• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಹೆಸರಿನ ಅಭ್ಯರ್ಥಿ ನಿಲ್ಲಿಸಲು ಮುಂದಾಯ್ತ ಜೆಡಿಎಸ್?

ನಚಿಕೇತು by ನಚಿಕೇತು
November 30, 2021
in ಕರ್ನಾಟಕ, ರಾಜಕೀಯ
0
ಮಂಡ್ಯ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಹೆಸರಿನ ಅಭ್ಯರ್ಥಿ ನಿಲ್ಲಿಸಲು ಮುಂದಾಯ್ತ ಜೆಡಿಎಸ್?
Share on WhatsAppShare on FacebookShare on Telegram

ಮಂಡ್ಯ ವಿಧಾನಪರಿಷತ್ ಚುನಾವಣೆ ದಿನೇ ದಿನೇ ರಂಗೇರುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳು ಸುಮಲತಾ ವಿರುದ್ದ ಎಣೆದಿದ್ದ ನೇಮ್ ಪಾಲಿಟಿಕ್ಸ್ ತಂತ್ರಗಾರಿಕೆಯನ್ನ ಬಿಜೆಪಿ ಅಭ್ಯರ್ಥಿ ಮೇಲೆ ಮತ್ತೆ ಎಣೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಚಿವ ನಾರಾಯಣಗೌಡ ಈ ಗಿಮಿಕ್ ರಾಜಕಾರಣವನ್ನ ಬಹಿರಂಗಪಡಿಸಿದ್ದಾರೆ.

ಮಂಡ್ಯ ರಾಜಕಾರಣವೇ ಹಾಗೆ. ಯಾವುದೇ ಚುನಾವಣೆ ಬರ್ಲಿ ಸದಾ ಜಿದ್ದಾಜಿದ್ದಿನ ಕಣವಾಗಿ ಮಾರ್ಪಾಡಾಗುತ್ತದೆ. ಪ್ರತಿ ಚುನಾವಣೆಗಳಲ್ಲಿ ಕೇಳಿ ಬರ್ತಿದ್ದ ಮಾತು ಅಂದ್ರೆ ಅದು ಜೆಡಿಎಸ್-ಕಾಂಗ್ರೆಸ್ ಸಾಂಪ್ರಾದಾಯಿಕ ಎದುರಾಳಿ ಅಂತಾ. ಆದ್ರೆ ಕಳೆದ ಲೋಕಸಭಾ ಚುನಾವಣೆ ಹಾಗೂ ಕೆ.ಆರ್.ಪೇಟೆ ಉಪಚುನಾವಣೆ ಬಳಿಕ ಆ ಮಾತು ಉಲ್ಟಾ ಆಗಿದೆ. ಜೆಡಿಎಸ್-ಕಾಂಗ್ರೆಸ್‌ಗೆ ಸರಿಸಮನಾಗಿ ಬಿಜೆಪಿ ಸಿಡಿದೆದ್ದು ನಿಂತಿದೆ. ಅದರಿಂದ ಜೆಡಿಎಸ್ ಬಿಜೆಪಿ ವಿರುದ್ದ ಮಸಲತ್ತು ನಡೆಸಿ ನೇಮ್ ಪಾಲಿಟಿಕ್ಸ್ ಮಾಡ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ವಿರುದ್ದ ನೇಮ್‌ ತಂತ್ರಗಾರಿಕೆಯನ್ನ ಹೆಣೆದಿರೋದು ತಿಳಿದುಬಂದಿತ್ತು. ಸುಮಲತಾ ಹೆಸರಿನ ಮೂವರು ಮಹಿಳೆಯರನ್ನ ಕರೆತಂದು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ನಿಲ್ಲಿಸಲಾಗಿತ್ತು. ಇದೀಗ ಈ ತಂತ್ರಗಾರಿಕೆ ಮಾಡಿದವರು ದಳಪತಿಗಳು ಎಂಬ ಅಂಶ ಬಯಲಾಗಿದೆ. ಈ ರೋಚಕ ಕುತಂತ್ರವನ್ನ ಸಚಿವ ನಾರಾಯಣಗೌಡ ಇದೀಗ ಬಹಿರಂಗಪಡಿಸಿದ್ದಾರೆ. ಅಲ್ಲದೇ ಇದೀಗ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ವಿರುದ್ಧವೂ ಜೆಡಿಎಸ್‌ ಇಂಥದ್ದೇ ತಂತ್ರಗಾರಿಕೆ ಎಣೆದಿದೆ ಅಂತಲೂ ನಾರಾಯಣ ಗೌಡ ಆರೋಪಿಸಿದ್ದಾರೆ. ಬೂಕಹಳ್ಳಿ ಮಂಜು ವಿರುದ್ಧ ಮಂಜುನಾಥ್‌ ಜಿ.ಬಿ ಎಂಬುವವರನ್ನ ಪಕ್ಷೇತರ ಅಭ್ಯರ್ಥಿಯಾಗಿ ಎಂಎಲ್‌ಸಿ ಚುನಾವಣೆಯಲ್ಲಿ ನಿಲ್ಲಿಸಿದ್ದಾರೆ ಅಂತಾ ಆರೋಪಿಸಿದ್ದಾರೆ.

ADVERTISEMENT

ಇನ್ನು ಇದೇ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಬೂಕಳ್ಳಿ ಮಂಜು ಕೂಡಾ ಕಿಡಿಕಾರಿದ್ದಾರೆ. ಇದು ಎದುರಾಳಿಗಳ ಕುತಂತ್ರ, ಕುತಂತ್ರಕ್ಕೆ ಬೆಲೆ ಸಿಗಲ್ಲ. ನಾನು ಮತದಾರರ ಮನೆಗಳಿಗೆ ನೇರ ಪರಿಚಯ ಇದ್ದೇನೆ. ಜೆಡಿಎಸ್‌ನವರ ಗಿಮಿಕ್ ನೋಡಿದ್ರೆ ಬಿಜೆಪಿ ಮೇಲಿನ ಅವರಿಗಿರುವ ಭಯ ಗೊತ್ತಾಗುತ್ತೆ ಅಂತಾ ವ್ಯಂಗ್ಯವಾಡಿದ್ದಾರೆ.

ಸಕ್ಕರೆ ನಾಡು ಮಂಡ್ಯದಲ್ಲಿ ನನಗೆ ಸಿಕ್ಕ ಬೆಂಬಲಕ್ಕೆ ಹೆದರಿದ ದಳಪತಿಗಳು, ಕೊನೆಗೆ ಮತದಾರರ ದಿಕ್ಕು ತಪ್ಪಿಸಲು ಈ ಹೊಸ ತಂತ್ರ ಹೂಡಿದ್ದಾರೆ. ಆ ಮೂಲಕ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಭಾವಿಸಿದ್ದಾರೆ. ಬಿಜೆಪಿಯೇ ಇಲ್ಲಿ ಗೆಲ್ಲೋದು ಎಂದಿದ್ದಾರೆ ಬೂಕಹಳ್ಳಿ ಮಂಜು.

ಈ ಹಿಂದೆಯೂ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಅವರ ಮಗ ಸ್ಪರ್ಧಿಸಿದ್ದರು. ಇವರನ್ನು ಶತಾಯಗತಾಯ ಗೆಲ್ಲಿಸಲೇಬೇಕು ಎಂದು ಜೆಡಿಎಸ್ ಪಣ ತೊಟ್ಟಿತ್ತು. ಆಗ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಹಾದಿಗೆ ಅಡ್ಡಿಯಾಗಿ ನಿಂತಿದ್ದರು. ಸುಮಲತಾರನ್ನು ಸೋಲಿಸಬೇಕು ಎಂದು ಅಂದು ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಈ ಮೂವರು ‘ಸುಮಲತಾ’ರನ್ನು ಹುಟ್ಟುಹಾಕಿದ್ದೇ ಜೆಡಿಎಸ್ ಎಂಬ ಮಾತು ದಟ್ಟವಾಗಿ ಹರಡಿತ್ತು. ಮತದಾರರ ದಿಕ್ಕು ತಪ್ಪಿಸಲು ದಳಪತಿಗಳು ಹೂಡಿರುವ ಸಂಚು ಇದು ಎಂದು ವಿಶ್ಲೇಷಿಸಲಾಗುತ್ತಿತ್ತು.

ಕನಕಪುರದ ರಂಗನಾಥ ಬಡಾವಣೆಯ ಸುಮಲತಾ ದರ್ಶನ್, ಕೆ.ಆರ್.ಪೇಟೆ ತಾಲೂಕಿನ ಗೊರವಿ ಗ್ರಾಮದ ಸುಮಲತಾ ಮಂಜೇಗೌಡ, ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರಿನ ಸುಮಲತಾ ಸಿದ್ದೇಗೌಡ ಎಂಬುವವರು ಅಂದು ನಾಮಪತ್ರ ಸಲ್ಲಿಸಿದ್ದರು. ಅಲ್ಲದೇ ಚುನಾವಣೆಯಲ್ಲಿ 20 ಸಾವಿರಕ್ಕೂ ಹೆಚ್ಚು ಮತ ಇವರ ಪಾಲಾದವು.

ಈಗಲೂ  ಮತದಾರರಲ್ಲಿ ಗೊಂದಲ ಸೃಷ್ಟಿಸಲು ಜೆಡಿಎಸ್ ಇಂತಹ ಷಡ್ಯಂತ್ರದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಬೂಕಹಳ್ಳಿ ಮಂಜು ಹೆಸರಿನ ಅಭ್ಯರ್ಥಿಯನ್ನು ಕಣದಲ್ಲಿ ನಿಲ್ಲಿಸಿದೆ. ಬಿಜೆಪಿ ಅಭ್ಯರ್ಥಿ ಮಂಜುಗೆ ಬರಬೇಕಿದ್ದ ಮತಗಳನ್ನ ಹಾಗೂ ಪ್ರಾಶಸ್ತ್ಯ ಮತಗಳನ್ನ ಡಿವೈಡ್ ಮಾಡಲು, ನೇಮ್ ಕನ್ಪ್ಯೂಜ್ ತಂತ್ರ ಮಾಡಲಾಗಿದೆ ಅನ್ನೋದು ಆರೋಪ. ಆದ್ರೆ ಈ ತಂತ್ರಕ್ಕೆ ಮತದಾರರು ಯಾವ‌ ರೀತಿ ಮಣೆ ಹಾಕುತ್ತಾರೆ ಅನ್ನೋದೇ ಕುತೂಹಲ.

Tags: BJPCongress PartyJDSಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಉತ್ತರ ಕನ್ನಡದಲ್ಲಿ ಹೆಚ್ಚಾಯ್ತು ಮಹಿಳೆ, ಯುವತಿಯರ ನಾಪತ್ತೆ ಕೇಸುಗಳು; ಚುರುಕುಗೊಂಡ ಪೊಲೀಸ್ ತನಿಖೆ

Next Post

ಕೇಂದ್ರದಿಂದ ಕರ್ನಾಟಕಕ್ಕೆ 3,528 ಕೋಟಿ ರುಪಾಯಿ ಜಿಎಸ್‌ಟಿ ಪರಿಹಾರ ಬಾಕಿ

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಕೇಂದ್ರದಿಂದ ಕರ್ನಾಟಕಕ್ಕೆ 3,528 ಕೋಟಿ ರುಪಾಯಿ ಜಿಎಸ್‌ಟಿ ಪರಿಹಾರ ಬಾಕಿ

ಕೇಂದ್ರದಿಂದ ಕರ್ನಾಟಕಕ್ಕೆ 3,528 ಕೋಟಿ ರುಪಾಯಿ ಜಿಎಸ್‌ಟಿ ಪರಿಹಾರ ಬಾಕಿ

Please login to join discussion

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada