ಬೆಳಗಾವಿ : ನಿನ್ನೆಯಷ್ಟೇ ಗೋಕಾಕ್ನಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿತ್ತು. ಈ ಬೆನ್ನಲ್ಲೇ ಇಂದು ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಗೋಕಾಕ್ನಲ್ಲಿ ನಾಮಪತ್ರ ವಾಪಸ್ ಪಡೆದಿದ್ದು ರಮೇಶ್ ಜಾರಕಿಹೊಳಿಯನ್ನು ಸೋಲಿಸಲು ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯು ನಾಮಪತ್ರ ಹಿಂಪಡೆಯುವಂತೆ ಮಾಡಿದೆ ಎನ್ನಲಾಗ್ತಿದೆ.
ಗೋಕಾಕ್ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆದ ಚಂಡನ್ ಗಿಡ್ಡನವರ್ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಂತೇಶ ಕಡಾಡಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಚಂದನ್ ಗಿಡ್ಡನವರ್ರ ಈ ದಿಢೀರ್ ನಿರ್ಧಾರ ಜೆಡಿಎಸ್ ವರಿಷ್ಠರಿಗೆ ಆಘಾತ ತಂದಿದೆ.
ನಾಮಪತ್ರ ವಾಪಸ್ ಪಡೆಯುವ ವಿಚಾರವಾಗಿ ಚಂದನ್ ಗಿಡ್ಡನವರ್ ಪಕ್ಷದ ವರಿಷ್ಠರೊಂದಿಗೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ ಎನ್ನಲಾಗ್ತಿದೆ. ಹೀಗಾಗಿ ದಳಪತಿಗಳು ಚಂದನ್ ಗಿಡ್ಡನವರ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಬಗ್ಗೆ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.