲ್ಲಿಸಿರುವುದು ನಿಜಕ್ಕೂ ವಿಪರ್ಯಾಸವೇ ಸರಿ..!

Janardhanareddy on Firing: ಮನೆ ಮುಂದೆ ನಡೆದ ಫೈರಿಂಗ್ ಬಗ್ಗೆ ಶಾಸಕ ಜನಾರ್ದನರೆಡ್ಡಿ ಶಾಕಿಂಗ್ ರಿಯಾಕ್ಷನ್..!
Tags: ballariBJPcongressJanardhan reddyKarnatakaNara Bharath ReddyPoliticsSriramulu
Previous Post

ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್: ಪಕ್ಷದ ಮುಖಂಡರ ಭದ್ರತೆಗೆ ಆಗ್ರಹಿಸಿದ ವಿಜಯೇಂದ್ರ

Next Post

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada