ಮೈಸೂರು ಜಿಲ್ಲೆಯ ಜೆಡಿಎಸ್ನ ಸರ್ವೋಚ್ಚ ನಾಯಕ ಜಿ.ಟಿ.ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡ ವಿರುದ್ದ ಬಹಿರಂಗವಾಗಿ ಸಮರ ಸಾರಿ ಅತೃಪ್ತಿಯ ಬಾವುಟ ಹಾರಿಸಿದ್ದ ಜೆಡಿಎಸ್ನ ಐವರು ಅತೃಪ್ತ ನಾಯಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೇರ್ಗಳ್ಳಿಯಲ್ಲಿ ನಡೆದ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಈ ಐವರು ನಾಯಕರು ಘೋಷಿಸಿದ್ದಾರೆ.
![](https://pratidhvani.com/wp-content/uploads/2022/11/WhatsApp-Image-2022-11-29-at-7.23.35-PM.jpeg)
ಜಿಲ್ಲಾ ಪಂಚಾಯತ್ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಮಾದೇಗೌಡ, ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ದೇವರಾಜು
ಬೆಳವಾಡಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ಪ್ರಭಾವಿ ನಾಯಕರು ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಜೊಳಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಗ್ರಾಮದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಈ ವೇಳೆ ಮಾಜಿ ಸಿಎಂ ಸಿದದ್ದರಾಮಯ್ಯರೊಂದಿಗೆ ಕಾಂಗ್ರೆಸ್ ಸೇಪರ್ಡೆ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.