ಕಳೆದ ಕೆಲವು ತಿಂಗಳುಗಳ ಹಿಂದೆ NDA ಸಖ್ಯ ತೊರೆದು ವಿರೋಧ ಪಕ್ಷಗಳ ಮೈತ್ರಿಕೂಟ ಕೂಡಿಕೊಂಡಿರುವ ಜೆಡಿಯು ಮಾಜಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ವಿರುದ್ದ ಸರಣಿ ಆರೋಪಗಳನ್ನು ಮಾಡಿದೆ.
ಪ್ರಶಾಂತ್ ಕಿಶೋರ್ ಮೊದಲಿಗೆ ಬಿಜೆಪಿ ಪರ ಕೆಲಸ ಮಾಡುತ್ತಿದ್ದರು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಆರೋಪಿಸಿದ್ದಾರೆ.
ಅದೇ ರೀತಿ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಬಿಹಾರದಲ್ಲಿ ಅವರು ಪಕ್ಷದ ಪರ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ ಎಂದಿದ್ದಾರೆ.
ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಯಾವೆಲ್ಲಾ ಅಭಿವೃದ್ದಿ ಕೆಲಸಗಳಾಗಿವೆ ಎಂಬುದು ಜನತೆಗೆ ಗೊತ್ತಿದೆ. ಆ ಬಗ್ಗೆ ಅವರಿಂದ ನಮ್ಮಗೆ ಯಾವುದೇ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಕಿಶೋರ್ ಪಾದಯಾತ್ರೆ ಮಾಡಲು ಸಜ್ಜಾಗಿದ್ದಾರೆ ಅವರ ಯಾತ್ರೆಗೆ ಯಾವ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಬಹುದು. ಆದರೆ, ಕಿಶೋರ್ ಪರೋಕ್ಷವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಲಲನ್ ಸಿಂಗ್ ಆರೋಪಿಸಿದ್ದಾರೆ.