ಸಾರಿಗೆ ನೌಕಕರ ಮುಷ್ಕರ ಹಿನ್ನಲೆ, ಸಿಎಂ ಯಡಿಯೂರಪ್ಪ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾರಿಗೆ ನೌಕರರ ಮನವೊಲಿಸಿ ಜನಸಾಮಾನ್ಯರಿಗಾಗುತ್ತಿರುವ ಸಮಸ್ಯೆಯನ್ನು ತಪ್ಪಿಸಬೇಕಿರುವುದು ಸರ್ಕಾರ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ.

ಸಿಎಂ ಆಗಲಿ, ಸಚಿವರಾಗಲಿ ಯಾರು ಮೇಲಿಂದ ಇಳಿದು ಬಂದಿಲ್ಲಾ, ಯಡಿಯೂರಪ್ಪ ತಮ್ಮ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಮನವೊಲಿಸಬೇಕು. ನೌಕರರ ಸಮಸ್ಯೆ ಬಗೆಹರಿಸುವತ್ತ ಸರ್ಕಾರ ಗಮನಹರಿಸ ಬೇಕೆಂದಿದ್ದಾರೆ.

ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಅವರನ್ನು ಮಾತುಕತೆಗೆ ಕರೆಯಲ್ಲಾ ಅಂದ್ರೆ ಇವರು ವಿಧಾನಸೌಧದಲ್ಲಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಸಿ.ಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಉದ್ಧಟತನ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತವಲ್ಲ, ಬಿಜೆಪಿ ಮುಕ್ತ ಆಗೋ ದಿನಗಳು ಹತ್ತಿರ ಬಂದಂತೆ ಎಂದು ಹೆಚ್ಡಿಕೆ ಎಚ್ಚರಿಸಿದ್ದು, ಸರ್ಕಾರ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸುವತ್ತ ಮುಖ್ಯಮಂತ್ರಿ ಯಡಿಯೂರಪ್ಪ, ಸಾರಿಗೆ ಸಚಿವರು ಕೂಡಲೇ ಗಮನಹರಿಸಬೇಕೆಂದಿದ್ದಾರೆ.






