• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
August 18, 2026
in ಕರ್ನಾಟಕ
0
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರದ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರೋಧಿಸಿ ಜೆಡಿಎಸ್ ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕ ಸಂಚಾರ ಬದಲಾವಣೆ ಮಾಡಲಾಗಿದೆ.ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ADVERTISEMENT

 ಯಾವೆಲ್ಲ ರಸ್ತೆಗಳಲ್ಲಿ ಬದಲಾವಣೆ?

ಮೈಸೂರು ಬ್ಯಾಂಕ್ ವೃತ್ತ:

ಕೆ.ಜಿ. ರಸ್ತೆಯಿಂದ ಮೈಸೂರು ಬ್ಯಾಂಕ್ ವೃತ್ತದ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ತೆರಳುವ ವಾಹನಗಳು ಬಲತಿರುವು ಪಡೆದು ಪ್ಯಾಲೇಸ್ ರಸ್ತೆ–ಮಹಾರಾಣಿ ಅಂಡರ್‌ಪಾಸ್ ಮಾರ್ಗ ಬಳಸಬೇಕು.

ಫ್ರೀಡಂ ಪಾರ್ಕ್ ಜಂಕ್ಷನ್:

ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಹೋಗುವ ಹಾಗೂ ಬರುವ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಖೋಡೆ ಜಂಕ್ಷನ್:

ಖೋಡೆ ಜಂಕ್ಷನ್‌ನಿಂದ ಕೆ.ಆರ್. ಸರ್ಕಲ್ ಕಡೆಗೆ ತೆರಳುವ ವಾಹನ ಸವಾರರು ಸಂಚಾರ ದಟ್ಟಣೆ ತಪ್ಪಿಸಲು ಹಳೆ ಜೆಡಿಎಸ್ ಕಚೇರಿ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಸುಬ್ಬಣ್ಣ ಜಂಕ್ಷನ್–ಎಂ.ಟಿ.ಆರ್ ಜಂಕ್ಷನ್:

ಸದ್ಯ ಏಕಮುಖ ಸಂಚಾರವಿರುವ ಈ ರಸ್ತೆಯನ್ನು ಪ್ರತಿಭಟನೆಯ ದಿನ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಗಾಂಧಿನಗರ ಕಡೆಗೆ ತೆರಳುವ ವಾಹನಗಳು ಈ ಮಾರ್ಗ ಬಳಸಬಹುದು.

H. D. Kumaraswamy : ಕೋರ್ಟ್‌ಗಳಲ್ಲಿ  ತಪ್ಪು ದಾಖಲೆ ನೀಡಿ, ತೀರ್ಪು ಪಡೆದುಕೊಂಡಿದ್ದಾರೆ.. #Pratidhvani

ಈ ರಸ್ತೆಗಳಲ್ಲಿ ಪಾರ್ಕಿಂಗ್‌ ಇಲ್ಲ

ಪ್ರತಿಭಟನೆಯ ಹಿನ್ನೆಲೆಯಲ್ಲಿ ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ ಯಾವುದೇ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ.

  • ವೈ. ರಾಮಚಂದ್ರ ರಸ್ತೆ
  • ಕಾಳಿದಾಸ ರಸ್ತೆ
  • ಪ್ಯಾಲೇಸ್ ರಸ್ತೆ
  • ಕೆ.ಜಿ. ರಸ್ತೆ

ಮೆಜೆಸ್ಟಿಕ್, ಗಾಂಧಿನಗರ, ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ಹೃದಯಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

Tags: ##bengaluru#BengaluruTraffic#BidadiTownship#BidadiTownshipProtest#jds#JDSProtest#KarnatakaPolitics#TrafficAlert#TrafficDiversionBengaluruNewsBengaluruTrafficUpdateBidadifreedomparkkarnatakanews
Previous Post

ಬಿಗ್‌ಬಾಸ್ ಕನ್ನಡ 13: ‘ಅಗ್ನಿಪರೀಕ್ಷೆ’ಯಲ್ಲಿ 60 ಸ್ಪರ್ಧಿಗಳ ಭವಿಷ್ಯ ನಿರ್ಧಾರ; ಆಯ್ಕೆ ಪ್ರಕ್ರಿಯೆಗೆ ವೀಕ್ಷಕರ ಆಕ್ಷೇಪ?

Next Post

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು: ಭಾಗ ೧

Related Posts

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?
ಕರ್ನಾಟಕ

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

by ಪ್ರತಿಧ್ವನಿ
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಜ್ವರ ಹಾಗೂ ಸಾಂಕ್ರಾಮಿಕ ರೋಗಗಳ ಆತಂಕದ ನಡುವೆಯೇ ಶಾಲಾ ಮಕ್ಕಳಲ್ಲಿ H1N1 ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ನಗರದ ಪಾಟರಿ...

Read moreDetails
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

August 17, 2026
ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

August 17, 2026
ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

August 17, 2026
ಸಂಬರಾಲ ಯೇಟಿ ಗಟ್ಟು ಸೂಟಿಂಗ್‌ ಮುಗೀತು: ಮುಂದಿನ ಸಂಕ್ರಾಂತಿಗೆ ರಿಲೀಸ್

ಸಂಬರಾಲ ಯೇಟಿ ಗಟ್ಟು ಸೂಟಿಂಗ್‌ ಮುಗೀತು: ಮುಂದಿನ ಸಂಕ್ರಾಂತಿಗೆ ರಿಲೀಸ್

August 17, 2026
Next Post

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು: ಭಾಗ ೧

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada