• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೆಡಿಎಸ್ ಪಕ್ಷ ಯಾರ ಮುಖವಾಡವೂ ಅಲ್ಲ: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
February 22, 2023
in Top Story, ಕರ್ನಾಟಕ, ರಾಜಕೀಯ
0
ಜೆಡಿಎಸ್ ಪಕ್ಷ ಯಾರ ಮುಖವಾಡವೂ ಅಲ್ಲ: ಎಚ್.ಡಿ. ಕುಮಾರಸ್ವಾಮಿ ತಿರುಗೇಟು
Share on WhatsAppShare on FacebookShare on Telegram

ಶಿವಮೊಗ್ಗ: ಪಂಚರತ್ನ ರಥಯಾತ್ರೆ ಅಂಗವಾಗಿ ಮೂರು ದಿನಗಳ ಶಿವಮೊಗ್ಗ ಪ್ರವಾಸದಲ್ಲಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಹಾಗೂ ಸರ್ಕಾರದ ಧೋರಣೆಗಳ ವಿರುದ್ಧ ವಾಗ್ದಾಳಿ ನಡೆಸಿದರು.

ADVERTISEMENT

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಜೆಡಿಎಸ್ ಬಿಜೆಪಿಯ ಮುಖವಾಡ ಎಂದು ಕರೆದಿದ್ದಕ್ಕೆ ಕಿಡಿಕಾರಿದ ಕುಮಾರಸ್ವಾಮಿ ಜೆಡಿಎಸ್ ಪಕ್ಷ ಯಾರ ಮುಖವಾಡವೂ ಅಲ್ಲ  ಎಂದು ತಿರುಗೇಟು ನೀಡಿದರು.

ಜೆಡಿಎಸ್ ನಾಯಕರ ಮುಖವಾಡ ಕಳಚಿದರೆ, ನರೇಂದ್ರ ಮೋದಿ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ಸಿಗೆ ನರೇಂದ್ರ ಮೋದಿ ಬಿಟ್ಟರೆ ಇನ್ನಾರು ಕಾಣಲು ಸಾಧ್ಯ..? ಬೇರೆಯವರು ಯಾರು ಕಾಣೋದಿಲ್ಲ. ನರೇಂದ್ರ ಮೋದಿ ಭಜನೆ ಬಿಟ್ಟರೆ ಕಾಂಗ್ರೆಸ್’ಗೆ ಬೇರೇನೂ ಇಲ್ಲ.!  ಈ ಸುರ್ಜೆವಾಲ್ ಗೆ  ಬಹಿರಂಗ ಸವಾಲು ಹಾಕಿದ್ದೆ. ಆಪರೇಷನ್ ಕಮಲ ನಂತರ ಮೊದಲ ಚುನಾವಣೆ 2009ರಲ್ಲಾಯ್ತು. ಈಗಿನ ಶಾಸಕಾಂಗ ಪಕ್ಷದ ನಾಯಕರು ಅಂದು ಸುಪಾರಿ ತೆಗೆದುಕೊಂಡಿದ್ದರು. ( ಸಿದ್ದರಾಮಯ್ಯ-ಯಡಿಯೂರಪ್ಪ ಒಪ್ಪಂದ) ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದೆ. ಈ ಸುರ್ಜೇವಾಲ್ ಗೆ ನಾಚಿಕೆ ಆಗಬೇಕು. ಇಷ್ಟು ದಿನಗಳ ನಂತರ ಕರ್ನಾಟಕಕ್ಕೆ ಬಂದು ಜೆಡಿಎಸ್ ಬಿಜೆಪಿ B ಟೀಂ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಕಾಂಗ್ರೆಸ್ ಗೆ ಯಾವುದೇ ನೈತಿಕತೆ ಇಲ್ಲ. ಈ ಕುರಿತು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊನೆಯ ಹಂತದಲ್ಲಿದೆ. ಇನ್ನೂ ನೆಲಕಚ್ಚಲಿದೆ. ಈ ಹೇಳಿಕೆಗಳಿಂದ ಏನು ಲಾಭವಿಲ್ಲ. ಜೆಡಿಎಸ್ ನ ವಿರುದ್ಧ ಹೇಳಿಕೆ ನೀಡಿದಷ್ಟು ಕಾಂಗ್ರೆಸ್ ನೆಲಕಚ್ಚುತ್ತದೆ ಎಂದರು.

ಇಂದು, ನಾಳೆ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಸುಮಾರು 60 ರಿಂದ 70 ಮನೆಗಳಿಗೆ ಭೇಟಿ ನೀಡುತ್ತಿದ್ದೇನೆ. ನಾಡಿದ್ದು ತೀರ್ಥಹಳ್ಳಿಯಲ್ಲಿ ಒಂದೂವರೆ ದಿನದ ಪ್ರವಾಸ ಮುಗಿಸಿಕೊಂಡು ನಂತರ ಶೃಂಗೇರಿಗೆ ಭೇಟಿ ನೀಡಲಿದ್ದೇನೆ ಇದು ನಿರಂತರವಾಗಿ ಮುಂದಿನ ತಿಂಗಳು 20ನೇ ತಾರೀಖಿನವರೆಗೂ ಮುಂದುವರೆಯುತ್ತದೆ. ಪಂಚರತ್ನ ಯೋಜನೆಗಳು ಜನರಿಗೆ ವರದಾನ ಆಗಬಲ್ಲವು. ಇಂದು ಕೂಡ ಸಾಕಷ್ಟು ಪೋಷಕರು ಅನಾರೋಗ್ಯ ಮಕ್ಕಳನ್ನು ಕರೆತಂದಿದ್ದರು ನನ್ನ ಜನ ಸಂಪರ್ಕಕ್ಕೆ ಬಂದ ಮೂರು ಕುಟುಂಬಗಳಿಗೆ ಸುಮಾರು ಒಂದು ಕಾಲು ಕೋಟಿ ರೂಪಾಯಿ ಚಿಕಿತ್ಸಾ ವೆಚ್ಚ ಬೇಕು. ಇಂತಹದನ್ನು ನೋಡಿಯೇ ನಾನು ಪಂಚರತ್ನ ಯೋಜನೆ ತಂದಿದ್ದು ಎಂದರು.

ರಾಮನಗರ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ್, ಶಾಸಕಿ ಅನಿತಾ ಬರೋದಕ್ಕಿಂತಾ ಮುಂಚೆ ಟೇಪ್ ಕಟ್ ಮಾಡಿರೋದಕ್ಕಾಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ ಅಷ್ಟೇ ಎಂದು ಹೇಳಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಮಂಡ್ಯದಲ್ಲಿ ಮನೆಯನ್ನಾದರೂ ಮಾಡಲಿ, ಅರಮನೆಯನ್ನಾದರೂ ಮಾಡಲಿ, ಶಿವಮೊಗ್ಗದಲ್ಲಿ ಕಟ್ಟಿದ ಹಾಗೆ ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳನ್ನಾಗಿ ಕಟ್ಟಲಿ, ಬೇಡ ಅಂದವರು ಯಾರು..? ಎಂದು ಕುಮಾರಸ್ವಾಮಿ ಸರ್ಕಾರಿ ನೌಕರರಿಗೆ ಸರ್ಕಾರ ಮಾತು ಕೊಟ್ಟಿದ್ದು 7ನೇ ವೇತನ ಆಯೋಗ ರಚನೆ ಮಾಡುತ್ತೇವೆ ಎಂದರು. ಈಗ ಕೈ ಕೊಟ್ಟಿದ್ದಾರೆ ಸರ್ಕಾರಿ ನೌಕರರು ಅರ್ಥ ಮಾಡಿಕೊಳ್ಳಬೇಕು ನಾನು ನಿಮ್ಮ ಪರವಾಗಿ ಪ್ರಾಮಾಣಿಕವಾಗಿ ಇದ್ದೆ, ಈ ಸುಳ್ಳಿನ ಸರ್ಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳುತ್ತೇನೆ ಎಂದರು.

Tags: H D KumaraswamyJDS KarnatakaRandeep SurjewalaShivamogga
Previous Post

KCC CRICKET | ಪ್ರಾಕ್ಟೀಸ್ ಹೇಗಿದೆ ಶಿವಣ್ಣ ಎಂದು ಕೇಳಿದ ಕಿಚ್ಚ ..! ಶಿವಣ್ಣನಾ ಉತ್ತರ ನೋಡಿ..

Next Post

Kcc cricket | ಸರ್ ನಾನು ಸಿಸಿಎಲ್ ಗೆ ಹೋಗೋಕೆ ಆಗಲಿಲ್ಲ ಇಲ್ಲೇ ಕೂತಿದೀನಿ ಟಿಕೆಟ್ ಮಾರ್ಕೊಂಡು

Related Posts

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌ ವಿಧಾನಸೌಧದಲ್ಲಿ...

Read moreDetails
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
Next Post
Kcc cricket | ಸರ್ ನಾನು ಸಿಸಿಎಲ್ ಗೆ ಹೋಗೋಕೆ ಆಗಲಿಲ್ಲ ಇಲ್ಲೇ ಕೂತಿದೀನಿ ಟಿಕೆಟ್ ಮಾರ್ಕೊಂಡು

Kcc cricket | ಸರ್ ನಾನು ಸಿಸಿಎಲ್ ಗೆ ಹೋಗೋಕೆ ಆಗಲಿಲ್ಲ ಇಲ್ಲೇ ಕೂತಿದೀನಿ ಟಿಕೆಟ್ ಮಾರ್ಕೊಂಡು

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada