• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2016ರಲ್ಲಿ ಎರೆಡೆರಡು ಬಾರಿ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಕಾಂಗ್ರೆಸ್‌ಗೆ ತಿವಿದ ಜೆಡಿಎಸ್‌

ಪ್ರತಿಧ್ವನಿ by ಪ್ರತಿಧ್ವನಿ
July 23, 2026
in Top Story, ಕರ್ನಾಟಕ, ರಾಜಕೀಯ
0
2016ರಲ್ಲಿ ಎರೆಡೆರಡು ಬಾರಿ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಕಾಂಗ್ರೆಸ್‌ಗೆ ತಿವಿದ ಜೆಡಿಎಸ್‌
Share on WhatsAppShare on FacebookShare on Telegram

ಬೆಂಗಳೂರು: ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಯ ಕಾವು ಹೆಚ್ಚಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ರಾಜೀನಾಮೆ ಆಗ್ರಹ ಜೋರಾಗಿದೆ. ಸಿಜೆಪಿ ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಈ ಹೋರಾಟಕ್ಕೆ ಕಾಂಗ್ರೆಸ್​​ ಪಕ್ಷ ಕೂಡ ಕೈ ಜೋಡಿಸಿದ್ದು, ದೆಹಲಿ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕಾಂಗ್ರೆಸ್​​ನ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಈ ಹೋರಾಟವನ್ನು ಜೆಡಿಎಸ್ ಟೀಕಿಸಿದ್ದು, 2016ರ ಇತಿಹಾಸವನ್ನು ನೆನಪಿಸಿದೆ.

ADVERTISEMENT
ತಾಕತ್ತಿದ್ರೆ ರಾಹುಲ್ ಗಾಂಧಿನಾ ಜೈಲಲ್ಲಿ ಇಡಬೇಕಿತ್ತು ನೋಡೋಣ..! | pratidhvani

ಈ ಬಗ್ಗೆ ಟ್ವೀಟ್‌ ಮಾಡಿರುವ ಜೆಡಿಎಸ್‌, ಬೇರೆಯವರ ಕಣ್ಣಿನ ಕಸ ಹುಡುಕುವ ಮುನ್ನ, ನಿಮ್ಮ ಕಣ್ಣಿನ ದಿಮ್ಮಿಯನ್ನು ತೆಗೆಯಿರಿ. ನೀಟ್‌ ವಿಚಾರವಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಬಹಿಷ್ಕರಿಸುವಂತೆ ಒತ್ತಡ ಹೇರುತ್ತಿರುವ ಕಾಂಗ್ರೆಸ್‌ ಶಾಸಕರು, ನಾಯಕರೇ ಒಮ್ಮೆ ನೆನಪಿಸಿಕೊಳಿ.

ನಿಮ್ಮದೆ ಸರ್ಕಾರವಿದ್ದಾಗ 2016ರಲ್ಲಿ ಒಂದಲ್ಲ… ಎರೆಡೆರಡು ಬಾರಿ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಅಂದು ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಕಲ್ಲು ಹಾಕಿದ್ದು ಮರೆತುಹೋಯಿತೇ ? ಅಂದಿನ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ರಾಜೀನಾಮೆ ಆಗ್ರಹಿಸಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದ್ದರು. ಆಗ ಶಿಕ್ಷಣ ಸಚಿವರು ರಾಜೀನಾಮೆ ಕೊಟ್ಟಿದ್ದರೇ..?

ದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡ್ತಾರಂದ್ರೆ ವ್ಯವಸ್ಥೆ ಎಲ್ಲಿ ಹೊರಟಿದೆ..? #pratidhvani

ಈಗ ನೀಟ್‌ ವಿಚಾರವಾಗಿ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಪ್ರಚೋದನೆ ನೀಡುವ ಮೂಲಕ ವಾಮಮಾರ್ಗದಲ್ಲಿ ಕಾಂಗ್ರೆಸ್‌ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ನಾಚಿಕೆಗೇಡು! ವಾಲ್ಮೀಕಿ ಹಗರಣ, SCSP/TSP ಹಣ ದುರ್ಬಳಕೆ, ಕೆಪಿಎಸ್ಸಿ (KPSC) ಹಗರಣ, ಗೃಹಲಕ್ಷ್ಮಿ (5000 ಕೋಟಿ ) ಹಗರಣ, ಹೀಗೆ… ಸಾಲು ಸಾಲು ಹಗರಣಗಳಾದಾಗ ಬಾಯಿ ಮುಚ್ಚಿಕೊಳ್ಳುವ ಕಾಂಗ್ರೆಸ್‌ ನಾಯಕರಿಗೆ, ಈಗ ಮಾತನಾಡಲು ಯಾವ ನೈತಿಕತೆ ಇದೆ ? ಎಂದು ಜೆಡಿಎಸ್‌ ಪ್ರಶ್ನಿಸಿದೆ.

ಸರ್ಕಾರಿ ಮೆಡಿಕಲ್ ಕಾಲೇಜು ಯಾಕೆ ಓಪನ್ ಮಾಡ್ತಿಲ್ಲ, ಇದೆಲ್ಲ ವ್ಯಾಪಾರ ಆಗಿಬಿಟ್ಟಿದೆ..! #pratidhvani

ಧಾರವಾಡದಲ್ಲಿ ಉದ್ಯೋಗ ನೇಮಕಾತಿಗಾಗಿ ಹೋರಾಡಿದ ವಿದ್ಯಾರ್ಥಿಗಳ ಮೇಲೆ , ನರಗುಂದದಲ್ಲಿ ಕಬ್ಬು ಬೆಳೆಗಾರರ ಮೇಲೆ, ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸುತ್ತಿರುವ ರೈತರ ಮೇಲೆ ಲಾಠಿ ಏಟು ಕೊಟ್ಟ ಜನವಿರೋಧಿ ಸರ್ಕಾರ ನಿಮ್ಮದು. ದಲಿತರ ಮನೆಗೆ ಬೆಂಕಿ ಬಿದ್ದಾಗ, ಹುಬ್ಬಳ್ಳಿಯಲ್ಲಿ ಗಲಭೆಯಾದಾಗ ನಿಮ್ಮ ಬಾಯಿ ಏಕೆ ಮುಚ್ಚಿತ್ತು ಕಾಂಗೆಸ್ಸಿಗರೇ ? ಕಾಂಗ್ರೆಸ್‌ ಸರ್ಕಾರ ಮತ್ತು ಕಾಂಗ್ರೆಸ್‌ ನಾಯಕರ ಭ್ರಷ್ಟಾಚಾರ, ಬೂಟಾಟಿಕೆ ಹಾಗೂ ದ್ವಂದ್ವ ನೀತಿಯನ್ನು ರಾಜ್ಯದ ಯುವಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್‌ ಕಿಡಿಕಾರಿದೆ.

Tags: BJPcongressJDSKarnatakaKarnataka PoliticsNEETNeet Exam ScamPoliticsprotest
Previous Post

ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

Next Post

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್

Related Posts

ಮಹಿಳೆಯ ವೇಷ ಧರಿಸಿ `ನೈಟ್ ರೈಡ್’ ಮಾಡಿದ  ಯುವಕನಿಗೆ ಕಾದಿತ್ತು ಶಾಕಿಂಗ್ ಅನುಭವ | WATCH VIDEO
Top Story

ಮಹಿಳೆಯ ವೇಷ ಧರಿಸಿ `ನೈಟ್ ರೈಡ್’ ಮಾಡಿದ  ಯುವಕನಿಗೆ ಕಾದಿತ್ತು ಶಾಕಿಂಗ್ ಅನುಭವ | WATCH VIDEO

by ಪ್ರತಿಧ್ವನಿ
September 20, 2026
0

ನವದೆಹಲಿ:  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆ ಹೇಗಿರುತ್ತದೆ ಎಂಬುದನ್ನು ಸ್ವತಃ ಅರಿಯಲು ಹೊರಟ ಕಂಟೆಂಟ್ ಕ್ರಿಯೇಟರ್ ಒಬ್ಬರಿಗೆ ಬೆಚ್ಚಿಬೀಳಿಸುವ ಅನುಭವ ಎದುರಾಗಿದೆ. ಮಹಿಳೆಯ...

Read moreDetails
ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

September 20, 2026
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

September 20, 2026
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
Next Post
ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada