• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ…!!

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಂಕಣ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಹಣವಿಲ್ಲ:ಬಸವರಾಜ ಬೊಮ್ಮಾಯಿ.

ADVERTISEMENT

ಜನಶಕ್ತಿ ಮುಂದೆ ಯಾವ ಶಕ್ತಿಯೂ ನಡೆಯುವುದಿಲ್ಲ. ಇದು ಸ್ಥಳೀಯ ಶಾಸಕರಿಗೆ ಗೊತ್ತಿಲ್ಲ. ಅಧಿಕಾರ ಇದೇ ಗೆದ್ದೇ ಗೆಲ್ಲುತ್ತೇವೆ ಎಂದು ಕೊಂಡಿದ್ದರು. ಆದರೆ ಡಾ. ಸುಧಾಕರ್ ಗೆಲುವಿನ ಮೂಲಕ ಜನಶಕ್ತಿಗೆ ಎದಿರೇಟು ಕೊಡುವ ಶಕ್ತಿ ಇದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.

ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್(Chikkaballapur MP Dr.K. Sudhakar) ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸುಧಾಕರ್ ಅವರು ಕಳೆದ ಚುನಾವಣೆಯಲ್ಲಿ ಸೋತಾಗ ನನಗೆ ಸೋತಿದ್ದಕ್ಕೆ ದುಃಖವಿಲ್ಲ. ಆದರೆ, ಕೆಲಸಗಳು ಆಗಲ್ಲವಲ್ಲ ಎಂದಿದ್ದರು. ಅವರಿಗೆ ಎಲ್ಲೇ ಸ್ಥಾನ ಇದ್ದರೂ ಚಿಕ್ಕಬಳ್ಳಾಪುರದಲ್ಲಿ ಇದ್ದೇ ಇರುತ್ತಾರೆ. ಜನಶಕ್ತಿ ಗೆಲ್ಲಿಸುವ ಮೂಲಕ ಅವರಿಗೆ ಅವಕಾಶ ಕೊಟ್ಟಿದೆ ಎಂದು ತಿಳಿಸಿದರು.

ಸುಧಾಕರ್ ಅವರು ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳು ಅವರ ಕೈ ಹಿಡಿದಿವೆ. ದೊಡ್ಡ ಪ್ರಮಾಣದ ಗೆಲುವು ಸಿಕ್ಕಿದೆ. ಕ್ಷೇತ್ರದ ಋಣಾನುಬಂಧ ಸುಧಾಕರ್ ಅವರನ್ನು ಎಳೆದುತಂದು ಸಮಗ್ರ ಅಭಿವೃದ್ಧಿ ಗೆ ಅವಕಾಶ ಕೊಟ್ಟಿದ್ದೀರಿ. ಎಲ್ಲ ಕನಸುಗಳ ಸಾಕಾರ ಮಾಡಿಕೊಳ್ಳಲು ಸುಧಾಕರ್ ಅವರನ್ನು ಆಯ್ಕೆ ಮಾಡಿದ್ದೀರಿ ಎಂದು ಹೇಳಿದರು.

ಕ್ಷೇತ್ರದಲ್ಲಿ 25 ಸಾವಿರ ನಿವೇಶನಗಳ ವಿತರಣೆ ಮಾಡುವ ಕೆಲಸ ಒಂದು ಕ್ರಾಂತಿ. ಅಂತಹ ಕೆಲಸವನ್ನು ಸುಧಾಕರ್ ಅವರು ಮಾಡಿದ್ದರು. ಮೆಡಿಕಲ್ ಕಾಲೇಜಿಗಾಗಿ(Medical College) ರಾಜೀನಾಮೆ ಕೊಟ್ಟು ಪಟ್ಟು ಹಿಡಿದು ಮೆಡಿಕಲ್ ಕಾಲೇಜು ಮಾಡಿಸಿದರು. ಆದರೆ, ಕಾಂಗ್ರೆಸ್ ಸರಕಾರದಿಂದ ಅಳಿದುಳಿದ ಕೆಲಸ ಮಾಡಿ ಅಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸುವ ಕೆಲಸ ಮಾಡುತ್ತಿಲ್ಲ. ಕಾಂಗ್ರೆಸ್ ಸರಕಾರ ಯಾವ ಮುಖ ಇಟ್ಟುಕೊಂಡು ಅಧಿಕಾರ ನಡೆಸುತ್ತಿದೆ ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ಯಾರಿಗೂ ಅನುದಾನ ಕೊಟ್ಟಿಲ್ಲ. ರಾಜ್ಯ ಸರಕಾರ ದಿವಾಳಿಯಾಗಿದೆ. ಮುಂಬರುವ ದಿನಗಳಲ್ಲಿ ಸರಕಾರಿ ನೌಕರರಿಗೆ ದುಡ್ಡು ಕೊಡಲು ಆಗುವುದಿಲ್ಲ. ಒಪಿಎಸ್ ಜಾರಿಗೆ ತರುತ್ತೇವೆ ಎಂದಿದ್ದರು. ಆದರೆ ಈಗ ಆ ಶಬ್ದವನ್ನೇ ಆಡುತ್ತಿಲ್ಲ. ರೈತರನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಇಂತ ಕೆಟ್ಟ ಸರಕಾರವನ್ನು ನನ್ನ ಜೀವನದಲ್ಲಿ ನೋಡಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದರು.

ಕೇಂದ್ರ ಸರಕಾರ ಕೊಟ್ಟಿರುವ ಪರಿಹಾರವನ್ನು ಸರಿಯಾಗಿ ಇವರ ಕೊಡುತ್ತಿಲ್ಲ. ನಮ್ಮ ಸರಕಾರಿವಿದ್ದಾಗ ಡಬಲ್ ಪರಿಹಾರ ಕೊಟ್ಟಿದ್ದೇವೆ. ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದರು. ಸಿಎಂ ಮತ್ತು ಡಿಸಿಎಂಗಳನ್ನು ಮಾಡಿಕೊಳ್ಳುವುದಕ್ಕೆ ಮಾತ್ರ ಈ ಸರಕಾರವಿದೆ ಎಂದು ಹೇಳಿದರು.

ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟವನ್ನು ಸುಧಾಕರ್ ಅವರು ಪಟ್ಟು ಹಿಡಿದು ಮಾಡಿಸಿದ್ದರು. ಆದರೆ ಕಾಂಗ್ರೆಸ್ ಸರಕಾರ ರದ್ದು ಮಾಡಿದೆ. ನೀವೆಲ್ಲಾ ಏಕೆ ಸುಮ್ನೆ ಕೂತಿದ್ದೀರಾ.. ಎಲ್ಲರೂ ಸುಧಾಕರ್ ಅವರ ನೇತೃತ್ವದಲ್ಲಿ ಚಳವಳಿ ಮಾಡಿ. ಈ ಭಾಗದ ರೈತರಿಗೆ ಪ್ರತ್ಯೇಕ ಹಾಲು ಒಕ್ಕೂಟ ಅತ್ಯಗತ್ಯ ಎಂದು ತಿಳಿಸಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಲೋಕಸಭೆ ಚುನಾವಣೆ ನಂತರ ಭಾರೀ ಚೆನ್ನಾಗಿ ಅಟ್ಯಾಕ್ ಮಾಡುತ್ತಿದ್ದಾರೆ. ಏನೋ ಅವರಿಗೆ ಬೆಳಕು ಕಾಣಿಸ್ತಿದೆ. ಖಂಡಿತ ಬೆಳಕು ಸಿಗಲಿದೆ. ಬಿಜೆಪಿ-ಜೆಡಿಎಸ್‌ಗೆ ಮಾತ್ರ ಭವಿಷ್ಯವಿದೆ. ಮಾಜಿ ಪ್ರಧಾನ ಮಂತ್ರಿಗಳಿರುವ ಪ್ರಾದೇಶಿಕ ಪಕ್ಷವದು ಎಂದು ಹೇಳಿದರು.

Tags: Basavaraj BommaiBJPdrksudhakarNDANikhil KumaraswamyRAshok
Previous Post

ಸಚಿವ ಮಧು ಮುಂದೆನೇ ಮೊಬೈಲ್ ಎಸೆದ BJP MLA ಚನ್ನಬಸಪ್ಪ

Next Post

Monsoon Footwear: ಮಳೆಗಾಲಕ್ಕೆ ಬೇಕಾದಂತಹ ವಿಭಿನ್ನವಾದ ಫೂಟ್ ವೇರ್ ಗಳು ಮಾರ್ಕೆಟ್ನಲ್ಲಿ ಟ್ರೆಂಡಿಂಗ್.!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
Monsoon Footwear: ಮಳೆಗಾಲಕ್ಕೆ ಬೇಕಾದಂತಹ ವಿಭಿನ್ನವಾದ ಫೂಟ್ ವೇರ್ ಗಳು ಮಾರ್ಕೆಟ್ನಲ್ಲಿ ಟ್ರೆಂಡಿಂಗ್.!

Monsoon Footwear: ಮಳೆಗಾಲಕ್ಕೆ ಬೇಕಾದಂತಹ ವಿಭಿನ್ನವಾದ ಫೂಟ್ ವೇರ್ ಗಳು ಮಾರ್ಕೆಟ್ನಲ್ಲಿ ಟ್ರೆಂಡಿಂಗ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada