• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

JDS ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ.. ಆಶ್ರಯಕ್ಕಾಗಿ ಆಸೆಗಣ್ಣು..!

ಕೃಷ್ಣ ಮಣಿ by ಕೃಷ್ಣ ಮಣಿ
June 6, 2023
in Top Story, ಇದೀಗ, ಕರ್ನಾಟಕ
0
JDS ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ.. ಆಶ್ರಯಕ್ಕಾಗಿ ಆಸೆಗಣ್ಣು..!
Share on WhatsAppShare on FacebookShare on Telegram

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಬ್ಬರದಲ್ಲಿ ಬಿಜೆಪಿ ಹಾಗು ಜೆಡಿಎಸ್​ ಕೊಚ್ಚಿ ಹೋಗಿವೆ. 224 ಕ್ಷೇತ್ರಗಳ ಪೈಕಿ 135 ಸ್ಥಾನಗಳಲ್ಲಿ ಗೆದ್ದು ಕಾಂಗ್ರೆಸ್​ ಅಧಿಕಾರ ಹಿಡಿದರೆ, 66 ಸ್ಥಾನಗಳನ್ನು ಗೆದ್ದು ವಿರೋಧ ಪಕ್ಷವಾಗಿ ಗುರುತಿಸಿಕೊಂಡಿದೆ. ಆದರೆ ಕೇವಲ 19 ಸ್ಥಾನಗಳಲ್ಲಿ ಗೆದ್ದು ಹೀನಾಯ ಸ್ಥಿತಿ ತಲುಪಿರುವ ಜೆಡಿಎಸ್​, ಮುಂದಿನ ಚುನಾವಣೆ ಹಾಗು ಮುಂದಿನ 5 ವರ್ಷಗಳ ಕಾಲ ಪಕ್ಷವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಕುಮಾರಸ್ವಾಮಿ ಮೇಲಿದೆ. ಇದೀಗ ಪಕ್ಷವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಹೊತ್ತಿರುವ ಕುಮಾರಸ್ವಾಮಿ ಅಮಿತ್​ ಷಾ ಭೇಟಿ ಮಾಡಲಿದ್ದಾರೆ ಎನ್ನೋ ಸುದ್ದಿ ಹೊರಬಿದ್ದಿದೆ.

ADVERTISEMENT

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ..!

ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್​ ಹಾಗು ಜೆಡಿಎಸ್​ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿತ್ತು. ಅಂದು ಕಾಂಗ್ರೆಸ್​ ಹಾಗು ಜೆಡಿಎಸ್​ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಎದುರಿಸಿದ್ದವು. ಆದರೆ ಕಾಲ ಬದಲಾಗಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದೆ. ಇದೀಗ ಜೆಡಿಎಸ್​ ಅನಿವಾರ್ಯತೆ ಕಾಂಗ್ರೆಸ್​ಗೆ ಬೇಕಿಲ್ಲ, ಆದರೆ ಬಿಜೆಪಿಗೆ ಜೆಡಿಎಸ್​​ ಬೆಂಬಲ ಬೇಕು. ಅದೇ ರೀತಿ ಜೆಡಿಎಸ್​ಗೂ ಕೂಡ ಆರ್ಥಿಕ ಸಹಕಾರ ಬೇಕಿದೆ. ಇಲ್ಲದಿದ್ರೆ ಜೆಡಿಎಸ್​ ಪಕ್ಷವೇ ಮುಳುಗಿ ಹೋಗುವ ಸಂಭವ ಇರುತ್ತದೆ. ಹೀಗಾಗಿ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಚುನಾವಣೆ ಮೈತ್ರಿ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್​ ಕಟ್ಟಿ ಹಾಕಲು ಸಜ್ಜಾಗುತ್ತಿದೆ ವೇದಿಕೆ..!

ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ ಗೆದ್ದು ಬೀಗಿದ್ದ ಬಿಜೆಪಿ ಈ ಬಾರಿ ಅಷ್ಟೂ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಕಷ್ಟ ಎನ್ನಲಾಗ್ತಿದೆ. ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿ ಹೆಚ್ಚಾಗಿದ್ದು, ಹೇಗಾದರೂ ಮಾಡಿ ಇರುವ ಸ್ಥಾನಗಳನ್ನು ಉಳಿಸಿಕೊಳ್ಳಲು ಜೆಡಿಎಸ್​ ಜೊತೆಗೆ ಮೈತ್ರಿ ಮಾಡಿಕೊಳ್ಳು ಮುಂದಾಗಿದೆ ಎನ್ನಲಾಗ್ತಿದೆ. ಈಗಾಗಲೇ ಬಿಬಿಎಂಪಿ ಚುನಾವಣೆ ಜೊತೆಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಪೂರ್ವ ತಯಾರಿ ಮಾಡಿಕೊಳ್ತಿದ್ದು, ಈಗಾಗಲೇ ಜಾರಿ ಮಾಡುತ್ತಿರುವ 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್​ಗೆ ಲಾಭ ತಂದುಕೊಡುವ ಲೆಕ್ಕಾಚಾರ ಶುರುವಾಗಿದೆ. ಈಗಾಗಲೇ ಚುನಾವಣೆಗೆ ವೇಗ ಕೊಡಲು ಮುಂದಾಗಿರುವ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ ಶಿವಕುಮಾರ್​, ಚುನಾವಣೆ ಗೆಲ್ಲುವ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ.

ಜೆಡಿಎಸ್​ ಕೈ ಹಿಡಿಯದ ಮುಸ್ಲಿಮರು, ಕಾಂಗ್ರೆಸ್​ಗೆ ಜೈಕಾರ..!

ಬಿಜೆಪಿ ಕೋಮುಭಾವನೆ ಕೆರಳಿಸುವ ಮೂಲಕ ಮತ ಸೆಳೆಯುವ ಕೆಲಸ ಮಾಡುತ್ತದೆ ಎಂದು ಕಾಂಗ್ರೆಸ್​ – ಜೆಡಿಎಸ್​ ಸದಾ ಕಾಲ ಆರೋಪ ಮಾಡುತ್ತಿದ್ದವು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳವನ್ನು ಮುಸ್ಲಿಂ ಸಮುದಾಯ ಕೈ ಹಿಡಿಯಲಿಲ್ಲ. ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಆಶಯದ ಜೊತೆಗೆ ಪಂಚರತ್ನ ಯೋಜನೆಗಳನ್ನು ರಾಜ್ಯದ ಜನರ ಮುಂದಿಟ್ಟರೂ ಜನರು ಜೆಡಿಎಸ್​ ಕೈ ಹಿಡಿಯಲಿಲ್ಲ ಎನ್ನುವ ಕಾರಣದಿಂದ ಭಾರತೀಯ ಜನತಾ ಪಾರ್ಟಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆ ಸ್ಪರ್ಧೆ ಮಾಡುವ ತಯಾರಿ ನಡೀತಿದೆ ಎನ್ನಲಾಗಿದೆ.

ಹಳೇ ಮೈಸೂರು ಭಾಗದಲ್ಲಿ ಸೋಲಿಸಿದ್ದೇ ಬಿಜೆಪಿ..!

ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​ ಹೀನಾಯ ಸೋಲು ಕಾಣಲು ಕಾಂಗ್ರೆಸ್​ ಅಬ್ಬರದ ಜೊತೆಗೆ ಬಿಜೆಪಿ ಸೆಳೆದ ಮತಗಳ ಸಂಖ್ಯೆಯೂ ಕೂಡ ಕಾರಣ. ಪ್ರಧಾನಿ ನರೇಂದ್ರ ಮೋದಿ ಹಾಗು ಅಮಿತ್​ ಷಾ ಅಬ್ಬರದ ಪ್ರಚಾರ ಮಾಡುವ ಮೂಲಕ ನಾಲ್ಕೈದು ಸಾವಿರ ಮತಗಳನ್ನು ಸೆಳೆದಿದ್ದರಿಂದ ಜೆಡಿಎಸ್​ ಹಲವು ಕ್ಷೇತ್ರಗಳಲ್ಲಿ ಸೋಲುಂಡಿತ್ತು. ಆದರೆ ಕಾಲಚಕ್ರ ತಿರುಗಿದಂತೆ ಕೆಲವೇ ದಿನಗಳಲ್ಲಿ ಎದುರಾಳಿಗಳೇ ಬಾಂಧವ್ಯ ಬೆಸೆಯುವ ಲಕ್ಷಣಗಳು ಗೋಚರ ಆಗುತ್ತಿವೆ. ಜೆಡಿಎಸ್​ಗೂ ಕೂಡ ಇದು ಅನಿವಾರ್ಯ ಆಗಿದ್ದು, ಕೇಸರಿ ಪಾಳಯದ ಕಡೆಗೆ ಆಸೆಗಣ್ಣುಗಳಿಂದ ನೋಡುವಂತಾಗಿದೆ.

ಕೃಷ್ಣಮಣಿ

Tags: amithshahbjpkarnatakacmsiddaramiahDCM DK Shivakumarhd kumarasswamyhddevegowdaJDSlatestnewsmallikarjunkhargePMModi
Previous Post

ಓಡೋಡಿ ಬಂದ ಡಿಕೆಶಿ, ಮದುವೆ ಊಟಕ್ಕೆ ಹೊರಟ ಬಿಜೆಪಿ ಶಾಸಕರು..

Next Post

ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್

Related Posts

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್
ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರು ಹಗರಣದ ಬಗ್ಗೆ ಸಲ್ಲಿಸಿದ್ದ ಬಿ ರಿಪೋರ್ಟ್...

Read moreDetails
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
Next Post
ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್

ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada