ಮೈಸೂರು ದಸರಾ (Mysuru dasara) ಉದ್ಘಾಟನ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ (G T Devegowda) ಅಚ್ಚರಿಯ ಹೇಳಿಕೆ ನೀಡಿರುವುದು ನಾನಾ ರೀತಿಯ ಚರ್ಚೆಗೆ ಕಾರಣವಾಗಿದೆ. ಮುಡಾ (MUDA) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (Cm Siddaramaiah) ಪರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬ್ಯಾಟ್ ಬೀಸಿದ್ದಾರೆ.
ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮದ ವೇದಿಕೆ ಮೇಲೆಯೇ ಮುಡಾ ಹಗರಣ ವಿಚಾರ ಪ್ರಸ್ತಾಪಿಸಿದ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡೋಕು ?! ಹಾಗಿದ್ರೆ ಕುಮಾರಸ್ವಾಮಿ (Kumaraswamy) ರಾಜೀನಾಮೆ ಕೊಡ್ತಾರಾ? ಎಂಬ ಶಾಕಿಂಗ್ ಸ್ಟೇಟೆಂಟ್ ಕೊಟ್ಟಿದ್ದಾರೆ.
ಜವಾಬ್ದಾರಿಯುತ ಜನಪ್ರತಿನಿಧಿಗಳಾದವರು ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತ್ರೆ ಹೇಗೆ ? ರಾಜೀನಾಮೆ ಕೋಡೋದೆ ಆದ್ರೆ ಎಫ್.ಐ.ಆರ್ (F.I.A) ಆಗಿರೋ ಎಲ್ಲಾ ನಾಯಕರು ಕೊಡಲಿ ಅಂತ ಸಪಕ್ಷದವರ ವಿರುದ್ಧ ಜಿ.ಟಿ ದೇವೇಗೌಡ ಕಿಡಿಕಾರಿದ್ದಾರೆ.