• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವುʼ – ಹೆಚ್ ಡಿ ಕುಮಾರಸ್ವಾಮಿ

Any Mind by Any Mind
October 10, 2021
in ಕರ್ನಾಟಕ, ರಾಜಕೀಯ
0
ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವುʼ – ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವೀಕ್ ಆಗಿದೆ. ಜೆಡಿಎಸ್ ಸ್ಟ್ರಾಂಗ್ ಇದ್ದಿದ್ರೆ ಚುನಾವಣೆ ಸೋಲ್ತಿದ್ರಾ? ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಹೆಚ್‌ ಡಿ ಕುಮಾರಸ್ವಾಮಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT


ʼಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆʼ ಎಂದು ತಿರುಗೇಟು ನೀಡಿದ್ದಾರೆ.

ʼಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆ.1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2021

ಸರಣಿ ಟ್ವೀಟ್‌ ಮಾಡಿದ ಅವರು ʼನಮ್ಮ ಸೋಲಿನ ಕಾರಣ ಮಂಡ್ಯ ಜನತೆಗೆ ಗೊತ್ತಿದೆ. ನಿಖಿಲ್ 6 ಲಕ್ಷ ಮತ ಗಳಿಸಿದ್ದರು. ರೈತಸಂಘ, ಕಾಂಗ್ರೆಸ್, ಬಿಜೆಪಿ, ಕೆಲ ಮಾಧ್ಯಮಗಳು ಸೇರಿ ʼಮ್ಯಾನೇಜ್ʼ ಮಾಡಿದ ಚುನಾವಣೆ ಅದು. ಕೌರವರು ಮಹಾಭಾರತದಲ್ಲಿ ರಚಿಸಿದ್ದ ಚಕ್ರವ್ಯೂಹದಲ್ಲಿ ಅಭಿಮನ್ಯು ಹೇಗೆ ಸಿಲುಕಿದ್ದನೋ ಹಾಗೇ ಇವರೆಲ್ಲರ ಷಡ್ಯಂತ್ರದ ಚಕ್ರವ್ಯೂಹದಲ್ಲಿ ನಿಖಿಲ್ ಸಿಲುಕಿದ್ದರು. ಸಮ್ಮಿಶ್ರ ಸರಕಾರದ ಮೈತ್ರಿಯ ಭಾಗವಾಗಿದ್ದುಕೊಂಡೇ ಬೆನ್ನಿಗಿರಿದ ನಿಮ್ಮ ಹೀನ ರಾಜಕೀಯ ಯಾರಿಗೆ ಗೊತ್ತಿಲ್ಲ ಹೇಳಿ? ನಿಮ್ಮ ʼಕುತಂತ್ರ ಹೆಜ್ಜೆಗಳುʼ ಎಲ್ಲೆಲ್ಲಿ ಮೂಡಿದವು ಎಂಬುದು ಜನರಿಗೆ ಗೊತ್ತಿಲ್ಲದ ಸಂಗತಿ ಏನಲ್ಲ. ಅಂತಹ  ಚಕ್ರವ್ಯೂಹ ರಚಿಸಿರಲಿಲ್ಲ ಎಂದಾದರೆ ʼಬ್ರೂಟಸ್ʼ ಪಾಲಿಟಿಕ್ಸ್ ಮಾಡಿ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದು ಏಕೆ?  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವು. ಅದನ್ನೇ ಇಟ್ಟುಕೊಂಡು ಜೆಡಿಎಸ್ ದುರ್ಬಲವಾಗಿದೆ ಎಂದು ಹೇಳುವುದು ಮೂರ್ಖತನದ ಪರಮಾವಧಿ. ಜೆಡಿಎಸ್ ಬಗ್ಗೆ ಮಾತನಾಡಲ್ಲ ಅಂತೀರಿ. ಕುಮಾರಸ್ವಾಮಿ, ದೇವೇಗೌಡರ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದೇನೆ ಅನ್ನುತ್ತೀರಿ. ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ ಎಂದು ಗೋಳಾಡುತ್ತೀರಿ. ಮತ್ಯಾಕೆ ನಮ್ಮ ಬಗ್ಗೆ ಮಾತು? ಬಿಜೆಪಿಯವರು ನಿಮ್ಮ ಹೇಳಿಕೆಗಳಿಗೆ ಕ್ಯಾರೇ ಅನ್ನುವುದಿಲ್ಲ. ನಮ್ಮ ಬಗ್ಗೆ ಮಾತನಾಡದಿದ್ದರೆ ನಿಮಗೆ ಗತಿಯೇ ಇಲ್ಲʼ ಎಂದು ಟ್ವೀಟ್‌ ಮಾಡಿದ್ದಾರೆ.

ʼಕುಮಾರಸ್ವಾಮಿಯವರ ಟೀಕೆಗಳನ್ನು ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಲೇ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ ಸಿದ್ದರಾಮಯ್ಯನವರೇ? ನಿಮ್ಮ ರಾಜಕೀಯ ಉಳಿಗಾಲಕ್ಕಾಗಿ ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲʼ ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ  ವಿರುದ್ಧ ಹರಿಹಾಯ್ದಿದ್ದಾರೆ.

Tags: ʼಬ್ರೂಟಸ್ʼ ಪಾಲಿಟಿಕ್ಸ್ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್‌ಜೆಡಿಎಸ್ದೇವೇಗೌಡರಮಂಡ್ಯಲೋಕಸಭೆಸಿದ್ದರಾಮಯ್ಯ
Previous Post

ಅ.11 & 12 ‘ಉದ್ಯಮಿಯಾಗು- ಉದ್ಯೋಗ’ ನೀಡು ಕಾರ್ಯಾಗಾರ &ಕೈಗಾರಿಕಾ ಅದಾಲತ್‌:ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

Next Post

ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada