• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದ ಗ್ಯಾರಂಟಿ ವೈಫಲ್ಯ ಖಂಡಿಸಿ ಬೀದಿಗಿಳಿದ ಜೆಡಿಎಸ್​..!

ಕೃಷ್ಣ ಮಣಿ by ಕೃಷ್ಣ ಮಣಿ
March 7, 2025
in ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರದ ಗ್ಯಾರಂಟಿ ವೈಫಲ್ಯ ಖಂಡಿಸಿ ಬೀದಿಗಿಳಿದ ಜೆಡಿಎಸ್​..!
Share on WhatsAppShare on FacebookShare on Telegram

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್​ ಸರ್ಕಾರದ ವಿರುದ್ದ ಜಿಲ್ಲಾ ಜೆಡಿಎಸ್ ಬೀದಿಗಿಳಿದು ಪ್ರತಿಭಟನೆ ಮಾಡಿದೆ. ಜಿಲ್ಲಾ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಮಾಡಿದ್ದು, ಪಂಚ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.

ADVERTISEMENT

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಮಾಡದ ಹಿನ್ನಲೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಹೋರಾಟ ಮಾಡಿದ್ದು, ಹಲೋ ಮಿಸ್ಟರ್ ಸಿದ್ದರಾಮಯ್ಯ ಹೇಳಿದ್ದೇನು ಮಾಡಿದ್ದೇನು ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ ಪ್ರಸನ್ನ ಕುಮಾರ್, ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮತ್ತಿತರರು ಭಾಗಿಯಾಗಿದ್ದರು.

ಇತ್ತ ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಚುನಾವಣೆ ಸಂದರ್ಭದಲ್ಲಿ ಮಾತ್ರ ಗೃಹಲಕ್ಷ್ಮಿ ಹಣ ಹಾಕ್ತಾರೆ. ಜನರು ಈ ಸರ್ಕಾರಕ್ಕೆ ಉಗಿಯುತ್ತಿದ್ದಾರೆ. ಉಚಿತ ಭಾಗ್ಯ ಪ್ರತಿ ತಿಂಗಳು 1 ನೇ ತಾರೀಖಿನಂದು ಹಾಕಬೇಕು.ಇಲ್ಲ ಉಸ್ತುವಾರಿ ಸಚಿವರು, ಶಾಸಕರ ಮನೆಯ ಮುಂದೆ ಅಡ್ಡಹಾಕಿ ಜೆಡಿಎಸ್ ಪ್ರತಿ ನಿತ್ಯ ಹೋರಾಟ ಮಾಡ್ತೇವೆ ಎಂದು ಎಚ್ಚರಿಸಿದ್ದಾರೆ.

ಗ್ಯಾರಂಟಿ ಮೂಲಕ ಮತ ತಗೊಂಡು ಇವಾಗ ಗ್ಯಾರಂಟಿ ಕೊಟ್ಟಿಲ್ಲ ಎಂದು ಪ್ರತಿ ನಿತ್ಯ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಮಾಡ್ತೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಇದಕ್ಕೂ ಸಂಬಂಧ ಏನು? ಇವರು ಏನು ಚೆಕ್​ಗೆ ಸಹಿ ಹಾಕಬೇಕ? ನಾನು ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸರ್ಕಾರ ಮಾಡಬೇಕು, ಸಿಎಂ ದುಡ್ಡು ಬಿಡುಗಡೆ ಮಾಡೋದು. ಹಿಂದೆ ಸರ್ಕಾರ ವಿವಿ ಕೊಟ್ಟಿತ್ತು ಅದನ್ನ ಮುಚ್ಚಲು ಹೋರಾಟಿದ್ದಾರೆ. ನಿಮಗೆ ಸರ್ಕಾರ ನಡೆಸಲು ತಾಕತ್ ಇಲ್ಲಂದ್ರೆ ಮನೆಗೆ ಹೋಗಿ ಬೇರೆಯವರು ಮಾಡ್ತಾರೆ ಎಂದು ಕಿಚಾಯಿಸಿದ್ದಾರೆ.

H vishvanath :  ಸಿಎಂ ಸಿದ್ದರಾಮಯ್ಯಗೆ ವಿಧಾನಪರಿಷತ್‌ನಲ್ಲಿ ಟಾಂಗ್‌ ಕೊಟ್ಟ ವಿಶ್ವನಾಥ್‌..! #pratidhvani

ಬಜೆಟ್​ನಲ್ಲಿ ಮಂಡ್ಯ ಜಿಲ್ಲೆಗೆ ದೊಡ್ಡ ಮೊತ್ತದ ಹಣ ಕೊಡಿ ಎಂದಿರುವ ಪುಟ್ಟರಾಜು, ರಾಜ್ಯವನ್ನು ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡ ಹೋಗ್ತಾರೆ. ಚನ್ನಪಟ್ಟಣ ಚುನಾವಣೆಯಲ್ಲಿ ಗೃಹಲಕ್ಷ್ಮಿ ಹಣ ಹಾಕಿದ್ರು. ಸಿಎಂ ಸಿದ್ದರಾಮಯ್ಯ ಫೈನಲ್.
ಮುಂದೆ ದೊಡ್ಡ ಹೋರಾಟ ಮಾಡ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ ಮಾಜಿ ಸಚಿವ ಸಿ.ಎಸ್​ಪುಟ್ಟರಾಜು. ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್​ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಗೃಹಲಕ್ಷ್ಮಿ ಹಣ ಎಲ್ಲಿ ? ಜನರು ಉಗಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಂಡ್ಯ ಜನರು ಬುದ್ದಿ ಕಲಿಸುತ್ತಾರೆ? ಶಕ್ತಿ ಯೋಜನೆ ಮಹಿಳೆಯ ಗುದ್ದಾಟ ತಂದಿಟ್ಟಿದ್ದಿರಿ. ಬಸ್ ಗಳ ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದಾರೆ. ಅಧಿಕಾರಿಗಳನ್ನ ಸಂಕಷ್ಟಕ್ಕೆ ಸಿಲುಕಿಸಿದ್ದಿರಿ. ಗ್ಯಾರಂಟಿ ಸರಿಯಾಗಿ ಕೊಡದಿದ್ದರೆ ಜೆಡಿಎಸ್ ನಿಮ್ಮ ಮನೆಗೆ ಮುತ್ತಿಗೆ ಹಾಕ್ತೇವೆ. ದೇವೇಗೌಡ್ರು ನೇತೃತ್ವದಲ್ಲಿ ರಾಜ್ಯದ ಜನರ ಪರ ನಿಲ್ಲುತ್ತೇವೆ. ಹಾಲಿನ ಪ್ರೋತ್ಸಾಹ ಧನ 5 ರೂಪಾಯಿ ಕೊಡ್ತಿಲ್ಲ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರದ ದರ್ಪದಿಂದ ಮುಖ್ಯಮಂತ್ರಿ ಕುರ್ಚಿಗೆ ಗುದ್ದಾಟ ನಡೆಯುತ್ತಿದೆ. ಜನರಿಗೆ ನ್ಯಾಯ ಕೊಡಲ್ಲ, ಇವರು ಅಂಗಿ ಪಟ್ಟಿಗೆ ಕೈಹಾಕಿ ಹೋರಾಟ ಮಾಡ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Tags: address to congressbjp vs congresscongresscongress jds alliancecongress speechcongress speech newscongress vs bjpcongress vs jds in karnatakadonald trump congresshd kumaraswamy on congressJDSjoint session of congressKarnataka Congresskarnataka floor test : bjp vs congress-jdspresident trump congresstrump address to congresstrump congresstrump congress addresstrump congress speechyediyurappa vs congress
Previous Post

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿಯ ಹೊಸ ಮೈಲಿಗಲ್ಲು

Next Post

ಯೂ ಟ್ಯೂಬರ್​ ಸಮೀರ್​ ವಿರುದ್ಧ ಪೊಲೀಸ್​ ಕ್ರಮಕ್ಕೆ ತಡೆಯಾಜ್ಞೆ..

Related Posts

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?
Top Story

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

by ಪ್ರತಿಧ್ವನಿ
April 19, 2026
0

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನ, ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಯೂ ಟ್ಯೂಬರ್​ ಸಮೀರ್​ ವಿರುದ್ಧ ಪೊಲೀಸ್​ ಕ್ರಮಕ್ಕೆ ತಡೆಯಾಜ್ಞೆ..

ಯೂ ಟ್ಯೂಬರ್​ ಸಮೀರ್​ ವಿರುದ್ಧ ಪೊಲೀಸ್​ ಕ್ರಮಕ್ಕೆ ತಡೆಯಾಜ್ಞೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada