• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಕ್ರಿಯ ರಾಜಕಾರಣಕ್ಕೆ ಬರಲು ಜನಾರ್ದನ ರೆಡ್ಡಿ ತಂತ್ರ, ದೆಹಲಿಯಲ್ಲಿ ವರ್ಕೌಟ್

ಯದುನಂದನ by ಯದುನಂದನ
February 2, 2022
in ಕರ್ನಾಟಕ, ದೇಶ, ರಾಜಕೀಯ
0
ಸಕ್ರಿಯ ರಾಜಕಾರಣಕ್ಕೆ ಬರಲು ಜನಾರ್ದನ ರೆಡ್ಡಿ ತಂತ್ರ, ದೆಹಲಿಯಲ್ಲಿ ವರ್ಕೌಟ್
Share on WhatsAppShare on FacebookShare on Telegram

ದೇಶಾದ್ಯಂತ ಭಾರೀ‌ ಚರ್ಚೆಯಾಗಿದ್ದ ಮತ್ತು ಲಕ್ಷಾಂತರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಂದೇ ಹೇಳಲಾಗುತ್ತಿದ್ದ ‘ಬಳ್ಳಾರಿ ಗಣಿ‌ ಅಕ್ರಮ’ದ (Bellary Mining Scam) ಹಿನ್ನೆಲೆಯಲ್ಲಿ ಜೈಲು‌ ಸೇರಿ‌ ರಾಜಕಾರಣದಿಂದ ದೂರ ಉಳಿದಿದ್ದ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ (Janardana Reddy) ಮತ್ತೆ ಸಕ್ರೀಯ ರಾಜಕಾರಣಕ್ಕೆ‌ ಬರಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ADVERTISEMENT

ರಾಮುಲು ಮೂಲಕ ರೆಡ್ಡಿ ಪ್ರಯತ್ನ

ಹಿಂದೆ ಬಿಜೆಪಿ ಹೈಕಮಾಂಡಿನಲ್ಲಿ ಅತ್ಯಂತ ಪ್ರಭಾವಿಗಳಲ್ಲಿ ಒಬ್ಬರಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಅವರು ಜನಾರ್ದನ ರೆಡ್ಡಿ ಅವರಿಗೆ ಆಸರೆಯಾಗಿದ್ದರು. ಆದರೆ ಈಗ ಅವರು ಇಲ್ಲದಿರುವುದರಿಂದ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಬಿಜೆಪಿ ಮಡಿಲಿಗೆ ಮರಳುವುದು ಬಹಳ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ತಮ್ಮ ಪರಮಾಪ್ತ ಸ್ನೇಹಿತ ಹಾಗೂ ರಾಜ್ಯ ಸಾರಿಗೆ ಸಚಿವ ಶ್ರೀರಾಮುಲು ಮೂಲಕ‌ ಸಕ್ರೀಯ ರಾಜಕಾರಣಕ್ಕೆ ಬರಲು ತಯಾರಿ ನಡೆಸುತ್ತಿದ್ದಾರೆ. ವೇದಿಕೆ ಸಿದ್ದಪಡಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ದಿಢೀರನೆ ದೆಹಲಿಗೆ ಆಗಮನ

ಮುಂದಿನ‌ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಸೇರಬೇಕು. ಚುನಾವಣೆಯಲ್ಲಿ ತಮ್ಮ‌ ಸಾಮರ್ಥ್ಯವನ್ನು ಪ್ರದರ್ಶನ ಮಾಡಬೇಕು. ಆ ಮೂಲಕ ಮತ್ತೆ ಪ್ರವರ್ಧಮಾನಕ್ಕೆ ಬರಬೇಕು ಎಂಬ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಈಗಿನಿಂದ ಬಿಜೆಪಿ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ. ಅದೇ ಕಾರಣಕ್ಕೆ ಅವರ ಗನ್ ಮ್ಯಾನ್, ಪಿಎ. ಪಿಎಸ್ ಗಳಿಗೂ ಮಾಹಿತಿ ನೀಡಿದೆ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ರಾಮುಲು-ರೆಡ್ಡಿ ಸೀಕ್ರೆಟ್ ಆಪರೇಷನ್

ದೆಹಲಿಯಲ್ಲೇ ಠಿಕಾಣಿ ಹೂಡಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ಸ್ನೇಹಿತರಿಬ್ಬರೂ ಭಾರೀ ಕಸರತ್ತು ನಡೆಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಭೇಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಪ್ರಹ್ಲಾದ್ ಜೋಷಿ ಭೇಟಿ ಮಾಡಿದ ಶ್ರೀರಾಮುಲು

ಅಮಿತ್ ಶಾ, ಜೆ.ಪಿ. ನಡ್ಡಾ ಮತ್ತು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಲು‌ ದಿನವಿಡಿ ಕಾದು ಕುಳಿತರೂ ಸಮಯಾವಕಾಶ ಸಿಗದ ಹಿನ್ನೆಲೆಯಲ್ಲಿ ಶ್ರೀರಾಮುಲು‌ ಅವರು ಬುಧವಾರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿದ್ದಾರೆ.‌ ಪ್ರಹ್ಲಾದ್ ಜೋಷಿ ಮೂಲಕ ಅಮಿತ್ ಶಾ, ಜೆ.ಪಿ. ನಡ್ಡಾ ಮತ್ತು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಲು‌ ರಾಮುಲು – ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಸಿಎಂ ಸ್ಥಾನಕ್ಕಾಗಿ ಶ್ರೀರಾಮುಲು

ಇದಲ್ಲದೆ ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಪರಿಶಿಷ್ಟ ಪಂಗಡಕ್ಕೆ ಅತಾರ್ಥ್ ತನಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಭರವಸೆ ನೀಡಿತ್ತು. ಆ ಭರವಸೆಯಂತೆ ತನ್ನನ್ನು ಉಪ ಮುಖ್ಯಮಂತ್ರಿ ಸ್ಥಾನವನ್ನು ಕೊಡಿ ಎಂದು ಕೂಡ ಶ್ರೀರಾಮುಲು‌ ಹೈಕಮಾಂಡ್ ಬಳಿ ಕೇಳಿಕೊಳ್ಳಲಿದ್ದಾರೆ. ಶ್ರೀರಾಮುಲು‌ ಉಪ ಮುಖ್ಯಮಂತ್ರಿಯಾದರೆ ಬಿಜೆಪಿಯಲ್ಲಿ ನೆಲೆ ಕಂಡುಕೊಳ್ಳಲು ಹೆಚ್ಚಿನ‌ ಅವಕಾಶ ಇರುತ್ತದೆ ಎಂದು ಜನಾರ್ದನ ರೆಡ್ಡಿ ಕೂಡ ಉಪ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂಬ ಮಾಹಿತಿಗಳು ಕೂಡ ಇವೆ.

ಪ್ರಹ್ಲಾದ್ ಜೋಷಿ ಟ್ವೀಟ್

ತಮ್ಮನ್ನು ಶ್ರೀರಾಮುಲು ಅವರು ಭೇಟಿ ಮಾಡಿದ್ದು ಇಲಾಖೆಯ ಕೆಲಸಕ್ಕೆ ಎಂದು ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ. ‘ಇಂದು ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಶ್ರೀ @sriramulubjp ಅವರು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ ಧಾರವಾಡ ಕ್ಷೇತ್ರದ ಗ್ರಾಮೀಣ ಕ್ಷೇತ್ರದ ಪರಿಶಿಷ್ಟ ಪಂಗಡ ಸಮುದಾಯದ ಪ್ರದೇಶಗಳಲ್ಲಿ ಟಿ.ಎಸ್. ಪಿ ಯೋಜನೆಯಡಿ ಮೂಲಭೂತ ಸೌಕರ್ಯಗಳ ಕಾಮಗಾರಿಕೆಗೆ ಅನುದಾನವನ್ನು ಬಿಡುಗಡೆ ಮಾಡಲು ಕೋರಲಾಯಿತು’ ಎಂದು ತಿಳಿಸಿದ್ದಾರೆ.

ಇಂದು ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಶ್ರೀ @sriramulubjp ಅವರು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ ಧಾರವಾಡ ಕ್ಷೇತ್ರದ ಗ್ರಾಮೀಣ ಕ್ಷೇತ್ರದ ಪರಿಶಿಷ್ಟ ಪಂಗಡ ಸಮುದಾಯದ ಪ್ರದೇಶಗಳಲ್ಲಿ ಟಿ.ಎಸ್. ಪಿ ಯೋಜನೆಯಡಿ ಮೂಲಭೂತ ಸೌಕರ್ಯಗಳ ಕಾಮಗಾರಿಕೆಗೆ ಅನುದಾನವನ್ನು ಬಿಡುಗಡೆ ಮಾಡಲು ಕೋರಲಾಯಿತು. pic.twitter.com/sAqZrRQb61

— Pralhad Joshi (Modi Ka Parivar) (@JoshiPralhad) February 2, 2022
Tags: BJPJanardhan reddyಬಿಜೆಪಿ
Previous Post

ಜೇಮ್ಸ್ ಸಿನೆಮಾ | ಅಪ್ಪು ಪಾತ್ರಕ್ಕೆ ಯಾರು ಧ್ವನಿ ನೀಡಿದ್ದಾರೆ ಗೊತ್ತೇ?

Next Post

ಆಂಧ್ರಪ್ರದೇಶದ ಜಿನ್ನಾ ಟವರ್ ಹೆಸರು ಬದಲಾವಣೆಗೆ ಬಿಜೆಪಿ ಒತ್ತಾಯ : ತ್ರಿವರ್ಣ ಬಣ್ಣ ಬಳಿದು ವಿವಾದಕ್ಕೆ ತೆರೆ ಎಳೆದ YSR ಕಾಂಗ್ರೆಸ್

Related Posts

Top Story

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

by ಪ್ರತಿಧ್ವನಿ
July 31, 2025
0

ಧರ್ಮಸ್ಥಳ (Dharmasthala)ದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಮಾರ್ಕ್‌ನಲ್ಲಿ 2 ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ...

Read moreDetails

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

July 31, 2025
Next Post
ಆಂಧ್ರಪ್ರದೇಶದ ಜಿನ್ನಾ ಟವರ್ ಹೆಸರು ಬದಲಾವಣೆಗೆ ಬಿಜೆಪಿ ಒತ್ತಾಯ : ತ್ರಿವರ್ಣ ಬಣ್ಣ ಬಳಿದು ವಿವಾದಕ್ಕೆ ತೆರೆ ಎಳೆದ YSR ಕಾಂಗ್ರೆಸ್

ಆಂಧ್ರಪ್ರದೇಶದ ಜಿನ್ನಾ ಟವರ್ ಹೆಸರು ಬದಲಾವಣೆಗೆ ಬಿಜೆಪಿ ಒತ್ತಾಯ : ತ್ರಿವರ್ಣ ಬಣ್ಣ ಬಳಿದು ವಿವಾದಕ್ಕೆ ತೆರೆ ಎಳೆದ YSR ಕಾಂಗ್ರೆಸ್

Please login to join discussion

Recent News

Top Story

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

by ಪ್ರತಿಧ್ವನಿ
July 31, 2025
Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊನೆಗೂ ಧರ್ಮಸ್ಥಳದ ಗ್ರಾಮದಲ್ಲಿ ಶವಗಳ ಅಸ್ಥಿಪಂಜರ ಪತ್ತೆ ಮಾಡಿದ ಎಸ್ಐಟಿ..

July 31, 2025

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada