2023ರ ಚುನಾವಣೆಯಲ್ಲಿ ಗೆದ್ದು ಹೇಗಾದರು ಮಾಡಿ ಸ್ವಂತ ಬ;ದ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಜೆಡಿಎಸ್ ಪಕ್ಷವು ತಮ್ಮ ಸಾಮರ್ಥ್ಯವನ್ನ ಪ್ರದರ್ಶಿಸಲು ಮುಂದಾಗಿದೆ.
ಹಿಂದೆ ತನ್ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ನಾಯಕರು ಯೋಜನೆ ರೂಪಿಸಿದದಾರೆ ಎಂದು ತಿಳಿದು ಬಂದಿದೆ. ವಿಧಾನಪರಿಷತ್, ಉಪಚುನಾವಣೆ ಹಾಗೂ ರಾಜ್ಯಸಭೆ ಚುನವಣೆ ಸೋಲಿನ ಬಳಿಕ ಪುಟ್ಟಿದೇಳಲು ಸಜ್ಜಾಗಿರುವ ತೆನೆ ನಾಯಕರು ಮತ್ತೊಮ್ಮೆ ತಮ್ಮ ಭದ್ರಕೋಟೆಯಲ್ಲಿ ಹಿಡಿತ ಸಾಧಿಸಲು ಮುಂದಾಗಿದ್ದಾರೆ.
ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶವನ್ನ ಹಮ್ಮಿಕೊಳ್ಳಲು ಜೆಡಿಎಸ್ ಈಗಾಗಲೇ ತಯಾರಿ ನಡೆಸಿದೆ ಎಂದು ತಿಳಿದು ಬಂದಿದೆ. ಸಮಾವೇಶಕ್ಕೆ ಬರುವ ಜನತೆಗೆ ಬಾಡೂಟವನ್ನ ಹಾಕಿಸಲು ಸಹ ನಾಯಕರು ಚಿಂತನೆ ನಡೆಸಿದ್ದು ಇದಕ್ಕಾಗಿ 4ಟನ್ ಮಟನ್ ಹಾಗೂ 4ಟನ್ ಚಿಕನ್ ಉಟವನ್ನ ಹಾಕಿಸಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಕುರಿತು ಭಾನುವಾರ ಮದ್ದೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಷ್.ಡಿ.ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿಗೆ ರಾಜ್ಯದ ಅನೇಕ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ನಿಖಿಲ್ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂದು ಹಾಲಿ ಶಾಸಕ ಡಿ.ಸಿ.ತಮ್ಮಣ್ಣ ಜತೆಗೂಡಿ ನೂರಾರು ಕಾರ್ಯಕರ್ತರು ಕುಮಾರಸ್ವಾಮಿಯವರನ್ನು ಒತ್ತಾಯಿಸಿದ್ದಾರೆ.